Homeಮುಖಪುಟಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

- Advertisement -
- Advertisement -

ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಗುಣ ಪಡೆದುಕೊಳ್ಳುತ್ತದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಅದು ಸುಳ್ಳು ಎಂದಿರುವ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ನಾವು ಹೇಳಿದಂತೆ ಮೈಮೇಲೆ ಸ್ಯಾನಿಟೈಸರ್ ಮಾಡಿದ ಬಳಿಕ ದೇಹ ಮ್ಯಾಗ್ನೆಟಿಕ್ ಶಕ್ತಿ ಪಡೆದಿದೆಯೆಂದು ಮತ್ತು ಲೋಹಗಳು ಅದಕ್ಕೆ ಅಂಟಿಕೊಳ್ಳುತ್ತದೆ ಎಂದು ಸಾಬೀತುಪಡಿಸಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ಸುದ್ದಿ ಹಬ್ಬಿತ್ತು. ವ್ಯಕ್ತಿಯ ಚರ್ಮದ ಮೇಲಿನ ತೇವಾಂಶವು ಮೇಲ್ಮೈ ಒತ್ತಡದಿಂದ ವಸ್ತುಗಳು ಅಂಟಿಕೊಳ್ಳುವಂತೆ ಮಾಡುತ್ತದೆ. ಇದಕ್ಕೆ ಮ್ಯಾಗ್ನೆಟಿಸಮ್ ಎಂದು ಹೇಳಬಹುದು ಎಂದು ಅದರ ಹಿಂದಿನ ಕಾರಣವನ್ನು ನರೇಂದ್ರ ನಾಯಕ್ ವಿವರಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದರಿಂದ ಜನರು ಹಿಂಜರಿಯುವಂತೆ ಮಾಡಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಲಸಿಕೆ ಮೂಲಕ ಅಥವಾ ಬೇರೆ ಯಾವುದೇ ವಿಧಾನದಿಂದ ಕಾಂತೀಯತೆಯನ್ನು ಮಾನವ ದೇಹಕ್ಕೆ ಪ್ರಚೋದಸಲು ಸಾಧ್ಯವಿಲ್ಲ. ಹೀಗೆ ಪ್ರತಿಪಾದಿಸುವವರಿಗೆ ನಾವು 10 ಸೆಕೆಂಡ್‌ಗಳ ಪರೀಕ್ಷೆಯ ಸವಾಲು ಹಾಕುತ್ತೇವೆ. ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿದೆ ಎಂದು ಹೇಳಿಕೊಳ್ಳುವ ವ್ಯಕ್ತಿಯ ದೇಹದ ಮೇಲೆ ಕರವಸ್ತ್ರದಿಂದ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಹಾಕಿ ಅದು ಒಣಗಿದ ನಂತರ ಆ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತವೆಯೇ ಎಂದು ನೋಡಬೇಕು ಎಂದು ಅವರು ತಿಳಿಸಿದ್ದಾರೆ.

ಸ್ಯಾನಿಟೈಸರ್ ವ್ಯಕ್ತಿಯ ಚರ್ಮದ ಮೇಲಿನ ತೇವಾಂಶದ ಮೇಲ್ಮೈ ಒತ್ತಡವನ್ನು ಕಡಿಮೆ ಮಾಡುವುದರಿಂದ ಆ ವ್ಯಕ್ತಿಯ ಮೇಲೆ ಲೋಹದ ವಸ್ತುಗಳು ಅಂಟಿಕೊಳ್ಳುವುದಿಲ್ಲ. ಒಂದು ವೇಳೆ ಅಂಟಿಕೊಳ್ಳುತ್ತದೆ ಎಂದು ಪ್ರತಿಪಾದಿಸುವವರು ಇದ್ದರೆ ನಮ್ಮ ಸವಾಲು ಸ್ವೀಕರಿಸಲು ಎಂದು ಅವರು ಘೋಷಿಸಿದ್ದಾರೆ.

ಸ್ಯಾನಿಟೈಸರ್ ಇಲ್ಲದಿದ್ದಲ್ಲಿ ಸೋಪ್ ದ್ರವದಿಂದ ಸಹ ಈ ಪರೀಕ್ಷೆ ಮಾಡಬಹುದು. ಸೋಪ್‌ ನೀರಿನಿಂದ ದೇಹವನ್ನು ತೊಳೆದ ನಂತರ ಚೆನ್ನಾಗಿ ಒಣಗಿದ ತಕ್ಷಣವೇ ಈ ಪರೀಕ್ಷೆ ಮಾಡಬೇಕು. ಯಾರಾದರೂ ಲೋಹದ ವಸ್ತುಗಳು ಅಂಟಿಕೊಳ್ಳುವುದನ್ನು ತೋರಿಸಿದರೆ ಅವರಿಗೆ 1 ಲಕ್ಷ ರೂಗಳ ಬಹುಮಾನ ನೀಡುತ್ತೇವೆ, ಅದಕ್ಕಾಗಿ ತಮ್ಮನ್ನು ಸಂಪರ್ಕಿಸುವಂತೆ ಅವರು ತಮ್ಮ ಮೊಬೈಲ್ ಸಂಖ್ಯೆ (94482 16343) ನೀಡಿದ್ದಾರೆ.

ಜನ ಲಸಿಕೆ ತೆಗೆದುಕೊಳ್ಳದಂತೆ ಭಯ ಹುಟ್ಟಿಸುವ ಇಂತಹ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಅವರು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಪರವಾಗಿ ತಿಳಿಸಿದ್ದಾರೆ. ಈ ಕುರಿತು ಈ ಹಿಂದೆ ನಾನುಗೌರಿ.ಕಾಂ ಕೂಡ ಫ್ಯಾಕ್ಟ್‌ಚೆಕ್ ಲೇಖನ ಪ್ರಕಟಿಸಿದೆ. ಅದನ್ನು ಈ ಕೆಳಗೆ ಓದಬಹುದು.


ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...