Homeಮುಖಪುಟಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

'ನಾನು ಒಂದ್‍ ಹೊಡೆದೆ ಅಂದ್ರೆ ಅಷ್ಟೇ, ಸುಡಾಗಾಡಲ್ಲಿ ನಿಮ್ಮ ಹೆಣ ಇರ್ತದೆ’ ಎಂಬ ಸಿನಿಮಾ ಸಂಭಾಷಣೆಯನ್ನು ಮಿಥುನ್‍ ರಾಜಕೀಯ ವೇದಿಕೆಯಿಂದ ಹೇಳಿದ್ದರು.

- Advertisement -
- Advertisement -

ಏಪ್ರಿಲ್-ಮೇನಲ್ಲಿ ನಡೆದೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದ ಬಾಲಿವುಡ್‍ ಮತ್ತು ಬಂಗಾಳಿ ಸಿನಿಮಾ ನಟ ಮಿಥುನ್ ಚಕ್ರವರ್ತಿಯವರನ್ನು ಕೊಲ್ಕೊತ್ತಾ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬಿಜೆಪಿಎಗೆ ಸೇರಿದ ನಂತರ ಮಾರ್ಚ್ 7ರಂದು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕೊತ್ತಾ ಪೊಲೀಸರು ಅವರನ್ನು ಪ್ರಶ್ನಿಸಿದ್ದಾರೆ.

ಏಪ್ರಿಲ್-ಮೇ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ ಭರ್ಜರಿ ಜಯವನ್ನು ದಾಖಲಿಸಿದ ನಂತರದ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಭಾಷಣವು ಪಾತ್ರ ವಹಿಸಿದೆ ಎಂದು ಎಫ್‍ಐಆರ್‌ನಲ್ಲಿ ಆರೋಪ ಮಾಡಲಾಗಿದೆ.

ಎಫ್‌ಐಆರ್ ರದ್ದು ಮಾಡಬೇಕು ಎಂದು ಮಿಥುನ್ ಚಕ್ರವರ್ತಿ ಕೊಲ್ಕೊತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಮಿಥುನ್‍ ಅವರನ್ನು ಆ ಭಾಷಣದ ಕುರಿತು ಪ್ರಶ್ನಿಸುವಂತೆ ನ್ಯಾಯಾಲಯ ತನಿಖಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ತಮ್ಮ ಭಾಷಣದಲ್ಲಿ ಚಲನಚಿತ್ರ ಸಂಭಾಷಣೆಗಳನ್ನು ಮಾತ್ರ ಹೇಳಿದ್ದೇನೆ ಮತ್ತು ಇವು ಅಕ್ಷರಶಃ ವಾಸ್ತವವಲ್ಲ ಎಂದು ಮಿಥುನ್‍ ಹೇಳಿಕೊಂಡಿದ್ದಾರೆ.

ಅವರ 2006ರ ಚಲನಚಿತ್ರ “ಎಂಎಲ್ಎ ಫಟಕೇಶ್ಟೋ”ದ ಒಂದು ಸಾಲನ್ನು ಎಫ್‍ಐಆರ್ ನಲ್ಲಿದೆ. ‘ನಾನು ಒಂದ್‍ ಹೊಡೆದೆ ಅಂದ್ರೆ ಅಷ್ಟೇ, ಸುಡಾಗಾಡಲ್ಲಿ ನಿಮ್ಮ ಹೆಣ ಇರ್ತದೆ’ ಎಂಬ ಸಿನಿಮಾ ಸಂಭಾಷಣೆಯನ್ನು ಮಿಥುನ್‍ ರಾಜಕೀಯ ವೇದಿಕೆಯಿಂದ ಹೇಳಿದ್ದರು.

ಹುಚ್ಚುಚ್ಚಾಗಿ ಹುರಿದುಂಬಿಸಿದ ಭಾಷಣದಲ್ಲಿ, ಅವರು ಈ ಸಾಲುಗಳನ್ನು ಸಹ ಹೇಳಿದ್ದಾರೆ: “ನಿರುಪದ್ರವ ಹಾವು ಅಂತ ನನ್ನನ್ನು ತಪ್ಪಾಗಿ ಗ್ರಹಿಸಬೇಡಿ, ನಾನು ಶುದ್ಧ ನಾಗರಹಾವು, ಒಮ್ಮೆ ಕಚ್ಚಿದರೆ ನೀವು ಫೋಟೊ ಅಷ್ಟೇ….’’

ಚುನಾವಣಾ ಫಲಿತಾಂಶದ ನಂತರ ಬಂಗಾಳದ ಹಲವಾರು ಭಾಗಗಳಲ್ಲಿ ತೃಣಮೂಲ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬಡಿದಾಟಗಳು ನಡೆದವು.

ಹಿಂಸಾಚಾರದಲ್ಲಿ ಕನಿಷ್ಠ 16 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ ತಿಂಗಳು ಹೇಳಿದ್ದರು.


ಇದನ್ನೂ ಓದಿ; ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...