Homeಮುಖಪುಟಮೋದಿ ತನ್ನ ತಪ್ಪು ಒಪ್ಪಿಕೊಂಡರೆ ದೇಶದ ಪುನರ್‌‌ನಿರ್ಮಾಣ ಪ್ರಾರಂಭ: ರಾಹುಲ್ ಗಾಂಧಿ

ಮೋದಿ ತನ್ನ ತಪ್ಪು ಒಪ್ಪಿಕೊಂಡರೆ ದೇಶದ ಪುನರ್‌‌ನಿರ್ಮಾಣ ಪ್ರಾರಂಭ: ರಾಹುಲ್ ಗಾಂಧಿ

ಕೊರೊನಾ ಸಾಂಕ್ರಾಮಿಕ ಸಮಯ ಜಾಗತಿಕ ಬಡತನದ ಹೆಚ್ಚಳದಲ್ಲಿ ಭಾರತವು 57.3% ರಷ್ಟು ಪಾಲನ್ನು ಹೊಂದಿದೆ ಎಂದು ವಿಶ್ವ ಬ್ಯಾಂಕ್‌ ವರದಿ ನೀಡಿತ್ತು.

- Advertisement -
- Advertisement -

ಪ್ರಧಾನಿ ಮೋದಿ ಕೊರೊನಾ ಸಾಂಕ್ರಮಿಕವನ್ನು ನಿರ್ವಹಿಸುವಲ್ಲಿ ಆಗಿರುವ ತನ್ನ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆದಾಗ ನಮ್ಮ ದೇಶದ ಪುನರ್‌‌ನಿರ್ಮಾಣ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಸಮಯ ಜಾಗತಿಕ ಬಡತನದ ಹೆಚ್ಚಳದಲ್ಲಿ ಭಾರತವು 57.3% ರಷ್ಟು ಪಾಲನ್ನು ಹೊಂದಿದೆ ಎಂದು ವಿಶ್ವ ಬ್ಯಾಂಕ್‌ ವರದಿ ನೀಡಿತ್ತು. ಈ ಅಂಕಿ ಅಂಶಗಳನ್ನು ಅವರು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ತನ್ನ ಟ್ವೀಟ್‌ನಲ್ಲಿ, ವಿಶ್ವಬ್ಯಾಂಕ್‌ ಬಡನದ ಕುರಿತು ನೀಡಿದ್ದ ವರದಿಯ ಚಿತ್ರವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, “ಇದು ಭಾರತ ಸರ್ಕಾರವು ಸಾಂಕ್ರಮಿಕವನ್ನು ಕೆಟ್ಟದಾಗಿ ನಿರ್ವಹಿಸಿರುವುದರ ಫಲಿತಾಂಶವಾಗಿದೆ. ಆದರೆ ನಾವೀಗ ಭವಿಷ್ಯದತ್ತ ಗಮನ ಹರಿಸಬೇಕಾಗಿದೆ. ಪ್ರಧಾನಿ ತನ್ನ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆದಾಗ ನಮ್ಮ ದೇಶದ ಪುನರ್‌‌ನಿರ್ಮಾಣ ಪ್ರಾರಂಭವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ, “ಎಲ್ಲವನ್ನೂ ನಿರಾಕರಿಸಿ ಬದುಕುವುದರಿಂದ ಯಾವ ಸಮಸ್ಯೆಯು ಪರಿಹಾರವಾಗುವುದಿಲ್ಲ” ಎಂದು ಹೇಳಿದ್ದಾರೆ.

ವಿಶ್ವಬ್ಯಾಂಕ್‌ ತನ್ನ ವರದಿಯಲ್ಲಿ, ಜಾಗತಿಕವಾಗಿ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಮಧ್ಯಮ ಆದಾಯದ ಗುಂಪಿನಿಂದ ಹೊರಗುಳಿದ ಜನರ ಅಂದಾಜು ಅಂಕಿ ಅಂಶವನ್ನು ನೀಡಿದೆ. ಇದರಲ್ಲಿ ಹೆಚ್ಚಿನ ಕೊಡುಗೆ ಭಾರತದ್ದೆ ಆಗಿದೆ ಎಂದು ಅದು ಉಲ್ಲೇಖಿಸಿದೆ.

ವರದಿಯ ಪ್ರಕಾರ ಸಾಂಕ್ರಮಿಕದ ಸಮಯದಲ್ಲಿ ಜಗತ್ತಿನ 13.1 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದು, ಇದರಲ್ಲಿ 7.5 ಕೋಟಿ ಜನರು ಭಾರತದ ಜನರೆ ಆಗಿದ್ದಾರೆ(57.3%). ಹಾಗೆಯೆ ಸಾಂಕ್ರಮಿಕದ ಸಮಯದಲ್ಲಿ ಜಗತ್ತಿನ 5.4 ಕೋಟಿ ಜನರು ಮಧ್ಯಮ ಆದಾಯದ ಗುಂಪಿನಿಂದ ಹೊರಹೋಗಿದ್ದಾರೆ. ಇದರಲ್ಲಿ 3.5 ಕೋಟಿ ಜನರು ಭಾರತೀಯರಾಗಿದ್ದಾರೆ(59.3%).

ಇದನ್ನೂ ಓದಿ: ಕೋವಿಡ್ 2ನೇ ಅಲೆಯಿಂದ ಆರ್ಥಿಕತೆಗೆ 2 ಲಕ್ಷ ಕೋಟಿ ರೂ ನಷ್ಟ: RBI ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...