Homeಅಂಕಣಗಳುಬಹುಜನ ಭಾರತ: ನಗೆಗೆ ಹೊಗೆ ಇಡುತ್ತಿದ್ದಾರೇಕೆ ನರೇಂದ್ರ ಮೋದಿ?

ಬಹುಜನ ಭಾರತ: ನಗೆಗೆ ಹೊಗೆ ಇಡುತ್ತಿದ್ದಾರೇಕೆ ನರೇಂದ್ರ ಮೋದಿ?

- Advertisement -
- Advertisement -

ಪ್ರಧಾನಿಯವರನ್ನು ಟೀಕಿಸಿ ವ್ಯಂಗ್ಯಚಿತ್ರ ರಚಿಸಿದರೆಂದು ಪ್ರಖರ ವ್ಯಂಗ್ಯಚಿತ್ರಕಾರ ಮಂಜುಲ್ ಅವರನ್ನು ಸರ್ಕಾರ ಬೇಟೆಯಾಡಿದೆ.

ಮಂಜುಲ್ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಉದ್ಯಮ ಸಮೂಹಕ್ಕೆ ಸೇರಿದ ನೆಟ್ವರ್ಕ್-18 ಮಂಜುಲ್ ಅವರನ್ನು ಕೆಲಸದಿಂದ ತೆಗೆದುಹಾಕಿದೆ. ಈ ವ್ಯಂಗ್ಯಚಿತ್ರವನ್ನು ಮಂಜುಲ್ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಇದೊಂದೇ ಅಲ್ಲ, ಮೋದಿ ಸರ್ಕಾರವನ್ನು ಕಟು ಟೀಕೆಗೆ ಗುರಿಪಡಿಸಿರುವ ನೂರಾರು ವ್ಯಂಗ್ಯಚಿತ್ರಗಳನ್ನು ಅವರು ಬರೆದಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ. ಟ್ವಿಟರ್ ಅವರಿಗೆ ನೋಟಿಸ್ ನೀಡಿದೆ. ಅವರ ಟ್ವಿಟರ್ ಖಾತೆಗೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಕೇಂದ್ರ ಸರ್ಕಾರ ’ಕಾನೂನಾತ್ಮಕ ವಿನಂತಿ’ಯನ್ನು ತನಗೆ ಮಾಡಿಕೊಂಡಿರುವುದಾಗಿ ಟ್ವಿಟರ್ ನೋಟಿಸಿನಲ್ಲಿ ವಿವರಿಸಿದೆ.

ಮಂಜುಲ್

ಭಾರತದ ವ್ಯಂಗ್ಯಚಿತ್ರ ಕಲೆಯ ಪಿತಾಮಹ ಎಂದೇ ಹೆಸರಾದವವರು ಕೇಶವನ್ ಶಂಕರ ಪಿಳ್ಳೆ.

ನೆಹರೂ ಅವರನ್ನು ಲೇವಡಿ ಮಾಡಿ ರೇಗಿಸುವ ನಾಲ್ಕು ಸಾವಿರದಷ್ಟು ವ್ಯಂಗ್ಯಚಿತ್ರಗಳನ್ನು ಶಂಕರ ಪಿಳ್ಳೆ ತಮ್ಮ ಪ್ರಸಿದ್ಧ ನಿಯತಕಾಲಿಕ ’ಶಂಕರ್ಸ್ ವೀಕ್ಲಿ’ಯಲ್ಲಿ ಪ್ರಕಟಿಸಿದ್ದುಂಟು. ವಿಡಂಬನೆ-ವಿನೋದದಿಂದ ತಿವಿದರೂ ಸವಿದು ನಗುವ ಗುಣ ನೆಹರೂಗಿತ್ತು.

ನೆಹರೂ ನಂತರ ನಮ್ಮ ರಾಜಕಾರಣಿಗಳ ಪೈಕಿ ಅತಿ ಹೆಚ್ಚು ವ್ಯಂಗ್ಯಚಿತ್ರಗಳ ವಿಷಯವಸ್ತು ಆದವರು ಪ್ರಾಯಶಃ ಲಾಲೂ ಪ್ರಸಾದ್ ಯಾದವ್. ಆದರೆ ಈತ ಸರ್ವಾಧಿಕಾರಿಯಂತೆ ಉರಿದೆದ್ದ ಉದಾಹರಣೆಯಿಲ್ಲ.

ನಗೆಯಾಡುವ ಅವಕಾಶಗಳನ್ನು ಪ್ರಜೆಗಳಿಗೆ ನಿರಾಕರಿಸುವುದು ಸರ್ವಾಧಿಕಾರೀ ಆಡಳಿತದ ಪ್ರಧಾನ ಲಕ್ಷಣಗಳಲ್ಲೊಂದು. ತನ್ನ ಕುರಿತೇ ನಕ್ಕುಬಿಟ್ಟರೆ ಎಂಬ ಅಳುಕು ಸರ್ವಾಧಿಕಾರಿಯನ್ನು ಸದಾಸರ್ವದಾ ಕಾಡುತ್ತಿರುತ್ತದೆ. ಅಡಾಲ್ಫ್ ಹಿಟ್ಲರನ ಹಯಾಮಿನಲ್ಲಿ ಒಂದು ಒಳ್ಳೆಯ ಕಾಮಿಡಿ, ಒಂದು ಉತ್ತಮ ವ್ಯಂಗ್ಯಚಿತ್ರ, ಒಂದೇ ಒಂದು ವಿಡಂಬನೆ, ಅಣಕು ಕುಹಕದ ಪ್ರಸಂಗವೂ ಜರ್ಮನ್ನರಿಗೆ ನೋಡಲು ಸಿಗಲಿಲ್ಲ ಎಂದಿದ್ದಾರೆ ಶಂಕರಪಿಳ್ಳೆ. ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿ ಘೋಷಣೆಯ ನಂತರ ’ವೀಕ್ಲಿ’ಯನ್ನು ಬಂದ್ ಮಾಡಿದ್ದ ಸಂದರ್ಭವದು.

ವ್ಯಂಗ್ಯಚಿತ್ರಗಳು ಮತ್ತು ತಮ್ಮನ್ನು ಕುರಿತು ತಾವೇ ನಗುವ ಸ್ವಸ್ಥಮನಸ್ಸಿನ ಪ್ರವವೃತ್ತಿಯ ಕುರಿತು ನೆಹರೂ ಮತ್ತು ಖುದ್ದು ಶಂಕರ ಪಿಳ್ಳೆ ಹೇಳಿರುವ ವಿವೇಕದಮಾತುಗಳು ಅರ್ಧ ಶತಮಾನದಷ್ಟು ಹಳೆಯವಾದರೂ ಅತ್ಯಂತ ಪ್ರಸ್ತುತ.

‘Don`t spare me Shankar… Hit me, hit me hard’ ಎಂದು ಶಂಕರ ಪಿಳ್ಳೆಯವರಿಗೆ ಹೇಳುತ್ತಿದ್ದರು ನೆಹರೂ. ಅವರ ಈ ಕೆಳಗಿನ ಮಾತುಗಳು ಇಂದಿಗೂ ಪ್ರಸ್ತುತ.

ನಮ್ಮಲ್ಲಿ ಬಹಳ ಮಂದಿ ಶಂಕರ್ ವ್ಯಂಗ್ಯಚಿತ್ರಕ್ಕಾಗಿ ನಿತ್ಯ ಕಾಯುತ್ತಿದ್ದೆವು. ಪತ್ರಿಕೆಯನ್ನು ಕೈಗೆತ್ತಿಕೊಳ್ಳುತ್ತಿದ್ದಂತೆ ಆ ದಿನದ ಪ್ರಮುಖ ಸುದ್ದಿಯನ್ನು ಬಿಟ್ಟು ನೇರವಾಗಿ ಶಂಕರ್ ವ್ಯಂಗ್ಯಚಿತ್ರ ಇರುತ್ತಿದ್ದ ಪುಟ ತೆರೆಯುತ್ತಿದ್ದೆವು. ಮನಸ್ಸನ್ನು ಮುದಗೊಳಿಸುತ್ತಿದ್ದುದು ಮಾತ್ರವಲ್ಲ, ಪ್ರಚಲಿತ ವಿದ್ಯಮಾನಗಳಿಗೆ ಒಳನೋಟವನ್ನು ಕಟ್ಟಿಕೊಡುತ್ತಿದ್ದವು ಶಂಕರ್ ವ್ಯಂಗ್ಯಚಿತ್ರಗಳು.

“ಶಂಕರ್ ಬಿಡಿಸುತ್ತಿದ್ದ ವ್ಯಂಗ್ಯಚಿತ್ರಗಳು ಸಮಾಜಸೇವೆಯೇ ಹೌದು. ನಾವೆಲ್ಲ ಋಣಿಯಾಗಿರಬೇಕಾದ ಸೇವೆಯಿದು. ಒಂದಲ್ಲ ಒಂದು ಹಂತದಲ್ಲಿ ಸ್ವಾರ್ಥಕೇಂದ್ರಿತರೂ ಬೊಗಳೆ ಬಿಟ್ಟು ಬಡಾಯಿ ಕೊಚ್ಚಿಕೊಳ್ಳುವವರೂ ಆಗಿಬಿಡಬಹುದಾದ ನಮ್ಮಂತಹವರ ಕಣ್ಣಿಗೆ ಕಟ್ಟುವ ಪೊರೆಯನ್ನು
ಹರಿಯುವುದು ಒಳಿತಿನ ಕೆಲಸ” ಎಂದಿದ್ದರು ನೆಹರೂ.

ಅಂದಿನ ರಾಜಕಾರಣಿಗಳು ಮತ್ತು ಮಂತ್ರಿಗಳ ವಲಯದಲ್ಲಿ ಡೆಲ್ಲಿ ಡೆವಿಲ್ ಎಂದೇ ಹೆಸರಾಗಿದ್ದರು ಶಂಕರ ಪಿಳ್ಳೆ. ಅವರು ತಮ್ಮ ಪತ್ರಿಕೆಯ ಓದುಗರನ್ನು ಉದ್ದೇಶಿಸಿ ಬರೆದಿದ್ದ ಈ ಕೆಳಕಂಡ ಮಾತುಗಳನ್ನು ಮತ್ತೆ ನೆನೆಯಬೇಕಿದೆ.

ಕೇಶವನ್ ಶಂಕರ ಪಿಳ್ಳೆ

“ನೀವು ನಗಲು ನೆರವಾಗೋದು ನಮ್ಮ ಪತ್ರಿಕೆಯ ಉದ್ದೇಶ. ಜಗತ್ತಿನ ಇತರೆ ದೇಶಗಳ ಜನ ಸಂಘರ್ಷಗಳ ನಡುವೆಯೂ ಮನಸಾರೆ ನಗುತ್ತಿದ್ದಾರೆ. ವಿನೋದ ವಿಡಂಬನೆಗಳೇ ಇಲ್ಲದ ಪೀಳಿಗೆ ನಮ್ಮದು, ಒಂಥರಾ ವರ್ಣರಹಿತ ಬೊಂಬೆಗಳ ಮೆರವಣಿಗೆ. ನಗುವ ವರವನ್ನು ವರ್ಷಗಳ ಹಿಂದೆಯೇ ಕಳೆದುಕೊಂಡವರು. ಜಡ್ಡಿನಂತಹ ಗಾಂಭೀರ್ಯವನ್ನು ಗಳಿಸಿಕೊಂಡುಬಿಟ್ಟಿದ್ದೇವೆ. ಹೆಚ್ಚೆಂದರೆ ಕೃತಕ ಹುಸಿನಗೆ ಧರಿಸಿ ಹಲ್ಲು ಕಿರಿದೇವು. ಆಕಳಿಸಿ ಕಿಸಿಕಿಸಿ ನಕ್ಕೇವು. ಹೊಟ್ಟೆ ತುಂಬ ನಗುವುದೆಂದರೆ ಅಸಭ್ಯವೆಂದು ತಿಳಿದವರು ನಾವು, ನಮ್ಮ ಕುರಿತು ನಾವೇ ನಗುವುದಂತೂ ಇಲ್ಲವೇಇಲ್ಲ. ಇತರರ ಕುರಿತು ಮತ್ತು ನಿಮ್ಮನ್ನೇ ಕುರಿತು ನಗುವುದಕ್ಕೆ ನೆರವಾಗಲಿದೆ ಶಂಕರ್ಸ್ ವೀಕ್ಲಿ… ಭಾರೀ ಬೋರುಗಳ ದೇಶವಾಗಬಾರದು ನಾವು.. ಜನರನ್ನು ನಗಿಸೋ ಪಾಲಿಸಿ ಬಿಟ್ರೆ ಈ ಪ್ರಯತ್ನದ ಹಿಂದೆ ಬೇರೆ ಯಾವ ಪಾಲಿಸಿಯೂ ಇಲ್ಲ. ನಮ್ಮನ್ನು ಏನೆಂದು ಬೇಕಾದರೂ ಕರೀರಿ. ಸೋಷಲಿಸ್ಟರು, ಕಮ್ಯುನಿಸ್ಟರು, ಹುಚ್ಚರು ಇಲ್ಲವೇ ವಕ್ರರು… ಆದ್ರೆ ನಗುವಿಗೆ ಸೈದ್ಧಾಂತಿಕ ಇಲ್ಲವೇ ಇಸಮ್ಮುಗಳ ಅಂಟು ಇರೋದು ಸಾಧ್ಯ ಇಲ್ಲ.

ಪರಿಸ್ಥಿತಿ ಬದಲಾಗಿದೆ. ಈಗ ಎಲ್ಲವೂ ಸಂಪೂರ್ಣ ಇಂಡಿಯನ್. ಇಂಗ್ಲಿಷ್ ಸಾಹೇಬರಿಗೆ ಬದಲಾಗಿ ಇಂಡಿಯನ್ ಸಾಹೇಬರುಂಟು. ನಮ್ಮ ದೌರ್ಬಲ್ಯಗಳು ರಾಷ್ಟ್ರೀಯ ದೌರ್ಬಲ್ಯಗಳು, ನಗಬೇಕು ಇಲ್ಲವೇ ಸಾಯಬೇಕು ನಾವು. ಹಾಸ್ಯಾಸ್ಪದ ಸ್ವಸಂತುಷ್ಟಿಯನ್ನು ನಗೆಯಲ್ಲಿ ಉಡಾಯಿಸಬೇಕು. ನಗಬೇಕೆಂದರೆ ತಲೆ ಕೆಳಗಾಗಿ ನಿಲ್ಲಬೇಕಿಲ್ಲ. ಪಾದ ಊರಿಯೇ ನಿಲ್ಲಿರಿ. ಬದುಕು ತಲೆ ಊರಿ ತಿರುಗುವುದನ್ನು ನೋಡಿ ಅದರ ಹತ್ತು ಹಲವು ಮುಖಗಳನ್ನು ಕಂಡು ಮನಸಾರೆ ನಗೋಣ.

“ಆಹಾ ಎಂಥಾ ಬದುಕಿದು! ಬುಶ್ಟ್ ಶರ್ಟ್ ನಾಗರಿಕತೆ, ಕಾಕ್ಟೇಲ್ಸ್ ಮತ್ತು ಮೊನಾಲಿಸಾ ನಗೆ ಹೊತ್ತ ಮೇಮ್ ಸಾಹೇಬ್, ಸೆಕ್ರೆಟೆರಿಯಟೀನಲ್ಲಿ ಖಾಲಿ ರುಂಡಗಳನ್ನು ಹೊತ್ತು ತಿರುಗುವ ಭ್ರಷ್ಟ ಮುಂಡಗಳು. ಕಪಟ ನಗುವಿನ ಕಳ್ಳಸಂತೆಕೋರರು, ಜನರ ಆದಾಯ ವೆಚ್ಚಗಳನ್ನು ನಿಯಂತ್ರಿಸುವ ಬಿಗ್ ಬಿಸಿನೆಸ್ಸುಗಳು, ಸಡಗರದ ಕುಪ್ಪಳಿಕೆಯ ರಾಜಕಾರಣಿಗಳು, ಅರಮನೆ ಕ್ರಾಂತಿಗಳ ಪ್ರಮೋಟರುಗಳು, ದೇಶೀ ರುಚಿಗಳು, ವಿದೇಶೀ ವಿಲಾಸಗಳು, ಯಾತಕ್ಕಾಗಿ ಇಂಥ ಕತ್ತೆ ಚಾಕರಿಯೆಂದು ಅರಿಯದೆ ಗುಲಾಮಗಿರಿ ಮಾಡ್ತಿರೋ ಶ್ರಮಜೀವಿ, ಏರುತ್ತಿರುವ ಸಂಬಳ-ಕೂಲಿಯ ಜೊತೆಜೊತೆಗೇ ಜಿಗಿಯುತ್ತಿರುವ ದರಗಳು, ಲೈಸೆನ್ಸ್ ಇರೋ ಲಂಚಗುಳಿತನ ಮತ್ತು ವಿಶೇಷಾಧಿಕಾರ ಎಂಬಂತಹ ಲಾಭಬಡುಕತನ, ಅರೆನಿಯಂತ್ರಿತ ಬದುಕಿನ ಅರಾಜಕತೆ, ಜನಿಸಲು ಒಲ್ಲದ ಸಂಸ್ಕೃತಿಯೊಂದರ ಎಲ್ಲ ತಮಾಷೆ ಮತ್ತು ವಿಕಟ ಹಾಸ್ಯ. ಬದುಕನ್ನು ನೋಡಬೇಕಿದ್ದರೆ ಅದು ಆರಾಮವಾಗಿ ಹರಿಯುವುದನ್ನು ಕಾಣಬೇಕೇ ವಿನಾ ಅದರ ಪಾರ್ಶ್ವನೋಟವನ್ನಷ್ಟೇ ಕಂಡರೆ ಸಾಲದು. ಒಂದಷ್ಟು ಪೀಡನೆ ಇಲ್ಲವೇ ಕೇಡಿಗತನ, ಪ್ರಾಯಶಃ ಪ್ರೀತಿ ಸಹಿಷ್ಟುತೆಗಿಂತ ಹೆಚ್ಚು ಪೀಡನೆಯೇ ಎನಿಸೀತು. ಆದರೆ ನಗೆಗೆ ಲಾಯಕ್ಕಾದ ಎಲ್ಲವನ್ನು ಕಂಡು ನಗಲೇಬೇಕು”.


ಇದನ್ನೂ ಓದಿ: ಡೇಟಾ ಖೋಲಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...