Homeಮುಖಪುಟಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

- Advertisement -
- Advertisement -

ಬಿಜೆಪಿಗೆ ಆಸ್ತಿ ಡೀಲರ್‌ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆ ಇದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ಆಮ್‌ ಆದ್ಮಿ ಪಕ್ಷದ ಸಂಸದ ಸಂಜಯ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣದ ಬಗ್ಗೆ ತಾನು ನ್ಯಾಯಾಲಯದ ಕದ ತಟ್ಟುತ್ತಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ.

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ಹಗರಣ ನಡೆಸುತ್ತಿದೆ ಎಂದು ಆರೋಪಿಸಿದ್ದರು. 2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ಪ್ರಕರಣದ ಬಗ್ಗೆ ಇಂದು ಮಾತನಾಡಿದ ಸಂಜಯ್ ಸಿಂಗ್, “ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಹಗರಣವನ್ನು ಬಹಿರಂಗಪಡಿಸಿದ ನಂತರ ಅದರ ವಿರುದ್ದ ಕ್ರಮ ಕೈಗೊಳ್ಳಲು ಭಾರತ ಸರ್ಕಾರಕ್ಕೆ ಮತ್ತು ಬಿಜೆಪಿಗೆ ಮೂರು ದಿನಗಳನ್ನು ನೀಡಿ ಕಾಯುತ್ತಿದ್ದೆ. ಆದರೆ ಬಿಜೆಪಿಗೆ ಆಸ್ತಿ ಡೀಲರ್‌ ಮತ್ತು ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯಿದೆಯೆ ಹೊರತು ರಾಮನ ಮೇಲೆ ಅಲ್ಲ ಎಂದು ನನಗೆ ತಿಳಿಯಿತು. ಇದೀಗ ಪ್ರಕರಣದ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಲು ತಯಾರಿ ನಡೆಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಮಾಜಿ ಮಿತ್ರ ಪ್ರಕ್ಷವಾಗಿರುವ ಶಿವಸೇನೆ ಕೂಡಾ ಇದರ ಬಗ್ಗೆ ಸ್ಪಷ್ಟನೆ ಕೋರಿದ್ದು, ಶಿವಸೇನೆ ಸಂಸದ ಸಂಜಯ್ ರಾವತ್‌, “ರಾಮ ಮತ್ತು ರಾಮ ಮಂದಿರದ ಹೋರಾಟವು ನಮಗೆ ನಂಬಿಕೆಯ ವಿಷಯವಾಗಿದೆ. ಕೆಲವರಿಗೆ ಇದು ರಾಜಕೀಯ ವಿಷಯ. ಮಂದಿರದ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ ತಮ್ಮ ಮೇಲಿನ ಆರೋಪಗಳು ನಿಜವೋ ಸುಳ್ಳೋ ಎಂದು ಸ್ಪಷ್ಟಪಡಿಸಬೇಕು ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...