Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...