Homeಮುಖಪುಟನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

- Advertisement -
- Advertisement -

’ಮರಾಠರ ಹೆಮ್ಮೆ ಮತ್ತು ಹಿಂದುತ್ವದ ವಿಷಯಕ್ಕೆ ಬಂದಾಗ, ನಾವು ಗೂಂಡಾಗಳೇ, ನಮಗೆ ಯಾರೂ ಗೂಂಡಾಗಳು ಎಂದು ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ, ನಾವು ಪ್ರಮಾಣಪತ್ರ ಹೊಂದಿರುವ ಗೂಂಡಾಗಳೇ’ ಎಂದು ಶಿವಸೇನೆಯ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನ ದಾದರ್‌ನಲ್ಲಿರುವ ಸೇನಾ ಭವನದ ಹೊರಗೆ ಬಿಜೆಪಿ ಮತ್ತು ಶಿವಸೇನಾ ಪಕ್ಷಗಳ ಕಾರ್ಯಕರ್ತರ  ನಡುವೆ ಬುಧವಾರ ನಡೆದ ಘರ್ಷಣೆ ಬಗ್ಗೆ ಬಿಜೆಪಿಯು ಶಿವಸೇನೆಯ ಗೂಂಡಾಗಿರಿಯ ಬಗ್ಗೆ ಟ್ವಿಟ್ ಮಾಡಿ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನೆಯ ಸಂಜಯ್ ರಾವತ್ ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು ಎಂದಿದ್ದಾರೆ.

ಅಯೋಧ್ಯೆಯಲ್ಲಿ ಭೂ ವ್ಯವಹಾರ ವಿವಾದದ ಬಗ್ಗೆ ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ “ಆಕ್ರಮಣಕಾರಿ” ಟೀಕೆಗಳ ವಿರುದ್ಧ ಬಿಜೆಪಿ ಯುವ ಮೋರ್ಚಾ ವಿಭಾಗವು ಪ್ರತಿಭಟನಾ ಮೆರವಣಿಗೆ ನಡೆಸುವಾಗ ಶಿವಸೇನೆ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಶೀವಸೇನೆಯ ಕಾರ್ಯಕರ್ತರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದ್ದ ಈ ಘಟನೆಯಲ್ಲಿ, ’ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಲು ಬಿಜೆಪಿ ಕಾರ್ಯಕರ್ತರು ಬರುತ್ತಿದ್ದಾರೆ ಎಂಬ ಮಾಹಿತಿ ತಮಗೆ ದೊರೆತಿದೆ’ ಎಂದು ಶಿವಸೇನಾ ಹೇಳಿತ್ತು.

“ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಿದ್ದಾರೆ, ಅವರು ಸೇನಾ ಭವನವನ್ನು ಧ್ವಂಸ ಮಾಡಲು ಬರುತ್ತಿದ್ದಾರೆ ಎಂದು ನಮಗೆ ಮೊದಲು ತಿಳಿದಿತ್ತು. ಆದ್ದರಿಂದ ಅವರು ಸೇನಾ ಭವನದ ಹತ್ತಿರ ತಲುಪುವ ಮುನ್ನವೇ ನಾವು ಅವರನ್ನು ನಿಲ್ಲಿಸಿದ್ದೇವೆ” ಎಂದು ಸೇನಾ ಶಾಸಕ ಸದಾ ಸರ್ವಾಂಕರ್‌ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಪಿಟಿಐ ಉಲ್ಲೇಖಿಸಿದೆ.

“ಬಾಳಾ ಸಾಹೇಬ್ ಠಾಕ್ರೆ ಅವರು ಶಿವಸೇನೆ ಭವನದಲ್ಲಿ ಕುಳಿತುಕೊಳ್ಳುತ್ತಿದ್ದರು. ಶಿವಸೇನೆ ಭವನವನ್ನು ಯಾರಾದರೂ ಟಾರ್ಗೆಟ್ ಮಾಡಿದರೆ ನಾವು ಸರಿಯಾದ ಉತ್ತರ ನೀಡುತ್ತೇವೆ. ಇದನ್ನು ನೀವು ಗೂಂಡಗಿರಿ ಎಂದು ಕರೆದರೆ ನಾವು ಗೂಂಡಾಗಳು” ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಬಿಜೆಪಿ ಏಕೆ ಇಷ್ಟು ಆಕ್ರೋಶಗೊಂಡಿದೆ..? ಸೇನಾ ಸಂಪಾದಕೀಯ ಏನು ಹೇಳಿದೆ..? ಇದು ಕೇವಲ ಆರೋಪಗಳ ಬಗ್ಗೆ ಸ್ಪಷ್ಟೀಕರಣವನ್ನು ಕೋರಿತ್ತು. ಆರೋಪಗಳು ಸುಳ್ಳು ಎಂದು ಸಾಬೀತುಪಡಿಸಿದರೆ, ಅದನ್ನು ನೆಲಸಮಗೊಳಿಸಿದವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿತ್ತು. ಸಂಪಾದಕೀಯದಲ್ಲಿ ಎಲ್ಲಿಯೂ ಬಿಜೆಪಿ ಭಾಗಿಯಾಗಿದೆ ಎಂದು ಉಲ್ಲೇಖಿಸಿಲ್ಲ. ನಿಮಗೆ ಓದಲು ಮತ್ತು ಬರೆಯಲು ಸಾಧ್ಯವಿಲ್ಲವೇ..? ಮೊದಲು ಆರೋಪಗಳು ಯಾವುವು ಮತ್ತು ಶಿವಸೇನೆ ವಕ್ತಾರರು ಏನು ಹೇಳಿದ್ದಾರೆಂದು ಅರ್ಥಮಾಡಿಕೊಳ್ಳಿ” ಎಂದು ಸಾಮ್ನಾ ಸಂಪಾದಕರು ಆಗಿರುವ ಸಂಜಯ್‌ ರಾವತ್‌ ಕಿಡಿಕಾರಿದ್ದಾರೆ.


 ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...