Homeಚಳವಳಿಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ದ ದಾಖಲಾದ ಆರೋಪ ಕೈಬಿಟ್ಟ ಕೋರ್ಟ್

ಪತ್ರಕರ್ತ ಸಿದ್ದೀಕ್ ಕಪ್ಪನ್ ವಿರುದ್ದ ದಾಖಲಾದ ಆರೋಪ ಕೈಬಿಟ್ಟ ಕೋರ್ಟ್

- Advertisement -
- Advertisement -

ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಮಂಗಳವಾರ ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.

ಯುಪಿಯ ಹತ್ರಾಸ್‌‌ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ಅಕ್ಟೋಬರ್‌ 5 ರಂದು ತೆರಳಿದ್ದ ಸಿದ್ದೀಕ್ ಕಪ್ಪನ್‌ ಅವರನ್ನು, ದಾರಿ ಮಧ್ಯದಲ್ಲಿ ಪಿಎಫ್‌ಐ ಜೊತೆಗೆ ಸಂಪರ್ಕವಿದೆ ಎಂದು ಶಂಕಿಸಿ ಬಂಧಿಸಲಾಗಿತ್ತು. ಅವರ ಜೊತೆಗೆ ಅವರೊಂದಿಗೆ ಇದ್ದ ಮೂವರನ್ನೂ ಬಂಧಿಸಲಾಗಿತ್ತು.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಅವರ ಭೇಟಿಯಿಂದಾಗಿ, ಶಾಂತಿ ಕದಡುವ ಅಪಾಯವಿದೆ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು. ಆದರೆ ನಂತರ ದೇಶದ್ರೋಹ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು(ಯುಎಪಿಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಉಲ್ಲಂಘನೆಯ ಆರೋಪಗಳನ್ನು ಹೊರಿಸಲಾಗಿತ್ತು.

ಕಾನೂನಿನಡಿಯಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವ ಮಿತಿ ಮುಗಿದ ಕಾರಣ, ನಾಲ್ವರು ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಕೈಬಿಡಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ತಿಳಿಸಿದ್ದಾರೆ.

ಇಂದು ಮಾಧ್ಯಮದ ಜೊತೆ ಮಾತನಾಡಿದ ಪತ್ರಕರ್ತ ಸಿದ್ದೀಕ್ ಕಪ್ಪನ್, “ನಾನು ಇನ್ನೂ ನಮ್ಮ ಸಂವಿಧಾನವನ್ನು ನಂಬಿದ್ದೇನೆ, ಆದರೆ ನ್ಯಾಯವನ್ನು ವಿಳಂಬ ಮಾಡಲಾಗಿದೆ. ಇದು ನಕಲಿ ಪ್ರಕರಣ, ಸಂಪೂರ್ಣ ನಕಲಿ ಪ್ರಕರಣ” ಎಂದು ಹೇಳಿದ್ದಾರೆ.

ಇದೇ ವೇಳೆ ಮತ್ತೊಬ್ಬ ಆರೋಪಿ ಮಾತನಾಡಿ, “ನಮಗೆ ಯಾರೊಂದಿಗೂ ಸಂಪರ್ಕವಿಲ್ಲ, ನಕಲಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಯೋಗಿ ಸರ್ಕಾರ ಸರ್ವಾಧಿಕಾರ ನಡೆಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

153 ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ), 124 ಎ (ದೇಶದ್ರೋಹ), ಐಪಿಸಿಯ 120 ಬಿ (ಪಿತೂರಿ), ಯುಎಪಿಎ 17/18 (ಭಯೋತ್ಪಾದಕ ಕೃತ್ಯಕ್ಕಾಗಿ ಹಣವನ್ನು ಸಂಗ್ರಹಿಸುವುದು) ಮತ್ತು ಐಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳು ಕಳೆದ ಅಕ್ಟೋಬರ್ 7 ರಿಂದ ಜೈಲಿನಲ್ಲಿದ್ದಾರೆ.

ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರು ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ಹತ್ರಾಸ್‌ನಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿದ್ದಿಕ್ ಕಪ್ಪನ್ ಪ್ರಕರಣದಲ್ಲಿ ಆರೋಪಿ ಪದ ಬಳಸುವಂತಿಲ್ಲ. ಅವ್ರು ಆಪಾಧಿತರು.

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...