Homeಅಂತರಾಷ್ಟ್ರೀಯಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

- Advertisement -
- Advertisement -

ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನಿರಾಕರಿಸಿ, ಹೆಚ್ಚುವರಿ ಡೇಟಾವನ್ನು ಕೇಳಿದೆ.

ಮಾನ್ಯತೆ ನೀಡಲು ಹೆಚ್ಚುವರಿ ಕ್ಲಿನಿಕಲ್ ಪ್ರಯೋಗಗಳಿಂದ ಡೇಟಾ ಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಕೊವ್ಯಾಕ್ಸಿನ್ ಇನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸದ ಕಾರಣಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದಕ್ಕೆ ಮಾನ್ಯತೆ ನೀಡಿಲ್ಲ.

ಜನವರಿ 16ರಿಂದ ಭಾರತದಲ್ಲಿ ಶುರುವಾದ ಲಸಿಕಾ ಅಭಿಯಾನದಲ್ಲಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಯ ಲಸಿಕೆ ಎಂದು ಭಾರತೀಯರಿಗೆ ನೀಡಲಾಗುತ್ತಿದೆ. ಬೇರೆಲ್ಲ ಕಡೆ ಮಾನ್ಯತೆ ಇಲ್ಲದಿರುವ ಲಸಿಕೆಯನ್ನು ನಮ್ಮ ದೇಹಕ್ಕೆ ಏಕೆ ಸೇರಿಸಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತದ ಲಸಿಕಾ ಅಭಿಯಾನಕ್ಕೆ ಅನುಮೋದಿಸಿದ ವಿದೇಶಿ ಲಸಿಕೆಗಳ ಬ್ರಿಡ್ಜಿಂಗ್‍ ಟ್ರಯಲ್ಸ್ ಅಗತ್ಯವಿಲ್ಲ ಎಂದು ಭಾರತದ ಔಷಧ ಮಂಡಳಿ ಹೇಳಿದೆ. ಅಂದರೆ ಪ್ರಾದೇಶಿಕವಾಗಿ ಯಾವುದೇ ಟ್ರಯಲ್ಸ್ ಇಲ್ಲದೇ ಈ ಲಸಿಕೆಗಳೂ ನಮ್ಮ ದೇಹ ಹೊಕ್ಕಲಿವೆ.

ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಸ್ಥಳೀಯ ಜನಸಂಖ್ಯೆಯಲ್ಲಿ ಸುರಕ್ಷತೆ ಮತ್ತು ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ಭಾರತೀಯರನ್ನು ಒಳಗೊಂಡಿರುವ ಸ್ಥಳೀಯ ಕ್ಲಿನಿಕಲ್ ಪ್ರಯೋಗಗಳು ಅಥವಾ ಬ್ರಿಡ್ಜ್ ಅಧ್ಯಯನಗಳನ್ನು ಸರ್ಕಾರ ಈ ಮೊದಲು ಬಯಸಿತ್ತು. ಆದರೆ ಈಗ ಅದಕ್ಕೆ ಬೈ ಬೈ ಹೇಳಿದೆ.

ಜುಲೈ ಮತ್ತು ಅಕ್ಟೋಬರ್ ನಡುವೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧವಾಗಿರುವ ಫಿಜರ್, ಯಾವುದೇ ತೀವ್ರ ಅಡ್ಡಪರಿಣಾಮಗಳಿಗೆ ಪರಿಹಾರ ನೀಡಲಾಗದು ಎಂಬ ಷರತ್ತು ಹಾಕಿದೆ. ಇಲ್ಲಿ ಕೊವ್ಯಾಕ್ಸಿನ್ ಅನ್ನು ದೇಸಿ ಲಸಿಕೆ ಕರೆದ ಸರ್ಕಾರ ಅದನ್ನು ನಮ್ಮ ದೇಹಕ್ಕೆ ಸೇರಿಸುತ್ತಿದೆ. ಅಭಿಯಾನ ಶುರುವಾಗಿ 5 ತಿಂಗಳಾದರೂ ಅದಿನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸಿಲ್ಲ ಎನ್ನಲಾಗಿದೆ.

ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನೂ ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಈ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ. ವಿದೇಶಕ್ಕೆ ತೆರಳುವ ಸಾವಿರಾರು ಜನರು ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು  ಕೊವ್ಯಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

ಕೊವಾಕ್ಸಿನ್‍ ಉತ್ಪಾದಿಸುತ್ತಿರುವ ಭಾರತ್‍ ಬಯೋಟೆಕ್‍ ಕಂಪನಿ ಮೂರನೇ ಕ್ಲಿನಿಕಲ್‍ ಟ್ರಯಲ್ಸ್ ವಿವರಗಳನ್ನು ಹಾಗೂ ಅದರ ಲಸಿಕೆಯ ಸಾಮರ್ಥ್ಯದ ಬಗೆಗಿನ ಪುರಾವೆಗಳನ್ನು 2021ರ ಜುಲೈ ತನಕ ಕೊಡಲು ಸಾಧ್ಯವಾಗುವುದಿಲ್ಲವೆಂದು ಹೇಳಿದೆ. ಅದಕ್ಕಾಗಿಯೇ ಈ ಕೊವ್ಯಾಕ್ಸಿನ್‍ಗೆ  ಈವರೆಗೆ WHO ಪರವಾನಗಿಯೂ ಸಿಕ್ಕಿಲ್ಲ.

ಆರಂಭದಲ್ಲೇ ಭಾರತ್‍ ಬಯೋಟೆಕ್‍ಗೆ ಮೆಲಿಂದಾ ಗೇಟ್ಸ್ ಫೌಂಡೇಷನ್‍ ಅಪಾರ ಧನಸಹಾಯ ಮಾಡಿದೆ. ನಮ್ಮದೇ ದೇಶದ, ಪುಣೆಯ ಸರ್ಕಾರಿ ಸಂಸ್ಥೆ ವೈರಾಲಿಜಿಕಲ್‍ ಇನ್‍ಸ್ಟಿಟ್ಯೂಟ್‍ ಮತ್ತು ಐಸಿಎಂಆರ್ ತಾಂತ್ರಿಕ ಮತ್ತು ವೈದ್ಯಕೀಯ ನೆರವು ನೀಡಿವೆ. ಭಾರತ ಸರ್ಕಾರ ಭಾರತ್‍ ಬಯೋಟೆಕ್‍ಗೆ  1,500 ಕೋಟಿ ರೂ ನೀಡಿದೆ. ಇಷ್ಟಾದ ಮೇಲೂ ವಿಶ್ವದಲ್ಲೇ ಅತಿ ದುಬಾರಿ ಲಸಿಕೆ ಅಂದರೆ ಅದು ಕೊವ್ಯಾಕ್ಸಿನ್!

ಪಿ.ಕೆ. ಮಲ್ಲನಗೌಡರ್

ನವಂಬರ್ 9, 2020ರಂದು ಕೊವಾಕ್ಸಿನ್ ಮೂರನೇ ಹಂತವು ‘ಕ್ಲಿನಿಕಲ್  ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿತು!


ಇದನ್ನೂ ಓದಿ; ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...