Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಆಗಸ್ಟ್ - ಸೆಪ್ಟಂಬರ್‌ ತಿಂಗಳಿನಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಅಲೆ ಅಪ್ಪಳಿಸಬಹುದೆಂದು ಅಂದಾಜಿಸಲಾಗಿದೆ.

- Advertisement -
- Advertisement -

ಇಡೀ ರಾಷ್ಟ್ರ ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದೆ. ಪ್ರಕರಣಗಳ ಸಂಖ್ಯೆ ಇಳಿಯುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿರುವ ಸಮಯದಲ್ಲಿಯೇ ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಯೇ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದ್ದು ಡೆಲ್ಟಾ ಪ್ಲಸ್ ಎಂಬ ಭಿನ್ನರೂಪದ ವೈರಸ್ ಹೆಚ್ಚಿನ ಪ್ರಕರಣಗಳನ್ನು ಹರಡುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ ಟಾಸ್ಕ್‌ ಫೋರ್ಸ್‌ ಅಭಿಪ್ರಾಯಪಟ್ಟಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡಿರುವ ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳೆರಡರಲ್ಲೂ ಅಗತ್ಯ ಔಷಧಿಗಳು ಮತ್ತು ಆರೋಗ್ಯ ಸಲಕರಣೆಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಹಿರಿಯ ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಡೆಲ್ಟಾ ವೇರಿಯೆಂಟ್‌ನಿಂದಾಗಿ ಕೋವಿಡ್ ಎರಡನೇ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡಬಂದಿದ್ದವು. ಹಾಗಾಗಿ ಈಗ ಮೂರನೇ ಅಲೆಯ ‘ಡೆಲ್ಟಾ ಪ್ಲಸ್ ವೇರಿಯೆಂಟ್’ ಇನ್ನು ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿದೆಯೆಂದು ರಾಜ್ಯ ಆರೋಗ್ಯ ಇಲಾಖೆ ಅಂದಾಜಿಸಿದೆ. ಆಗಸ್ಟ್ ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಸಾಧ್ಯತೆಯನ್ನು ಊಹಿಸಲಾಗಿತ್ತು. ಆದರೆ ಅದಕ್ಕೂ 2- 4 ವಾರಗಳ ಮುಂಚೆಯೇ ಅದು ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎರಡನೆ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಯಿದೆ. ರಾಜ್ಯ 8 ಲಕ್ಷ ಸಕ್ರಿಯ ಪ್ರಕರಣಗಳನ್ನು ಎದುರಿಸಬೇಕಾಗಬಹುದು ಮತ್ತು ಅದರಲ್ಲಿ ಶೇ.10 ರಷ್ಟು ಮಕ್ಕಳು ಸೇರಿರುತ್ತಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಹರಾಷ್ಟ್ರವು ಕೋವಿಡ್ ಮೊದಲ ಅಲೆಯಲ್ಲಿ 19 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದರೆ ಎರಡನೇ ಅಲೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿತ್ತು.

ಕೋವಿಡ್ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವುದು, ಆರ್‌ಪಿಸಿಆರ್ ಟೆಸ್ಟ್‌ಗಳನ್ನು ಮಾಡಿಸಿಕೊಳ್ಳುವುದನ್ನು ಜನರು ಪಾಲಿಸಬೇಕು. ಆಗಸ್ಟ್ ಸೆಪ್ಟಂಬರ್‌ ವೇಳೆಗೆ ರಾಜ್ಯಕ್ಕೆ ಹೆಚ್ಚಿನ ಲಸಿಕೆಗಳು ಲಭ್ಯವಾಗಲಿದ್ದು ಸಾಧ್ಯವಾದಷ್ಟು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದ್ದಾರೆ.

ಕರ್ನಾಟಕದ ಪರಿಸ್ಥಿತಿ

ಕೋವಿಡ್ ಎರಡನೇ ಅಲೆ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಕೆಲ ದಿನಗಳ ನಂತರವಷ್ಟೇ ಕರ್ನಾಟಕವನ್ನು ಆಕ್ರಮಿಸಿತ್ತು. ಈ ಬಾರಿ ಆಗಸ್ಟ್ – ಸೆಪ್ಟಂಬರ್‌ ತಿಂಗಳಿನಲ್ಲಿ ರಾಜ್ಯಕ್ಕೆ ಮೂರನೇ ಅಲೆಯನ್ನು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ – ನವೆಂಬರ್ ವೇಳೆಗೆ ಅದು ಇಳಿಮುಖವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿರುವ ಕಾರ್ಯಪಡೆಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಟಾಸ್ಕ್‌ ಫೋರ್ಸ್‌ನ ಸದಸ್ಯರಾದ ಡಾ. ಪ್ರದೀಪ್‌ರವರು “ರಾಜ್ಯದಲ್ಲಿ ಡೆಲ್ಟಾ ವೇರಿಯೆಂಟ್ ಕುರಿತು ಕಣ್ಗಾವಲು ಇಡಲು ಆರು ಕಡೆ ಕಾರ್ಯನಿರತರಾಗಿದ್ದೇವೆ. ಆಗಸ್ಟ್-ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಡೆಲ್ಟಾ ವೇರಿಯೆಂಟ್‌ ಬರುತ್ತಾ ಅಥವಾ ಬೇರೆಯದು ಬರುತ್ತಾ ಗೊತ್ತಿಲ್ಲ. ಹಳೆ ಸ್ಟ್ರೈನ್ ಅಂತೂ ಬರುವ ಸಾಧ್ಯತೆಯಿದೆ. ನಮ್ಮಲ್ಲಿ ಬೇರೆ ವೇರಿಯೆಂಟ್‌ಗಳು ಇರುವುದರಿಂದ ಎಲ್ಲದರ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ” ಎಂದರು.

ಮೂರನೇ ಅಲೆ ಬರುವುದು ಖಚಿತ. ಅದಕ್ಕಾಗಿ ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಎರಡನೇ ಅಲೆಯಲ್ಲಿ ಮಾಡಿದ ತಪ್ಪುಗಳಿಂದ ಎಲ್ಲಾ ರಾಜ್ಯಗಳು ಮತ್ತು ಸರ್ಕಾರಗಳು ಪಾಠ ಕಲಿಯಬೇಕಿದೆ. ಬೆಡ್‌ಗಳು, ಆಮ್ಲಜನಕ ಮತ್ತು ಔಷಧಿಗಳಿಗಾಗಿ ಜನ ಪರದಾಡದೇ ವೈಜ್ಞಾನಿಕವಾಗಿ ಮೂರನೇ ಅಲೆಯನ್ನು ಹೆಚ್ಚಿನ ಸಾವು-ನೋವುಗಳಿಲ್ಲದೆ ಎದುರಿಸಬೇಕಾದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ದೆಹಲಿ ಸಿದ್ಧತೆ: 5,000 ಯುವಜನರಿಗೆ ವೈದ್ಯಕೀಯ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...