Homeಚಳವಳಿನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ನಾಲ್ಕು ವರ್ಷಗಳ ಪದವಿ ಕೋರ್ಸ್‌ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ

ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಂಘಟಿತ ಪ್ರತಿರೋಧ ಅನಿವಾರ್ಯ..

- Advertisement -
- Advertisement -

ಹಲವಾರು ರಾಜ್ಯಗಳ ವಿರೋಧ, ಶಿಕ್ಷಣ ತಜ್ಞರ ಅಸಮಾಧಾನದ ನಡುವೆಯೂ ಕೇಂದ್ರ ಸರ್ಕಾರ ತನ್ನ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದೆ. ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ಕುತ್ತು ಬಂದೊದಗಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವಾರು ಸಾಹಿತಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಿನ್ನ ಬಗೆಯ ಬಹುಶಿಸ್ತೀಯ 4 ವರ್ಷಗಳ ಸಾಮಾನ್ಯ ಪದವಿ ಮತ್ತು ಶಿಕ್ಷಕ ಪದವಿ ಕೋರ್ಸುಗಳನ್ನು ರೂಪಿಸಿದ್ದು, ಅದಕ್ಕಾಗಿ ಅನುಷ್ಠಾನ ಕಾರ್ಯಪಡೆಯನ್ನು ರಚಿಸಲಾಗಿದೆ. ಉನ್ನತ ಶಿಕ್ಷಣ ಪಠ್ಯಕ್ರಮ ರಚನೆಗೆ ನೇಮಿಸಲಾಗಿದ್ದ ಕಾರ್ಯಪಡೆ ಉಪ ಸಮಿತಿಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ಪಠ್ಯ ವಿಷಯವನ್ನು ಕೇವಲ ಎರಡು ಸೆಮಿಸ್ಟಾರ್‌ಗಳಿಗೆ ಅಂದರೆ ಒಂದೇ ವರ್ಷಕ್ಕೆ ಮಿತಿಗೊಳಿಸಲಾಗಿದೆ. ಇದರ ವಿರುದ್ದ ಹಲವಾರು ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ಪದವಿಯಲ್ಲಿ ಮೊದಲ ಎರಡು ವರ್ಷ ಅಂದರೆ ನಾಲ್ಕು ಸೆಮಿಸ್ಟರ್‌ಗಳಲ್ಲಿ ಕನ್ನಡಾದಿಯಾಗಿ ಭಾಷಾ ವಿಷಯ ಬೋಧನೆಗೆ ಅವಕಾಶವಿತ್ತು. ಈಗ ನಾಲ್ಕು ವರ್ಷಗಳ ಪದವಿಯಲ್ಲಿ ಎರಡು ವರ್ಷಗಳ ಭಾಷಾ ಬೋಧನೆಯನ್ನು ಮೂರು ವರ್ಷಗಳಿಗೆ ವಿಸ್ತರಿಸಬೇಕಾಗಿತ್ತು. ಕಡೇ ಪಕ್ಷ ಹಿಂದೆ ಇದ್ದಂತೆ ಎರಡು ವರ್ಷಗಳ ಅವಧಿಯನ್ನಾದರೂ ಉಳಿಸಿಕೊಳ್ಳಬೇಕಿತ್ತು. ಅದರ ಬದಲು ಒಂದು ವರ್ಷಕ್ಕೆ ಮಿತಿಗೊಳಿಸಿರುವುದು ಇದು ಭಾಷಾ ವಿಷಯಗಳಿಗೆ ಅದರಲ್ಲೂ ವಿಶೇಷವಾಗಿ ಕನ್ನಡಕ್ಕೆ ಆಗಿರುವ ಅನ್ಯಾಯ. ಇದು ಖಂಡನೀಯ ಎಂದು ಬರಗೂರು ರಾಮಚಂದ್ರಪ್ಪ ಪತ್ರದಲ್ಲಿ ತಿಳಿಸಿದ್ದಾರೆ.

ಯಾವುದೇ ವಿಶೇಷ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುವವರಿಗೆ ಕನ್ನಡ ಭಾಷೆ, ಸಾಹಿತ್ಯದ ಸಾಮಾನ್ಯ ಪರಿಚಯ ಕಡ್ಡಾಯವಾಗಬೇಕು. ಇದು ಕೇವಲ ಕನ್ನಡಾಭಿಮಾನದ ಪ್ರಶ್ನೆಯಲ್ಲಿ, ಯಾವುದೇ ವ್ಯಾಸಂಗಗಳಲ್ಲಿ ಸಾಂಸ್ಕೃತಿಕ ಅರಿವು ಮೂಡಿಸಿ ಮಾನವೀಯ ಮೌಲ್ಯಗಳನ್ನು ನೆಲೆಗೊಳಿಸಲು ಕನ್ನಡ ಭಾಷೆ, ಸಾಹಿತ್ಯಗಳ ಸಂಕ್ಷಿಪ್ತ ಸಾಮಾನ್ಯ ಪರಿಚಯವು ಪೂರಕವಾಗುತ್ತದೆ. ಶಿಕ್ಷಣವನ್ನು ಸಾಂಸ್ಕೃತಿಕ ಜನಪರ ಪ್ರಜೆಯ ನೆಲೆಯಲ್ಲೂ ಪರಿಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪಠ್ಯ ವಿಷಯವನ್ನು ನಾಲ್ಕು ವರ್ಷಗಳ ಪದವಿಯಲ್ಲಿ ಮೂರು ವರ್ಷ ಬೋಧಿಸುವ ತೀರ್ಮಾನ ಕೈಗೊಳ್ಳಬೇಕು. ಒಂದೇ ವರ್ಷಕ್ಕೆ ಮಿತಿಗೊಳಿಸಿದರೆ ಖಂಡಿತ ಸಂಘಟಿತ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಒಂದು ವರ್ಷ ಮಾತ್ರ ಭಾಷಾ ಕೌಶಲ್ಯ, ಭಾಷಾ ಸಾಮರ್ಥ್ಯಗಳನ್ನು ಕಲಿತು ಆನಂತರ ಅವರು ಬೇರೆ ಏನನ್ನಾದರೂ ಭಾಷೆಯ ಸಹಾಯವಿಲ್ಲದೆ ಕಲಿಯಬಹುದು ಎಂಬ ಕಲ್ಪನೆಯೇ ಅವೈಜ್ಞಾನಿಕವಾದುದು. ಮೌಲ್ಯಾಧಾರಿತ, ಕೌಶಲ್ಯಾಧಾರಿತ, ವೃತ್ತಿಪರ ಶಿಕ್ಷಣವನ್ನು ರೂಪಿಸುವ ನೆಲೆಯಲ್ಲಿ ಭಾಷೆಯನ್ನು ಕಡೆಗಣಿಸಲು ಆದೀತೆ ಎಂದು ಹಲವು ಪ್ರಾಧ್ಯಾಪಕರು, ಸಾಹಿತಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್‌ನಾರಾಯಣ್‌ರವರನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಶಿಕ್ಷಣ ನೀತಿಯನ್ನಾಗಿ ಪರಿವರ್ತಿಸಿಕೊಂಡು ನಮ್ಮ ಅಸ್ತಿತ್ವಕ್ಕೆ ಮತ್ತು ಅನನ್ಯತೆಗೆ ಧಕ್ಕೆ ಬಾರದ ಹಾಗೆ ಶಿಕ್ಷಣವನ್ನು ನಾವಿಲ್ಲಿ ರೂಪಿಸಿಕೊಳ್ಳಬೇಕಲ್ಲವೆ? ಎಂದು ಡಾ.ರಾಮಲಿಂಗಪ್ಪ ಟಿ.ಬೇಗೂರು, ಡಾ.ನಟರಾಜ ಬೂದಾಳು, ಡಾ. ಮೀನಾಕ್ಷಿ ಬಾಳಿ, ಡಾ.ಡಿ.ಎಸ್.ಚೌಗಲೆ, ಡಾ. ಜಯಪ್ರಕಾಶ್ ಶೆಟ್ಟಿ, ಡಾ. ವಿನಯಾ ವಕ್ಕುಂದ, ಡಾ.ಅಮೃತಾ ಕಟಕೆ, ಡಾ.ಚಂದ್ರಶೇಕರ ನಂಗಲಿ, ಡಾ. ಬೈರಮಂಗಲ ರಾಮೇಗೌಡ, ಡಾ. ತಿಮ್ಮೇಗೌಡ, ಡಾ. ದಾದಾಪೀರ್ ನವಿಲೆಹಾಳ್, ಡಾ. ತಿಮ್ಮಯ್ಯ ಕೆ., ಡಾ.ಜಾಜಿ ದೇವೇಂದ್ರಪ್ಪ, ಡಾ. ಬಿ. ಕರಿಯಣ್ಣ, ಡಾ. ಗೀತಾ ವಸಂತ, ಡಾ. ಶಿವನಂಜಯ್ಯ ಮುಂತಾದವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡವನ್ನು ಮೂಲೆಗುಂಪು ಮಾಡಿರುವ ಹೊಸ ಶಿಕ್ಷಣ ನೀತಿಯನ್ನು ಕನ್ನಡಿಗರೆಲ್ಲರೂ ಒಕ್ಕೋರಲಿನಿಂದ ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...