Homeಮುಖಪುಟನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

- Advertisement -
- Advertisement -

’ಮರಾಠರ ಹೆಮ್ಮೆ ಮತ್ತು ಹಿಂದುತ್ವದ ವಿಷಯಕ್ಕೆ ಬಂದಾಗ, ನಾವು ಗೂಂಡಾಗಳೇ, ನಮಗೆ ಯಾರೂ ಗೂಂಡಾಗಳು ಎಂದು ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ, ನಾವು ಪ್ರಮಾಣಪತ್ರ ಹೊಂದಿರುವ ಗೂಂಡಾಗಳೇ’ ಎಂದು ಶಿವಸೇನೆಯ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನ ದಾದರ್‌ನಲ್ಲಿರುವ ಸೇನಾ ಭವನದ ಹೊರಗೆ ಬಿಜೆಪಿ ಮತ್ತು ಶಿವಸೇನಾ ಪಕ್ಷಗಳ ಕಾರ್ಯಕರ್ತರ  ನಡುವೆ ಬುಧವಾರ ನಡೆದ ಘರ್ಷಣೆ ಬಗ್ಗೆ ಬಿಜೆಪಿಯು ಶಿವಸೇನೆಯ ಗೂಂಡಾಗಿರಿಯ ಬಗ್ಗೆ ಟ್ವಿಟ್ ಮಾಡಿ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನೆಯ ಸಂಜಯ್ ರಾವತ್ ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು ಎಂದಿದ್ದಾರೆ.

ಅಯೋಧ್ಯೆಯಲ್ಲಿ ಭೂ ವ್ಯವಹಾರ ವಿವಾದದ ಬಗ್ಗೆ ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ “ಆಕ್ರಮಣಕಾರಿ” ಟೀಕೆಗಳ ವಿರುದ್ಧ ಬಿಜೆಪಿ ಯುವ ಮೋರ್ಚಾ ವಿಭಾಗವು ಪ್ರತಿಭಟನಾ ಮೆರವಣಿಗೆ ನಡೆಸುವಾಗ ಶಿವಸೇನೆ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಶೀವಸೇನೆಯ ಕಾರ್ಯಕರ್ತರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆ. ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಬಿಜೆಪಿಗೆ ಭ್ರಷ್ಟಾಚಾರಿಗಳ ಮೇಲೆ ನಂಬಿಕೆಯೆ ಹೊರತು ರಾಮನ ಮೇಲಲ್ಲ: AAP ಸಂಸದ

ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದ್ದ ಈ ಘಟನೆಯಲ್ಲಿ, ’ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಲು ಬಿಜೆಪಿ ಕಾರ್ಯಕರ್ತರು ಬರುತ್ತಿದ್ದಾರೆ ಎಂಬ ಮಾಹಿತಿ ತಮಗೆ ದೊರೆತಿದೆ’ ಎಂದು ಶಿವಸೇನಾ ಹೇಳಿತ್ತು.

“ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಬರುತ್ತಿದ್ದಾರೆ, ಅವರು ಸೇನಾ ಭವನವನ್ನು ಧ್ವಂಸ ಮಾಡಲು ಬರುತ್ತಿದ್ದಾರೆ ಎಂದು ನಮಗೆ ಮೊದಲು ತಿಳಿದಿತ್ತು. ಆದ್ದರಿಂದ ಅವರು ಸೇನಾ ಭವನದ ಹತ್ತಿರ ತಲುಪುವ ಮುನ್ನವೇ ನಾವು ಅವರನ್ನು ನಿಲ್ಲಿಸಿದ್ದೇವೆ” ಎಂದು ಸೇನಾ ಶಾಸಕ ಸದಾ ಸರ್ವಾಂಕರ್‌ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಪಿಟಿಐ ಉಲ್ಲೇಖಿಸಿದೆ.

“ಬಾಳಾ ಸಾಹೇಬ್ ಠಾಕ್ರೆ ಅವರು ಶಿವಸೇನೆ ಭವನದಲ್ಲಿ ಕುಳಿತುಕೊಳ್ಳುತ್ತಿದ್ದರು. ಶಿವಸೇನೆ ಭವನವನ್ನು ಯಾರಾದರೂ ಟಾರ್ಗೆಟ್ ಮಾಡಿದರೆ ನಾವು ಸರಿಯಾದ ಉತ್ತರ ನೀಡುತ್ತೇವೆ. ಇದನ್ನು ನೀವು ಗೂಂಡಗಿರಿ ಎಂದು ಕರೆದರೆ ನಾವು ಗೂಂಡಾಗಳು” ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಬಿಜೆಪಿ ಏಕೆ ಇಷ್ಟು ಆಕ್ರೋಶಗೊಂಡಿದೆ..? ಸೇನಾ ಸಂಪಾದಕೀಯ ಏನು ಹೇಳಿದೆ..? ಇದು ಕೇವಲ ಆರೋಪಗಳ ಬಗ್ಗೆ ಸ್ಪಷ್ಟೀಕರಣವನ್ನು ಕೋರಿತ್ತು. ಆರೋಪಗಳು ಸುಳ್ಳು ಎಂದು ಸಾಬೀತುಪಡಿಸಿದರೆ, ಅದನ್ನು ನೆಲಸಮಗೊಳಿಸಿದವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿತ್ತು. ಸಂಪಾದಕೀಯದಲ್ಲಿ ಎಲ್ಲಿಯೂ ಬಿಜೆಪಿ ಭಾಗಿಯಾಗಿದೆ ಎಂದು ಉಲ್ಲೇಖಿಸಿಲ್ಲ. ನಿಮಗೆ ಓದಲು ಮತ್ತು ಬರೆಯಲು ಸಾಧ್ಯವಿಲ್ಲವೇ..? ಮೊದಲು ಆರೋಪಗಳು ಯಾವುವು ಮತ್ತು ಶಿವಸೇನೆ ವಕ್ತಾರರು ಏನು ಹೇಳಿದ್ದಾರೆಂದು ಅರ್ಥಮಾಡಿಕೊಳ್ಳಿ” ಎಂದು ಸಾಮ್ನಾ ಸಂಪಾದಕರು ಆಗಿರುವ ಸಂಜಯ್‌ ರಾವತ್‌ ಕಿಡಿಕಾರಿದ್ದಾರೆ.


 ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...