Homeಮುಖಪುಟಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

’ನಮ್ಮ ಮಕ್ಕಳು ತಪ್ಪಿತಸ್ಥರಲ್ಲ. ಅವರಿಗೆ ನ್ಯಾಯ ಸಿಗುತ್ತದೆ. ಈ ಭಾರತಕ್ಕೆ ಹೆಚ್ಚು ದೇವಂಗಾನರು, ಹೆಚ್ಚು ನತಾಶಾಗಳು ಬೇಕಾಗಿದ್ದಾರೆ’

- Advertisement -
- Advertisement -

ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿ ಬಂಧಿತರಾಗಿದ್ದ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ ನರ್ವಾಲ್‌, ದೇವಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್‌ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿದೆ. ಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಮೂವರು ಸಾಮಾಜಿಕ ಕಾರ್ಯಕರ್ತರು ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದು, ಈಗ ಜಾಮೀನು ಮಂಜೂರಾಗಿದೆ.

ತಮ್ಮ ಮಕ್ಕಳ ಹೋರಾಟದ ಬಗ್ಗೆ ಪಿಂಜ್ರಾ ತೋಡ್ ಕಾರ್ಯಕರ್ತೆ ದೇವಂಗನಾ ಕಾಳಿತಾ ಅವರ ತಾಯಿ ಡಾ. ಕಲ್ಪನಾ ಡೆಕ್ಕಾ ಕಾಳಿತಾ ಮಾತನಾಡಿದ್ದಾರೆ. ಮಗಳ ಕೆಲಸದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಆಕೆಯ ಹೋರಾಟಕ್ಕೆ ಬೆಂಬಲ ನೀಡಿದ ಬಗ್ಗೆ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ದೇವಂಗನಾ ಅವರು ಯಾವಾಗ ರಾಜಕೀಯ ಹೋರಾಟಗಳತ್ತ ಹೆಜ್ಜೆ ಹಾಕಿದರು..?

ದೇವಂಗನಾ ತನ್ನ ಶಾಲಾ ದಿನಗಳಲ್ಲಿಯೂ ಸಹ ಆಕೆ ನ್ಯಾಯ ಮತ್ತು ಅನ್ಯಾಯದ ನಡುವಿನ ವ್ಯತ್ಯಾಸಗಳ ಬಗ್ಗೆ ಅರಿವು ಹೊಂದಿದ್ದಳು. ಆಕೆಗೆ ರಾಜಕೀಯ ಮತ್ತು ಮಹಿಳೆಯರ ಹಕ್ಕುಗಳ ಬಗ್ಗೆ ತಿಳಿದಿತ್ತು. ತಪ್ಪು ನಡೆಯುತ್ತಿದ್ದರೆ ಅದರ ವಿರುದ್ಧ ಮಾತನಾಡುತ್ತಿದ್ದಳು. ಸಾಮಾಜಿಕ ಹೋರಾಟ ಅವಳ ಸ್ವಂತ ಜಾಗೃತ ನಿರ್ಧಾರವಾಗಿತ್ತು. ಅವಳ ನಿರ್ಧಾರವನ್ನು ನಾವೆಲ್ಲರೂ ಬೆಂಬಲಿಸಿದ್ದೇವೆ. ಅವಳು ಸ್ವತಂತ್ರ ಹುಡುಗಿಯಾಗಿದ್ದು, ಯಾವಾಗಲೂ ತಾನೇನು ಮಾಡಬೇಕು ಎಂದು ತಾನೇ ನಿರ್ಧರಿಸುತ್ತಾಳೆ. ಮುಂದಿನ ದಿನಗಳಲ್ಲಿಯೂ ಅವಳು ಹಾಗೆ ಮುಂದುವರಿಯುತ್ತಾಳೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ ಬಗ್ಗೆ ನಿಮಗೆ ತಿಳಿದಿದೆಯೇ..?

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ದೇವಂಗನಾ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ನಮಗೆ ತಿಳಿದಿತ್ತು. ಆದರೆ ಅದೇ ಸಮಯದಲ್ಲಿ, ಅವಳು ಎಂದಿಗೂ ಯಾವುದೇ ಹಿಂಸೆ, ಗಲಭೆ ಅಥವಾ ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂಬ ವಿಶ್ವಾಸ ನಮಗಿತ್ತು.

ನಾವು ಅಸ್ಸಾಂನ ಜನರು, ಎನ್ಆರ್‌ಸಿಯನ್ನು ಬಹಳ ಹತ್ತಿರದಿಂದ ನೋಡಿದ್ದೇವೆ. ನಮ್ಮ ಸುತ್ತಲಿನ ಹಲವಾರು ಜನರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ತಮ್ಮ ಇರುವಿಕೆಯ ಬಗ್ಗೆ ಯಾವುದೇ ದಾಖಲೆಗಳಿಲ್ಲದ ಕಾರಣ ಅವರು ಎಲ್ಲವನ್ನೂ ಕಳೆದುಕೊಂಡರು. ಅಸ್ಸಾಂನಲ್ಲಿ ಸಿಎಎ-ಎನ್ಆರ್‌ಸಿ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದಿವೆ. ನಾನು ಪ್ರಾಧ್ಯಾಪಕಿ. ನನ್ನ ವಿಶ್ವವಿದ್ಯಾಲಯದಲ್ಲಿಯೂ ಸಹ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ನಾನು ಕೂಡ ಭಾಗವಹಿಸಿದ್ದೇನೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ತಪ್ಪಲ್ಲ.

ಇದನ್ನೂ ಓದಿ: ಜಾಮೀನು ಸಿಕ್ಕರೂ ಬಿಡುಗಡೆಯಿಲ್ಲ!-ಹೈಕೋರ್ಟ್‌ ಕದ ತಟ್ಟಿದ ವಿದ್ಯಾರ್ಥಿಗಳು

ಆಕೆಯನ್ನು ಬಂಧಿಸಿದ ದಿನ ಏನಾಯಿತು..?

ಅವಳು ಸೆರೆವಾಸ ಅನುಭವಿಸಬಹುದು ಎಂಬ ಕಲ್ಪನೆ ನಮಗಿರಲಿಲ್ಲ. 2020 ರ ಮೇ 23 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಚಾರಣೆ ನಡೆಸಲಾಗುವುದು ಎಂದುಆಸಿಫ್ ಇಕ್ಬಾಲ್ ತನ್ಹಾ ಎಸ್‌ಐಟಿ ತಿಳಿಸಿತ್ತು. ಆಗ, ಮಧ್ಯಾಹ್ನ 2:30 ರ ಸುಮಾರಿಗೆ ಆಕೆ ನಮಗೆ ವಿಡಿಯೋ ಕಾಲ್‌ ಮಾಡಿದಳು. ನಾನು ಅವಳಿಗೆ ‘ಭಯಪಡುವ ಅಗತ್ಯವಿಲ್ಲ. ನೀವು ಯಾವುದೇ ತಪ್ಪು ಮಾಡಿಲ್ಲ. ನೀವು ಸಿಎಎ ವಿರುದ್ಧ ಪ್ರತಿಭಟಿಸಿದ್ದೀರಿ. ಹೋಗಿ ಪ್ರಶ್ನೆಗಳಿಗೆ ಧೈರ್ಯವಾಗಿ ಉತ್ತರಿಸಿ ಎಂದು ಹೇಳಿದ್ದೆ.

ಆಕೆ ಜೈಲಿನಲ್ಲಿದ್ದಾಗ ಆಕೆಯನ್ನು ಮಾತನಾಡಿಸಲು ನೀವು ಬಂದಿದ್ದೀರಾ..?

ಆರಂಭದಲ್ಲಿ, 10-15 ದಿನಗಳಲ್ಲಿ ಕೇವಲ ಹತ್ತು ನಿಮಿಷಗಳ ಕಾಲ ಆಕೆಯೊಂದಿಗೆ ಮಾತನಾಡಲು ನಮಗೆ ಅವಕಾಶ ನೀಡಲಾಯಿತು. ಆದರೆ, ದೇವಂಗನಾ ಮತ್ತು ನತಾಶಾ ಈ ಸಮಯಾವಕಾಶದ ಬಗ್ಗೆ ವಿರೋಧಿಸಿದರು. ನಂತರ, ತಿಹಾರ್ ಜೈಲಿನಲ್ಲಿರುವ ಎಲ್ಲ ಕೈದಿಗಳಿಗೆ ವಾರಕ್ಕೊಮ್ಮೆ 30 ನಿಮಿಷಗಳ ಕಾಲ ವಿಡಿಯೋ ಕರೆಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು. ಪ್ರತಿದಿನ ಐದು ನಿಮಿಷಗಳ ಫೋನ್ ಕರೆಗಳನ್ನು ಮಾಡಲು ಸಹ ಅವರಿಗೆ ಅವಕಾಶ ನೀಡಲಾಯಿತು. ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು. ಆಕೆ ಹೋರಾಟಗಾರ್ತಿ.

ಪ್ರತಿ ಬಾರಿಯೂ ನಾವು ಅವಳನ್ನು ವಿಡಿಯೋ ಕರೆಯಲ್ಲಿ ನೋಡುತ್ತಿದ್ದೆವು. ಅದು ನಮಗೆ ಒಂದು ಉತ್ತಮ ಕ್ಷಣವಾಗಿತ್ತು. ಆಕೆಯ ಕಿರಿಯ ಸಹೋದರ ವಿಡಿಯೋ ಕರೆಯಲ್ಲಿ ಪಿಯಾನೋ ನುಡಿಸುತ್ತಿದ್ದ. ಅದು ಅವಳನ್ನು ಹುರಿದುಂಬಿಸುತ್ತಿತ್ತು ಮತ್ತು ಅವಳು ಅದನ್ನು ತುಂಬಾ ಪ್ರೀತಿಸುತ್ತಿದ್ದಳು. ‘ನೀವು ಹಾಡುವುದನ್ನು ನೋಡಲು ನಾನು ಹೊರಗೆ ಬರಬೇಕು’ ಎಂದು ಹೇಳುತ್ತಿದ್ದಳು.

ಇದನ್ನೂ ಓದಿ: JNU ವಿದ್ಯಾರ್ಥಿನಿ ದೇವಾಂಗನಾ ಕಾಳಿತಾ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ: ಜಾಮೀನು ಮಂಜೂರು

ಕಂಬಿಗಳ ಹಿಂದೆ ಇರುವ ಎಲ್ಲಾ ರಾಜಕೀಯ ಕೈದಿಗಳ ಕುಟುಂಬಗಳಿಗೆ ನಿಮ್ಮ ಸಂದೇಶ ಏನು..?

ರಾಜಕೀಯ ಹೋರಾಟ, ಜನಪರ ಹೋರಾಟಗಳಿಂದಾಗಿ ಸುಳ್ಳು ಪ್ರಕರಣಗಳಿಂದ ಜೈಲು ಸೇರಿರುವ ಮಕ್ಕಳ ತಾಯಂದಿರಿಗೆ ನಾನು ಇದನ್ನು ಹೇಳಲು ಬಯಸುತ್ತೇನೆ. “ನಾವು ದೃಢವಾಗಿರಬೇಕು ಮತ್ತು ಸ್ವಲ್ಪ ಸಮಯದವರೆಗೆ ಕಾಯಬೇಕು. ನಮ್ಮ ಮಕ್ಕಳು ತಪ್ಪಿತಸ್ಥರಲ್ಲ. ಅವರಿಗೆ ನ್ಯಾಯ ಸಿಗುತ್ತದೆ. ಈ ಭಾರತಕ್ಕೆ ಹೆಚ್ಚು ದೇವಂಗಾನರು, ಹೆಚ್ಚು ನತಾಶಾಗಳು, ಹೆಚ್ಚು ಗಲ್ಫಿಷಾಗಳು ಬೇಕಾಗಿದ್ದಾರೆ.

ದೇವಂಗಾನ ಮತ್ತು ಅವಳ ಸ್ನೇಹಿತರ ಬಗ್ಗೆ ತಮ್ಮ ಚಾನೆಲ್‌ಗಳಲ್ಲಿ ಭೇಟೆಯಾಗಿದ ಮಾಧ್ಯಮಗಳಿಗೆ ನೀವು ಏನು ಹೇಳಲು ಬಯಸುತ್ತೀರಾ..?

ಟಿವಿ ಚಾನೆಲ್‌ಗಳು ದೇವಂಗಾನಳ ಮೇಲೆ ಹೇಗೆ ದಾಳಿ ನಡೆಸುತ್ತಿವೆ ಎಂದು ನಮ್ಮ ಸಂಬಂಧಿಕರು ನಮಗೆ ತಿಳಿಸಿದರು. ಆ ಟಿವಿ ನಿರೂಪಕರಿಗೆ ನಾನು ಹೇಳಲು ಒಂದು ವಿಷಯವಿದೆ – ನಿಮಗೆ ಬೇಕಾದುದನ್ನು ನೀವು ಹೇಳಬಹುದು. ಆದರೆ ನನಗೆ, ದೆಹಲಿ ಹೈಕೋರ್ಟ್‌ನ ತೀರ್ಪು ಭಾರತದಲ್ಲಿ ಪ್ರಜಾಪ್ರಭುತ್ವದ ವಿಜಯವಾಗಿದೆ.

ನೀವು ಸರ್ಕಾರಕ್ಕೆ ಏನು ಹೇಳಲು ಬಯಸುತ್ತೀರಿ..?

ಉತ್ತಮ ದೇಶವನ್ನು ನಿರ್ಮಿಸಲು, ಎಲ್ಲಾ ರೀತಿಯ ಜನರ ಧ್ವನಿಯನ್ನು ಕೇಳುವ ತಾಳ್ಮೆ ನಿಮಗೆ ಇರಬೇಕು ಎಂಬುದು ಸರ್ಕಾರಕ್ಕೆ ನನ್ನ ಸಂದೇಶ. ವಿಮರ್ಶೆ ಮತ್ತು ಚರ್ಚೆಗಳಿಗೆ ಅವಕಾಶ ನೀಡಿ. ನನ್ನ ಮಗಳು ತನಗಾಗಿ ಪ್ರತಿಭಟಿಸಲಿಲ್ಲ, ಅವಳು ತನ್ನ ದೇಶಕ್ಕಾಗಿ ಹೋರಾಟ ಮಾಡಿದಳು.

ನಿಮ್ಮ ಮಗಳ ಬಗ್ಗೆ ನಿಮಗೆ ಹೆಚ್ಚು ಹೆಮ್ಮೆ ಎನಿಸುತ್ತದೆಯೇ..?

ದೇವಂಗನಾ ತುಂಬಾ ಪ್ರಾಮಾಣಿಕ ಮತ್ತು ಕರುಣಾಮಯಿ. ನಾನು ಪ್ರತಿದಿನ ಅವಳಿಂದ ಸ್ಫೂರ್ತಿ ಪಡೆದಿದ್ದೇನೆ. ಅವಳು ಜೈಲುವಾಸವನ್ನು ಎದುರಿಸಬೇಕಾಗಿ ಬಂದ ನಂತರ, ಅವಳು ಇನ್ನೂ ಬಲಶಾಲಿ ಮಹಿಳೆಯಾಗಿ ಹೊರಬರುತ್ತಾಳೆ ಎಂದು ನನಗೆ ಖಾತ್ರಿಯಿದೆ. ನಾನು ಅವಳ ಬಗ್ಗೆ ಹೆಮ್ಮೆಪಡುತ್ತೇನೆ. ಅವಳು ತನ್ನ ಹೋರಾಟವನ್ನು ಮುಂದುವರಿಸಬೇಕು. ನಮ್ಮ ಹೆಣ್ಣುಮಕ್ಕಳಿಗೆ ನಿರ್ಧಾರ ತೆಗೆದುಕೊಳ್ಳುವ ಮತ್ತು ರಾಜಕೀಯದಲ್ಲಿ ಭಾಗವಹಿಸಲು ಮತ್ತು ಅನ್ಯಾಯದ ವಿರುದ್ಧ ದನಿ ಎತ್ತುವುದು ಮತ್ತಷ್ಟು ಅಗತ್ಯವಿದೆ. ಹೆಣ್ಣು ಮಕ್ಕಳು ಸ್ವತಂತ್ರರಾಗಿರಲಿ ಮತ್ತು ತಮ್ಮದೇ ಆದ ಆಯ್ಕೆಗಳನ್ನು ಮಾಡಿಕೊಳ್ಳಲಿ. ಪಂಜರಗಳನ್ನು ಮುರಿಯಲು ನಾವು ಅವರಿಗೆ ಅವಕಾಶ ನೀಡಬೇಕು (ಪಿಂಜ್ರಾ ಟೋಡ್ನೆ ದೋ).

ಅವಳು ಮನೆಗೆ ಹಿಂತಿರುಗಿದಾಗ ನೀವು ಮಾಡುವ ಮೊದಲ ಕೆಲಸ ಯಾವುದು..?

ನಾನು ಒಂದು ವರ್ಷಕ್ಕೂ ಹೆಚ್ಚು ಕಾಲ ಅವಳನ್ನು ನೋಡಿಲ್ಲ. ಅವಳು ಕರೆಯಲ್ಲಿ ಹೇಳುತ್ತಿದ್ದಳು, ‘ಮಾ, ನಾನು ಒಂದು ವರ್ಷದಿಂದ ಒಂದು ಮೊಟ್ಟೆಯನ್ನೂ ತಿಂದಿಲ್ಲ’. ತಿಹಾರ್ ಜೈಲಿನಲ್ಲಿ ಸಸ್ಯಾಹಾರಿ ಆಹಾರವನ್ನು ಮಾತ್ರ ನೀಡುತ್ತಾರೆ. ಅವಳು ಮಾಂಸಾಹಾರಿ ಮತ್ತು ನಮ್ಮ ಸಾಂಪ್ರದಾಯಿಕ ಅಸ್ಸಾಮೀಸ್ ಭೋಜನಗಳನ್ನು ತುಂಬಾ ಇಷ್ಟಪಡುತ್ತಾಳೆ. ಅವಳು ಹಿಂತಿರುಗಿದಾಗ, ನಾನು ಅವಳ ನೆಚ್ಚಿನ ಮೀನಿನ ಅಡುಗೆ ಮಾಡಿ ಕೊಡುತ್ತೇನೆ.’

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ:ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಪೊಲೀಸರ ಪ್ರತಿಪಾದನೆ ನಿರಾಕರಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...