Homeಮುಖಪುಟಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

- Advertisement -
- Advertisement -

ತಮಿಳುನಾಡಿನ ಡಿಎಂಕೆ ಸರ್ಕಾರ ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’(Centre Government) ಎಂದು ಕರೆಯುವುದನ್ನು ನಿಲ್ಲಿಸಿದ್ದು, ಬದಲಾಗಿ ‘ಒಕ್ಕೂಟ ಸರ್ಕಾರ’(Union Government) ಎಂದು ಉಲ್ಲೇಖಿಸುತ್ತಿದೆ. ಕೆಲವು ಬಿಜೆಪಿ ಬೆಂಬಲಿಗರು ಇದನ್ನು ಎನ್‌ಡಿಎ ನೇತೃತ್ವದ ಸರ್ಕಾರದ ವಿರುದ್ಧದ ರಾಜಕೀಯ ನಡೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಎಂಕೆ, ತಾನು ಸಂವಿಧಾನದಲ್ಲಿ ಬರೆಯಲ್ಪಟ್ಟದ್ದನ್ನು ಮಾತ್ರ ಅನುಸರಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದೆ.

ಜನಪ್ರಿಯ ನಂಬಿಕೆಗೆ ವಿರುದ್ಧವಾದ ನಡೆಯನ್ನು ಸಂವಿಧಾನ ತಜ್ಞ ಸುಭಾಷ್ ಕಶ್ಯಪ್ ಸಮರ್ಥಿಸಿದ್ದಾರೆ. ‘ಕೇಂದ್ರ’ ಎಂಬ ಪದವು ಸಂವಿಧಾನದಲ್ಲಿಲ್ಲ ಮತ್ತು ಅದನ್ನು ಬಳಸುವುದು ನಿಖರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

‘ಕೇಂದ್ರ’ ಎಂಬ ಪದವು ವೃತ್ತದ ಮಧ್ಯದಲ್ಲಿರುವ ಒಂದು ಬಿಂದುವಿಗೆ ಹೇಳಲಾಗುತ್ತದೆ. ಸರ್ಕಾರವನ್ನು ಉಲ್ಲೇಖಿಸಲು ‘ಕೇಂದ್ರ’ ಎಂಬ ಪದವನ್ನು ಬಳಸುವುದರಿಂದ ಸರ್ಕಾರವು ಕೇಂದ್ರ ಬಿಂದುವಾಗಿದೆ ಮತ್ತು ರಾಜ್ಯಗಳು ಅದರ ಪರಿಧಿಯಲ್ಲಿವೆ ಎಂದು ಸೂಚಿಸುತ್ತದೆ. ಮತ್ತೊಂದೆಡೆ, ‘ಒಕ್ಕೂಟ’ ಎಂಬ ಪದವು ‘ಇಡೀ ವಲಯ’ವನ್ನು ಉಲ್ಲೇಖಿಸುತ್ತದೆ. ‘ಒಕ್ಕೂಟ ಸರ್ಕಾರ’ ಎಂಬ ಪದವನ್ನು ಬಳಸುವುದರಿಂದ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯಗಳನ್ನೂ ಉಲ್ಲೇಖಿಸಿದಂತಾಗುತ್ತದೆ.

‘ಕೇಂದ್ರ’ ಎಂಬ ಪದವು ಭಾರತೀಯ ಸಂವಿಧಾನದಲ್ಲಿಲ್ಲ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಸಂವಿಧಾನದ ಕರ್ತೃರು ಅದನ್ನು ಉದ್ದೇಶಪೂರ್ವಕವಾಗಿ ತ್ಯಜಿಸಿ ‘ಯೂನಿಯನ್’ ಪದವನ್ನು ಬಳಸಿದ್ದಾರೆ.

‘ಕೇಂದ್ರ’ ಎಂಬ ಪದವು ವಸಾಹತುಶಾಹಿ ಕಾಲದಿಂದ ಉಳಿದಿದೆ ಬಂದಿದೆ ಎಂದು ಕಶ್ಯಪ್ ಹೇಳಿದ್ದಾರೆ. ನವದೆಹಲಿಯ ಸೆಕ್ರೆಟರಿಯಟ್ ಕಟ್ಟಡದಲ್ಲಿ ಕೆಲಸ ಮಾಡುವ ಅಧಿಕಾರಿ ವರ್ಗದವರು ‘ಕೇಂದ್ರ ಕಾನೂನುಗಳು’ ಮತ್ತು ‘ಕೇಂದ್ರ ಶಾಸಕಾಂಗ’ ಮುಂತಾದ ಪದಗಳನ್ನು ಪಾಲಿಸುತ್ತಾ ಬಳಸುತ್ತಲೇ ಇದ್ದಾರೆ.

ಇದನ್ನೂ ಓದಿ: ಪ್ರಚೋದನಾಕಾರಿ ಚುನಾವಣಾ ಭಾಷಣ: ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಭಾರತದ ಸಂವಿಧಾನದಲ್ಲಿನ ಅಧ್ಯಾಯವು ನಿರ್ದಿಷ್ಟವಾಗಿ ‘ಒಕ್ಕೂಟ ಸರ್ಕಾರ’, ‘ಒಕ್ಕೂಟ ಮತ್ತು ರಾಜ್ಯ ಸಂಬಂಧಗಳು’ ಮತ್ತು ‘ಒಕ್ಕೂಟ ಶಾಸಕಾಂಗ’ ಎಂಬ ಪದಗಳನ್ನು ಬಳಸುತ್ತದೆ ಎಂದು ಸಂವಿಧಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಭಾರತವು ಫೆಡರಲ್ ಸರ್ಕಾರವಾಗಿದೆ, ಒಕ್ಕೂಟ ಸರ್ಕಾರವನ್ನು ‘ಕೇಂದ್ರ’ ಎಂದು ಕರೆಯುವುದರಲ್ಲಿ ಅರ್ಥವಿಲ್ಲ, ಏಕೆಂದರೆ ಇದು ದೆಹಲಿಯು ಕೇಂದ್ರವಾಗಿದ್ದು, ಉಳಿದೆ ಸರ್ಕಾರಗಳ ಮೇಲೆ ಅಧಿಕಾರವನ್ನು ಹೊಂದಿದೆ ಎಂಬ ತಪ್ಪು ಅಭಿಪ್ರಾಯವನ್ನು ನೀಡುತ್ತದೆ ಎಂದು ಅವರು ಸೂಚಿಸುತ್ತಾರೆ.

ಈ ಪದವು ರಾಜ್ಯಗಳಿಗೆ ಸಮಾನವಾದ ಸ್ಥಾನವಿಲ್ಲ ಎಂದು ಸಹ ಇದು ಸೂಚಿಸುತ್ತದೆ. “ಫೆಡರಲ್ ವ್ಯವಸ್ಥೆಯಲ್ಲಿ, ಅಧಿಕಾರವನ್ನು ಇಡೀ ದೇಶದ ನಡುವೆ ವಿಂಗಡಿಸಲಾಗಿದೆ. ರಾಜ್ಯಗಳು ಅಧೀನವಾಗಿಲ್ಲ, ಬದಲಾಗಿ ಸಮಾನವಾಗಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...