Homeಕರ್ನಾಟಕಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

’ಈ ಅನಾಹುತಕ್ಕೆ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ, ದೆಹಲಿಯವರೆಗೂ ತಲುಪಿ ಈಗ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಆಗಮಿಸಿದ್ದಾರೆ. ಆದರೂ ರಾಜ್ಯ ಬಿಜೆಪಿಯಲ್ಲಿ ಪರ-ವಿರೋಧ ಹೇಳಿಕೆಗಳು ಬರುತ್ತಲೇ ಇವೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ಅಧಿಕಾರ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

“ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು” ಎಂದು ಟ್ವೀಟ್ ಮಾಡಿದ್ದಾರೆ.

’ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

’ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ..? ಎಂದು ಪ್ರಶ್ನಿಸಿದ್ದಾರೆ.

’ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

’ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು’ ಎಂದು ಕಿಡಿಕಾರಿದ್ದಾರೆ.

‘ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು..? ಇದೇ ಕಾಂಗ್ರೆಸ್ ಅಲ್ಲವೇ..? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು’ ಎಂದು ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

’ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ..? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’ ಎಂದಿದ್ದಾರೆ.

ಇದರ ಜೊತೆಗೆ “ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ” ಎಂಬ ಬಸವಣ್ಣನವರ ವಚನವನ್ನು ಪೋಸ್ಟ್‌ ಮಾಡಿ, ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ’ ಎಂದು ಎಚ್.ಡಿ.ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...