Homeಕರೋನಾ ತಲ್ಲಣಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇತ್ತೀಚಿನ ದಿನಗಳಲ್ಲಿ ಅನೇಕ ರಾಜಕೀಯ ಚರ್ಚೆಗೆ ಗುರಿಯಾಗುತ್ತಿದ್ದಾರೆ. ಬೆಡ್ ಬ್ಲಾಕಿಂಗ್, ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನ್ ಜಾಹೀರಾತು ಸೇರಿ ಇತ್ತೀಚೆಗೆ ತೇಜಸ್ವಿ ಸೂರ್ಯ ಹಲವು ವಿವಾದಗಳಿಗೆ ಕಾರಣರಾಗಿದ್ದರು. ಈಗ ಮತ್ತೊಮ್ಮೆ ಅವರ ವಿರುದ್ಧ ದೂರು ದಾಖಲಾಗಿದೆ. RTI ಕಾರ್ಯಕರ್ತ ವಿಜಯ್ ಡೇನಿಸ್ ಅವರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಲಾಕ್ ಡೌನ್ ನಿಯಮಗಳ ಉಲ್ಲಂಘನೆ ವಿಚಾರದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಕರ್ನಾಟಕದಲ್ಲಿ ಎಲ್ಲಾ ಹೊಟೇಲ್ ಗಳು ಪಾರ್ಸೆಲ್ ಸರ್ವಿಸ್ ಗಳನ್ನು ಮಾತ್ರ ನೀಡುತ್ತಿವೆ. ಯಾವುದೇ ಹೊಟೇಲ್ ಗಳಲ್ಲಿ ಊಟ ತಿನಿಸುಗಳನ್ನು ಸವಿಯಲು ಸಾರ್ವಜನಿಕರಿಗೆ ಇದುವರೆಗೆ ಅನುಮತಿಯಿಲ್ಲ. ಮುಖ್ಯಮಂತ್ರಿಯಿಂದ ಹಿಡಿದು ಸಾರ್ವಜನಿಕರವರೆಗೆ ಎಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ. ಜನಪ್ರತಿನಿಧಿಗಳಂತೂ ಲಾಕ್ ಡೌನ್ ನಿಯಮವನ್ನು ಪಾಲಿಸಿ ಜನರಿಗೆ ಮಾದರಿಯಾಗಿ ವರ್ತಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಆದರೆ ಸಂಸದ ತೇಜಸ್ವಿ ಸೂರ್ಯ ಮಾತ್ರ ಲಾಕ್ ಡೌನ್ ನಿಯಮವನ್ನು ಪಾಲಿಸುವ ಉತ್ಸಾಹ ತೋರುತ್ತಿರುವಂತೆ ಕಾಣುತ್ತಿಲ್ಲ. ಸಂಸದ ತೇಜಸ್ವೀ ಸೂರ್ಯ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಹೊಟೇಲ್ ಒಂದರಲ್ಲಿ ಗಾಯಕ ವಿಜಯ ಪ್ರಕಾಶ್ ಅವರೊಂದಿಗೆ ರಾತ್ರಿಯ ಭೋಜನವನ್ನು ಸವಿದಿರುವ ಫೋಟೊಗಳು ವೈರಲ್ ಆಗಿವೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರಾಂಡ್ ಹೊಟೇಲ್ ನಲ್ಲಿ ಗಾಯಕ ವಿಜಯ ಪ್ರಕಾಶ್ ಮತ್ತು ತೇಜಸ್ವಿ ಸೂರ್ಯ ಮಂಗಳವಾರ ಜೂನ್ 15 ರ ರಾತ್ರಿ ಭೋಜನವನ್ನು ಸವಿದಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು.

RTI ಕಾರ್ಯಕರ್ತ ವಿಜಯ್ ಡೆನ್ನಿಸ್ ಅವರು ಹಲಸೂರು ಗೇಟ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತೇಜಸ್ವಿ ಸೂರ್ಯ ಅವರ ಭೋಜನದ ವಿಷಯವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅವರ ನಡೆ NDMA ಆ್ಯಕ್ಟ್ ಮತ್ತು IPC ಸೆಕ್ಷನ್ ಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂಸದರ ವಿರುದ್ಧ ತಕ್ಷಣವೇ FIR ದಾಖಲಿಸಬೇಕು ಎಂದು ವಿಜಯ್ ಡೆನ್ನಿಸ್ ತಮ್ಮ ದೂರಿನಲ್ಲಿ ಪೊಲೀಸರನ್ನು ಆಗ್ರಹಿಸಿದ್ದಾರೆ.

ವಿಜಯ್ ಡೆನ್ನಿಸ್ ದೂರು ದಾಖಲಿಸಿ ದಿನ ಕಳೆದಿದ್ದರೂ ಇದುವರೆಗೆ ಪೊಲೀಸರು ಈ ಸಂಬಂಧ ಸಂಸದರ ವಿರುದ್ಧ ಯಾವುದೇ FIR ದಾಖಲಿಸಿರುವುದಿಲ್ಲ. ಪ್ರತಿಕ್ರಿಯೆಗಾಗಿ ಠಾಣಾ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಉತ್ತರಿಸಲು ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ಕಠಿಣ ನಿರ್ಬಂಧಗಳ ಕಾರಣದಿಂದ ಕೊರೋನಾ ಎರಡನೇ ಅಲೆಯ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ. ತಜ್ಞರು ಕೊರೋನಾ 3 ನೇ ಅಲೆಯನ್ನು ನಿರೀಕ್ಷಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಸಂಜೆ 7 ರ ನಂತರ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಕೂಡ ಜಾರಿಯಲ್ಲಿದೆ. ಅಗತ್ಯ ಸೇವೆಗಳ ಹೊರತುಪಡಿಸಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧವಿದೆ. ಆದರೆ ಇದೆಲ್ಲವನ್ನೂ ಕಡೆಗಣಿಸಿ ಸಂಸದರು ಹೊಟೇಲ್ ನಲ್ಲಿ ಊಟಕ್ಕೆ ತೆರಳಿರುವುದು ಎಲ್ಲರಲ್ಲೂ ಆಶ್ಚರ್ಯವನ್ನು ಹುಟ್ಟುಹಾಕಿದೆ. ಕೊರೋನಾ ವಿರುದ್ಧ ಉಡಾಫೆಯ ವರ್ತನೆ ಸಲ್ಲದು ಎಂದು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ :ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...