Homeಕರೋನಾ ತಲ್ಲಣಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

ಕೊವ್ಯಾಕ್ಸಿನ್‍ ಲಸಿಕೆಗೆ ನವಜಾತ ಕರುವಿನ ರಕ್ತದ್ರವ ಬಳಕೆ?: ಕಾಂಗ್ರೆಸ್ ಆರೋಪಕ್ಕೆ ಕೇಂದ್ರದ ಸ್ಪಷ್ಟೀಕರಣ

- Advertisement -
- Advertisement -

ಭಾರತ್ ಬಯೋಟೆಕ್ ಅಭಿವೃದ್ದಿಪಡಿಸುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ತಯಾರಿಕೆಯಲ್ಲಿ ನವಜಾತ ಕರುವಿನ ರಕ್ತದ್ರವ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಆರೋಪಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಅವರು ಟ್ವಿಟರ್‌ನಲ್ಲಿ  ಆರ್‌ಟಿಐ ಮಾಹಿತಿ ಆಧರಿಸಿದ ಪೋಸ್ಟ್ ಒಂದನ್ನು ಹಾಕಿದ್ದು, ಅದರಲ್ಲಿ ಕೊವಾಕ್ಸಿನ್‍ ತಯಾರಿಸಲು ಗೋವಿನ ರಕ್ತವನ್ನು ಬಳಸುತ್ತಾರೆ. ಇದು ಗೋವಧೆ ಎಂದು ಹೇಳಿದ ನಂತರ ಕೇಂದ್ರ ಸರ್ಕಾರ ಮತ್ತು ಭಾರತ್‍ ಬಯೋಟೆಕ್‍ ಕೋವ್ಯಾಕ್ಸಿನ್ ಬಗ್ಗೆ ಸ್ಪಷ್ಟೀಕರಣವನ್ನು ನೀಡಿವೆ.

“ಕೋವ್ಯಾಕ್ಸಿನ್ ಲಸಿಕೆಯ ಸಂಯೋಜನೆಗೆ ಸಂಬಂಧಿಸಿದಂತೆ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಬಂದಿವೆ, ಅಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ನವಜಾತ ಕರುವಿನ ರಕ್ತದ್ರವವನ್ನು (ಸೀರಮ್) ಬಳಸಲಾಗಿರುತ್ತದೆ ಎಂದು ಸೂಚಿಸಲಾಗಿದೆ. ಈ ಪೋಸ್ಟ್‌ಗಳಲ್ಲಿ ಸತ್ಯಗಳನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ನಿರೂಪಿಸಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಬುಧವಾರ ತಮ್ಮ ಟ್ವೀಟ್‍ನಲ್ಲಿ, “ಆರ್‌ಟಿಐ ಪ್ರತಿಕ್ರಿಯೆಯಲ್ಲಿ, ಕೋವ್ಯಾಕ್ಸಿನ್ ನವಜಾತ ಕರುವಿನ ರಕ್ತದ್ರವ (ಸೀರಮ್) ಅನ್ನು ಒಳಗೊಂಡಿದೆ ಎಂದು ಮೋದಿ ಸರ್ಕಾರ ಒಪ್ಪಿಕೊಂಡಿದೆ… ಇದು 20 ದಿನಗಳಿಗಿಂತ ಕಡಿಮೆ ವಯಸ್ಸಿನ ನವಜಾತ ಹಸು-ಕರುಗಳ ವಧೆಯ ಮೂಲಕ ಪಡೆದ ಹೆಪ್ಪುಗಟ್ಟಿದ ರಕ್ತದ ಒಂದು ಭಾಗವಾಗಿದೆ. ಇದು ಭೀಕರವಾಗಿದೆ! ಈ ಮಾಹಿತಿಯನ್ನು ಈ ಮೊದಲೇ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿತ್ತು” ಎಂದು ಟೀಕಿಸಿದ್ದರು.

“ನವಜಾತ ಕರುವಿನ ಸೀರಮ್ ಅನ್ನು ವೆರೋ ಕೋಶಗಳ ತಯಾರಿಕೆ/ಬೆಳವಣಿಗೆಗೆ ಮಾತ್ರ ಬಳಸಲಾಗುತ್ತದೆ. ವಿವಿಧ ರೀತಿಯ ಗೋವಿನ ಮತ್ತು ಇತರ ಪ್ರಾಣಿ ಸೀರಮ್‍ಗಳನ್ನು ವೆರೋ ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ. ಇದು ಜಾಗತಿಕವಾಗಿ ಪ್ರಮಾಣಿತ ವೈಜ್ಞಾನಿಕ ಅಂಶವಾಗಿದೆ. ಲಸಿಕೆಗಳ ಉತ್ಪಾದನೆಗೆ ಸಹಾಯ ಮಾಡುವ ಜೀವಕೋಶದ ಬೆಳವಣಿಗೆಯನ್ನು ಸ್ಥಾಪಿಸಲು ವೆರೋ ಕೋಶಗಳನ್ನು ಬಳಸಲಾಗುತ್ತದೆ. ಪೋಲಿಯೊ, ರೇಬೀಸ್ ಮತ್ತು ಇತರ ಹಲವು ಲಸಿಕೆಗಳಲ್ಲಿ ಈ ತಂತ್ರವನ್ನು ದಶಕಗಳಿಂದ ಬಳಸಲಾಗುತ್ತಿದೆ’ ಎಂದು ಕೇಂದ್ರವು ಪ್ರತಿಕ್ರಿಯೆ ನೀಡಿದೆ.

ಬೆಳವಣಿಗೆಯ ನಂತರ ಈ ವೆರೋ ಕೋಶಗಳನ್ನು ನೀರು ಅಥವಾ ರಾಸಾಯನಿಕಗಳಿಂದ ತೊಳೆಯಲಾಗುತ್ತದೆ. ನವಜಾತ ಕರುವಿನ ಸೀರಮ್‌ನಿಂದ ಮುಕ್ತವಾಗಿಸಲು ಈ ವಿಧಾನ ಅನುಸರಿಸಲಾಗುತ್ತದೆ. ಆ ನಂತರ ಈ ವೆರೋ ಕೋಶಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗುತ್ತವೆ. ವೈರಸ್ ಬೆಳವಣಿಗೆಯ ಪ್ರಕ್ರಿಯೆಯಲ್ಲಿ ವೆರೋ ಕೋಶಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಅದರ ನಂತರ ಈ ಬೆಳೆದ ವೈರಸ್ ಅನ್ನು ಸಹ ಕೊಲ್ಲಲಾಗುತ್ತದೆ (ನಿಷ್ಕ್ರಿಯಗೊಳಿಸಲಾಗುತ್ತದೆ) ಮತ್ತು ಶುದ್ಧೀಕರಿಸಲಾಗುತ್ತದೆ. ಈ ಕೊಲ್ಲಲ್ಪಟ್ಟ ವೈರಸ್ ಅನ್ನು ಅಂತಿಮ ಲಸಿಕೆ ತಯಾರಿಸಲು ಬಳಸಲಾಗುತ್ತದೆ. ಅಂತಿಮ ಲಸಿಕೆ ಸೂತ್ರೀಕರಣದಲ್ಲಿ ಯಾವುದೇ ಕರುವಿನ ಸೀರಮ್ ಅನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿ, “ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಅನ್ನು ವೈರಲ್ ಲಸಿಕೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದನ್ನು ಕೋಶಗಳ ಬೆಳವಣಿಗೆಗೆ ಬಳಸಲಾಗುತ್ತದೆ, ಆದರೆ ವೈರಸ್‍ನ ಬೆಳವಣಿಗೆಯಲ್ಲಿ ಅಥವಾ ಅಂತಿಮ ಸೂತ್ರೀಕರಣದಲ್ಲಿ ಬಳಸಲಾಗುವುದಿಲ್ಲ. ಎಲ್ಲಾ ಇತರ ಕಲ್ಮಶಗಳನ್ನು ತೆಗೆದುಹಾಕುವ ಮೂಲಕ ನಿಷ್ಕ್ರಿಯಗೊಂಡ ವೈರಸ್ ಘಟಕಗಳನ್ನು ಮಾತ್ರ ಒಳಗೊಂಡಿರುವಂತೆ ಕೊವಾಕ್ಸಿನ್‍ ಅನ್ನು ಶುದ್ಧೀಕರಿಸಲಾಗಿದೆ” ಎಂದು ವಿವರಣೆ ನೀಡಿದೆ.

“ಹಲವಾರು ದಶಕಗಳಿಂದ ಜಾಗತಿಕವಾಗಿ ಲಸಿಕೆಗಳ ತಯಾರಿಕೆಯಲ್ಲಿ ಪ್ರಾಣಿಗಳ ಸೀರಮ್ ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸದಾಗಿ ಹುಟ್ಟಿದ ಕರುವಿನ ಸೀರಮ್ ಬಳಕೆಯನ್ನು ಕಳೆದ 9 ತಿಂಗಳುಗಳಿಂದ ಪಾರದರ್ಶಕವಾಗಿ ದಾಖಲಿಸಲಾಗಿದೆ’  ಎಂದು ಅದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...