Homeಅಂತರಾಷ್ಟ್ರೀಯಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

ಬರೋಬ್ಬರಿ 1098 ಕ್ಯಾರೆಟ್‌ನ ಜಗತ್ತಿನ ಮೂರನೇ ಅತಿದೊಡ್ಡ ವಜ್ರ ಬೋಟ್ಸ್ವಾನದಲ್ಲಿ ಪತ್ತೆ

- Advertisement -
- Advertisement -

ಜಗತ್ತಿನಲ್ಲಿ ಅತ್ಯಂತ ಅಮೂಲ್ಯ ವಸ್ತುಗಳ ಪಟ್ಟಿಯಲ್ಲಿ ವಜ್ರವು ಅಗ್ರಸ್ಥಾನವನ್ನು ಪಡೆದಿದೆ. ಅಮೂಲ್ಯವಾದ ವಜ್ರದ ಹರಳುಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ವಜ್ರದ ಗಣಿಗಳು ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆಫ್ರಿಕಾದ ಕೆಲವು ದೇಶಗಳನ್ನು ಹೊರತುಪಡಿಸಿದರೆ ಜಗತ್ತಿನಲ್ಲಿ‌ ಇನ್ನೆಲ್ಲೂ ಹೇರಳವಾದ ವಜ್ರದ ಗಣಿಗಳಿಲ್ಲ. ಈಗ ಜಗತ್ತಿನಲ್ಲಿ ಅನೇಕರ ಹುಬ್ಬೇರಿಸುವ ಅತಿದೊಡ್ಡ ವಜ್ರವೊಂದು ಬೋಟ್ಸ್ವಾನದಲ್ಲಿ ದೊರೆತಿದೆ. ಅತ್ಯಂತ ಶ್ರೇಷ್ಠ ಗುಣಮಟ್ಟದ ಈ ವಜ್ರ ಬರೋಬ್ಬರಿ 1098 ಕ್ಯಾರೆಟ್‌ನದ್ದಾಗಿದೆ. ಸದ್ಯ ಈ ವಜ್ರವನ್ನು ಬೋಟ್ಸ್ವಾನದ ಅಧ್ಯಕ್ಷ ಮೊಕಗ್ವೀತ್ಸಿ ಮಸಿಸಿ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಇದು ಜಗತ್ತಿನ 3 ನೇ ಅತಿದೊಡ್ಡ ವಜ್ರ ಎಂಬ ಹೆಗ್ಗಳಿಕೆ ಪಡೆದಿದೆ.

ಬೋಟ್ಸ್ವಾನ ರಾಜಧಾನಿ ಗಾಬೊರೇನೆ ಪಟ್ಟಣದಿಂದ 75 ಮೈಲಿ ದೂರವಿರುವ ಜ್ವನೆಂಗ್ ಗಣಿಯಿಂದ ಜೂನ್ ಮೊದಲ ವಾರದಲ್ಲಿ ಅದನ್ನು ಹೊರತೆಗೆಯಲಾಗಿತ್ತು.

ಈ ವಜ್ರದ ಗಣಿಯು ದೇಬಸ್ವಾನಾ‌ ಮೈನಿಂಗ್ ಕಂಪನಿ ಮತ್ತು ಬೋಟ್ಸ್ವಾನ ಸರ್ಕಾರದ ಜಂಟಿ ಆಡಳಿತದಲ್ಲಿ ನಡೆಯುತ್ತಿದೆ.

ಈ ವಜ್ರದಿಂದ ಬರುವ ಹಣವನ್ನು ದೇಶದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಬೋಟ್ಸ್ವಾನ ಸರ್ಕಾರ ಟ್ವೀಟ್ ಮಾಡಿದೆ.

1982 ರಲ್ಲಿ ಆರಂಭವಾದ ದಬಸ್ವಾನ ವಜ್ರದ ಗಣಿಯಲ್ಲಿ ವರ್ಷಕ್ಕೆ 12.5 ಮಿಲಯನ್ ನಿಂದ 15 ಮಿಲಯನ್ ಕ್ಯಾರೆಟ್ ವರೆಗೆ ವಜ್ರವನ್ನು ಹೊರತೆಗೆಯಲಾಗುತ್ತದೆ. 1967 ರಲ್ಲಿ ಮೊಟ್ಟ ಮೊದಲ ಬಾರಿಗೆ ಬೋಸ್ವಾನಾದಲ್ಲಿ ವಜ್ರ ಸಿಕ್ಕಿತ್ತು.

ಜಗತ್ತಿನ ಅತಿದೊಡ್ಡ ವಜ್ರವು 1905 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಅದನ್ನು ಕ್ಯುಲಿನನ್ ಡೈಮೆಂಡ್ ಎಂದು ಕರೆಯಲಾಗುತ್ತದೆ. 3,106 ಕ್ಯಾರೆಟ್‌ನ ಓ ವಜ್ರವನ್ನು ಚಿಕ್ಕ ಚಿಕ್ಕ ತುಣುಕುಗಳನ್ನಾಗಿ ಮಾಡಿ ಬ್ರಿಟನ್ ರಾಣಿಯ ಕಿರೀಟಕ್ಕೆ ಅಲಂಕರಿಸಲಾಗಿತ್ತು.

ಜಗತ್ತಿನ ಎರಡನೇ ಅತಿದೊಡ್ಡ ವಜ್ರವು 2015 ರಲ್ಲಿ ಬೋಟ್ಸ್ವಾನದಲ್ಲಿಯೇ ಪತ್ತೆಯಾಗಿತ್ತು. ಕೆನಡಾದ ಮೈನಿಂಗ್ ಕಂಪನಿ ಲ್ಯುಕಾರ ಕರೋವೆ ಗಣಿಯಲ್ಲಿ ಈ ವಜ್ರವನ್ನು ಹೊರತೆಗೆದಿತ್ತು. ಎರಡು ವರ್ಷಗಳ ನಂತರ 1,109 ಕ್ಯಾರೆಟ್‌ನ ಈ ವಜ್ರವನ್ನು 55 ಮಿಲಿಯನ್ ಡಾಲರ್ ಬೆಲೆಗೆ ಪ್ರಸಿದ್ಧ ವಜ್ರಾಭರಣ ತಯಾರಿಕಾ ಸಂಸ್ಥೆ ಗ್ರಾಫ್ ಖರೀದಿಸಿತ್ತು.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...