Homeಕರ್ನಾಟಕತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ...

ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರ ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸಬೇಕು ಎಂದು ಆದೇಶಿಸಲಾಗಿದೆ

- Advertisement -
- Advertisement -

2020 ರ ಕೊರೊನಾ ಸಾಂಕ್ರಮಿಕ ಸಮಯದಲ್ಲಿ ತಬ್ಲೀಘಿ ಜಮಾತ್‌ ಅನ್ನು ಗುರಿಯಾಗಿಸಿ ಕೊಂಡಿದ್ದಕ್ಕೆ ಕನ್ನಡ ಚಾನೆಲ್‌ಗಳಾದ ‘ನ್ಯೂಸ್‌ 18 ಕನ್ನಡ’ ಮತ್ತು ‘ಸುವರ್ಣ ನ್ಯೂಸ್‌’ಗೆ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿದೆ. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿದೆ.

NBSA ಗೆ ಬೆಂಗಳೂರು ಮೂಲದ ಕ್ಯಾಂಪೇನ್ ಎಗೇನ್ಸ್ಟ್ ಹೇಟ್ ಸ್ಪೀಚ್ (CAHS) ದೂರುಗಳನ್ನು ಸಲ್ಲಿಸಿತ್ತು. ಏಪ್ರಿಲ್ 1, 2020 ರಂದು ತಬ್ಲಿಘಿ ಜಮಾಅತ್‌ ಬಗ್ಗೆ ನ್ಯೂಸ್‌ 18 ಕನ್ನಡ ಪ್ರಸಾರ ಮಾಡಿದ ಎರಡು ಕಾರ್ಯಕ್ರಮಗಳಿಗೆ CAHS ಆಕ್ಷೇಪ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

NBSA ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು ನೀಡಿದ ಆದೇಶದಲ್ಲಿ, “… ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ರೀತಿ ಹೆಚ್ಚು ಆಕ್ಷೇಪಾರ್ಹವಾಗಿತ್ತು. ಸುದ್ದಿ ವರದಿಯು ಶುದ್ಧ ಊಹಾಪೋಹವನ್ನು ಆಧರಿಸಿತ್ತು. ಕಾರ್ಯಕ್ರಮದ ಧ್ವನಿ, ವಸ್ತು, ಭಾಷೆ ಒರಟಾಗಿದ್ದು, ಪೂರ್ವಾಗ್ರಹ ಮತ್ತು ಅಗೌರವದಿಂದ ಕೂಡಿತ್ತು … ” ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಕ್ಕೆ ನ್ಯೂಸ್‌ 18 ಕನ್ನಡಕ್ಕೆ NBSA  1 ಲಕ್ಷ ದಂಡ ವಿಧಿಸಿದೆ. ಅಲ್ಲದೆ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೂನ್ 23 ರಂದು ರಾತ್ರಿ 9 ಗಂಟೆಯ ಸುದ್ದಿಗೆ ಮುಂಚಿತವಾಗಿ ಕ್ಷಮೆಯಾಚಿಸುವುದನ್ನು ಪ್ರಸಾರ ಮಾಡಬೇಕು ಚಾನೆಲ್‌ಗೆ ನಿರ್ದೇಶನ ನೀಡಿದೆ. ಜೊತೆಗೆ ಎಲ್ಲಾ ವೆಬ್ ಪೋರ್ಟಲ್‌ಗಳಿಂದ ಎರಡು ಕಾರ್ಯಕ್ರಮಗಳ ವೀಡಿಯೊಗಳನ್ನು ತೆಗೆಯುವಂತೆ ಪ್ರಾಧಿಕಾರವು ಪ್ರಸಾರಕರನ್ನು ಕೇಳಿದೆ.

ಮೇ 31 ಮತ್ತು ಏಪ್ರಿಲ್ 4, 2020 ರ ನಡುವೆ ಸುವರ್ಣ ನ್ಯೂಸ್ ಪ್ರಸಾರ ಮಾಡಿದ ಏಳು ಕಾರ್ಯಕ್ರಮಗಳ ವಿರುದ್ಧದ ದೂರಿನ ಮೇರೆಗೆ, NBSA ತನ್ನ ಆದೇಶದಲ್ಲಿ, “ಕಾರ್ಯಕ್ರಮದಲ್ಲಿ ಕೊರೊನಾ ವೈರಸ್ ಹರಡುವಿಕೆಯ ಸಂಪೂರ್ಣ ಆಪಾದನೆಯನ್ನು ತಬ್ಲಿಘಿ ಜಮಾಅತ್‌ ಮೇಲೆ ಹಾಕಲಾಗಿದ್ದು, ಅದನ್ನು ನಿರ್ದಿಷ್ಟ ಸಮುದಾಯದ ವಿರುದ್ದ ತಿರುಗಿಸಲಾಗಿದೆ. ಜೊತೆಗೆ ಕಾರ್ಯಕ್ರಮಗಳ ಶೀರ್ಷಿಕೆಗಳು ಕೋಮು ಹಿಂಸಾಚಾರವನ್ನು ಪ್ರಚೋದಿಸುವ ಕಪಟತೆಯನ್ನು ಹೊಂದಿವೆ … ಈ ಕಾರ್ಯಕ್ರಮಗಳಲ್ಲಿ ಖಂಡಿತವಾಗಿಯೂ ಸಮತೋಲನ, ವಸ್ತುನಿಷ್ಠತೆ ಮತ್ತು ನಿಷ್ಪಕ್ಷಪಾತತೆಯ ಕೊರತೆಯಿದೆ. ಅಲ್ಲದೆ ಈ ಕಾರ್ಯಕ್ರಮಗಳು ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಬಹಿರಂಗವಾಗಿ ಪೂರ್ವಾಗ್ರಹ ಪೀಡಿತವಾಗಿದ್ದವು” ಎಂದು ಹೇಳಿದೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಸುವರ್ಣ ನ್ಯೂಸ್‌ಗೆ 50 ಸಾವಿರ ದಂಡವನ್ನು ವಿಧಿಸಿರುವ NBSA, ಸಮಾಜಿಕ ಜಾಲತಾಣದಲ್ಲಿನ ವಿಡಿಯೊಗಳನ್ನು ಕಿತ್ತು ಹಾಕುವಂತೆ ಕೇಳಿದೆ.

ಏಪ್ರಿಲ್ 2, 2020 ರಂದು ಟೈಮ್ಸ್‌ ನೌ ಚಾನೆಲ್‌ನಲ್ಲಿ ಪ್ರಸಾರವಾದ, “ತಬ್ಲೀಘಿ ಜಮಾಅತ್ ಉದ್ದೇಶಪೂರ್ವಕವಾಗಿ ಭಾರತವನ್ನು ಹಾಳುಮಾಡುತ್ತಿದೆಯೇ?” ಎಂಬ ಪ್ಯಾನೆಲ್‌ ಚರ್ಚೆಯ ವಿರುದ್ಧದ ದೂರಿನ ಮೇರೆಗೆ, “ಸಮುದಾಯಗಳ ನಡುವೆ ಕೋಮು ಭಿನ್ನಾಭಿಪ್ರಾಯವನ್ನು ಉಂಟುಮಾಡುವ ಸೂಕ್ಷ್ಮ ವಿಷಯದ ಬಗ್ಗೆ ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡಿದೆ” ಎಂದು NBSA ಯು ಚಾನೆಲ್‌ಗೆ ಖಂಡನೆಯನ್ನು ಹೊರಡಿಸಿದೆ.

ನ್ಯಾಯಮೂರ್ತಿ ಎ.ಕೆ. ಸಿಕ್ರಿ ತನ್ನ ಆದೇಶದಲ್ಲಿ, “ಕಾರ್ಯಕ್ರಮದ ನಿರೂಪಕ ತಬ್ಲೀಘಿ ಜಮಾಅತ್‌ಗೆ ಸಂಬಂಧಿಸಿದ ಕೆಲವು ಹೇಳಿಕೆಗಳನ್ನು ನೀಡಿದ್ದಾನೆ, ಅದು ನಿಖರತೆ, ನಿಷ್ಪಕ್ಷಪಾತತೆ, ತಟಸ್ಥತೆ ಮತ್ತು ವಸ್ತುನಿಷ್ಠತೆಯಂತಹ ಮೂಲಭೂತ ತತ್ವಗಳ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Truth is always Truth.
    Journalism is one of the pillar of Democracy.
    Democracy is not easily achieved,
    So save it with responsibility
    Hope you will do it ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...