Homeಅಂತರಾಷ್ಟ್ರೀಯಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

- Advertisement -
- Advertisement -

ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನಿರಾಕರಿಸಿ, ಹೆಚ್ಚುವರಿ ಡೇಟಾವನ್ನು ಕೇಳಿದೆ.

ಮಾನ್ಯತೆ ನೀಡಲು ಹೆಚ್ಚುವರಿ ಕ್ಲಿನಿಕಲ್ ಪ್ರಯೋಗಗಳಿಂದ ಡೇಟಾ ಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಕೊವ್ಯಾಕ್ಸಿನ್ ಇನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸದ ಕಾರಣಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದಕ್ಕೆ ಮಾನ್ಯತೆ ನೀಡಿಲ್ಲ.

ಜನವರಿ 16ರಿಂದ ಭಾರತದಲ್ಲಿ ಶುರುವಾದ ಲಸಿಕಾ ಅಭಿಯಾನದಲ್ಲಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಯ ಲಸಿಕೆ ಎಂದು ಭಾರತೀಯರಿಗೆ ನೀಡಲಾಗುತ್ತಿದೆ. ಬೇರೆಲ್ಲ ಕಡೆ ಮಾನ್ಯತೆ ಇಲ್ಲದಿರುವ ಲಸಿಕೆಯನ್ನು ನಮ್ಮ ದೇಹಕ್ಕೆ ಏಕೆ ಸೇರಿಸಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತದ ಲಸಿಕಾ ಅಭಿಯಾನಕ್ಕೆ ಅನುಮೋದಿಸಿದ ವಿದೇಶಿ ಲಸಿಕೆಗಳ ಬ್ರಿಡ್ಜಿಂಗ್‍ ಟ್ರಯಲ್ಸ್ ಅಗತ್ಯವಿಲ್ಲ ಎಂದು ಭಾರತದ ಔಷಧ ಮಂಡಳಿ ಹೇಳಿದೆ. ಅಂದರೆ ಪ್ರಾದೇಶಿಕವಾಗಿ ಯಾವುದೇ ಟ್ರಯಲ್ಸ್ ಇಲ್ಲದೇ ಈ ಲಸಿಕೆಗಳೂ ನಮ್ಮ ದೇಹ ಹೊಕ್ಕಲಿವೆ.

ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಸ್ಥಳೀಯ ಜನಸಂಖ್ಯೆಯಲ್ಲಿ ಸುರಕ್ಷತೆ ಮತ್ತು ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ಭಾರತೀಯರನ್ನು ಒಳಗೊಂಡಿರುವ ಸ್ಥಳೀಯ ಕ್ಲಿನಿಕಲ್ ಪ್ರಯೋಗಗಳು ಅಥವಾ ಬ್ರಿಡ್ಜ್ ಅಧ್ಯಯನಗಳನ್ನು ಸರ್ಕಾರ ಈ ಮೊದಲು ಬಯಸಿತ್ತು. ಆದರೆ ಈಗ ಅದಕ್ಕೆ ಬೈ ಬೈ ಹೇಳಿದೆ.

ಜುಲೈ ಮತ್ತು ಅಕ್ಟೋಬರ್ ನಡುವೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧವಾಗಿರುವ ಫಿಜರ್, ಯಾವುದೇ ತೀವ್ರ ಅಡ್ಡಪರಿಣಾಮಗಳಿಗೆ ಪರಿಹಾರ ನೀಡಲಾಗದು ಎಂಬ ಷರತ್ತು ಹಾಕಿದೆ. ಇಲ್ಲಿ ಕೊವ್ಯಾಕ್ಸಿನ್ ಅನ್ನು ದೇಸಿ ಲಸಿಕೆ ಕರೆದ ಸರ್ಕಾರ ಅದನ್ನು ನಮ್ಮ ದೇಹಕ್ಕೆ ಸೇರಿಸುತ್ತಿದೆ. ಅಭಿಯಾನ ಶುರುವಾಗಿ 5 ತಿಂಗಳಾದರೂ ಅದಿನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸಿಲ್ಲ ಎನ್ನಲಾಗಿದೆ.

ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನೂ ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಈ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ. ವಿದೇಶಕ್ಕೆ ತೆರಳುವ ಸಾವಿರಾರು ಜನರು ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು  ಕೊವ್ಯಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

ಕೊವಾಕ್ಸಿನ್‍ ಉತ್ಪಾದಿಸುತ್ತಿರುವ ಭಾರತ್‍ ಬಯೋಟೆಕ್‍ ಕಂಪನಿ ಮೂರನೇ ಕ್ಲಿನಿಕಲ್‍ ಟ್ರಯಲ್ಸ್ ವಿವರಗಳನ್ನು ಹಾಗೂ ಅದರ ಲಸಿಕೆಯ ಸಾಮರ್ಥ್ಯದ ಬಗೆಗಿನ ಪುರಾವೆಗಳನ್ನು 2021ರ ಜುಲೈ ತನಕ ಕೊಡಲು ಸಾಧ್ಯವಾಗುವುದಿಲ್ಲವೆಂದು ಹೇಳಿದೆ. ಅದಕ್ಕಾಗಿಯೇ ಈ ಕೊವ್ಯಾಕ್ಸಿನ್‍ಗೆ  ಈವರೆಗೆ WHO ಪರವಾನಗಿಯೂ ಸಿಕ್ಕಿಲ್ಲ.

ಆರಂಭದಲ್ಲೇ ಭಾರತ್‍ ಬಯೋಟೆಕ್‍ಗೆ ಮೆಲಿಂದಾ ಗೇಟ್ಸ್ ಫೌಂಡೇಷನ್‍ ಅಪಾರ ಧನಸಹಾಯ ಮಾಡಿದೆ. ನಮ್ಮದೇ ದೇಶದ, ಪುಣೆಯ ಸರ್ಕಾರಿ ಸಂಸ್ಥೆ ವೈರಾಲಿಜಿಕಲ್‍ ಇನ್‍ಸ್ಟಿಟ್ಯೂಟ್‍ ಮತ್ತು ಐಸಿಎಂಆರ್ ತಾಂತ್ರಿಕ ಮತ್ತು ವೈದ್ಯಕೀಯ ನೆರವು ನೀಡಿವೆ. ಭಾರತ ಸರ್ಕಾರ ಭಾರತ್‍ ಬಯೋಟೆಕ್‍ಗೆ  1,500 ಕೋಟಿ ರೂ ನೀಡಿದೆ. ಇಷ್ಟಾದ ಮೇಲೂ ವಿಶ್ವದಲ್ಲೇ ಅತಿ ದುಬಾರಿ ಲಸಿಕೆ ಅಂದರೆ ಅದು ಕೊವ್ಯಾಕ್ಸಿನ್!

ಪಿ.ಕೆ. ಮಲ್ಲನಗೌಡರ್

ನವಂಬರ್ 9, 2020ರಂದು ಕೊವಾಕ್ಸಿನ್ ಮೂರನೇ ಹಂತವು ‘ಕ್ಲಿನಿಕಲ್  ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿತು!


ಇದನ್ನೂ ಓದಿ; ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...