Homeಮುಖಪುಟ‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

- Advertisement -
- Advertisement -

ಮಾಲೆಗಾಂವ್‌ ಭಯೋತ್ಪಾದಕ ಸ್ಪೋಟದ ಪ್ರಮುಖ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌ ಅವರ ಕುರಿತಂತೆ, ‘ಪ್ರಧಾನಿ ಮೋದಿ ಮನಸು ಬದಲಾಯಿಸಿರುವ ಹಾಗೆ ತೋರುತ್ತಿದೆ’ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್‌ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಅಂತರ್‌‌ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಅಂದು ಸಂಸದರಿಗಾಗಿ ಲೋಕಸಭೆಯು ನಾಲ್ಕು ಆನ್‌ಲೈನ್‌‌‌‌ ಅಧಿವೇಶನಗಳನ್ನು ಆಯೋಜಿಸಿದೆ. ಅದರಲ್ಲಿ ಒಂದು ಅಧಿವೇಶನವನ್ನು ಉದ್ದೇಶಿಸಿ ಬಿಜೆಪಿಯ ವಿವಾದಾತ್ಮಕ ಸಂಸದೆ ಪ್ರಜ್ಞಾ ಠಾಕೂರ್‌ ಮಾತನಾಡಲಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು 2019 ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ದೇಶಭಕ್ತ” ಎಂದು ವೈಭವೀಕರಿಸಿ ಹೇಳಿಕೆ ನೀಡಿದ್ದ ಪ್ರಜ್ಞಾ ಠಾಕೂರ್ ಅವರ ಟೀಕೆಗಳನ್ನು ಪ್ರಧಾನಿ ಮೋದಿ ಖಂಡಿಸಿದ್ದರು. ಈ ಹೇಳಿಕೆಗಾಗಿ ತಾನು ಅವರನ್ನು ಮನಪೂರ್ವಕವಾಗಿ ಕ್ಷಮಿಸುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ವಿವಾದದ ಕುರಿತು ಪ್ರಧಾನಿ ಮೋದಿ ನೀಡುವ ಹೇಳಿಕೆಯ ವಿಡಿಯೋವನ್ನು ತನ್ನ ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿರುವ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಮಾಣಿಕಂ ಟ್ಯಾಗೋರ್, “ಮೋದಿ ಸಾಹೀಬ್‌ ಅವರು ಪ್ರಜ್ಞಾ ಠಾಕೂರ್ ಅವರ ಕುರಿತಂತೆ ಮನಸ್ಸನ್ನು ಬದಲಾಯಿಸಿದ್ದೀರಾ? ಪ್ರಧಾನ ಮಂತ್ರಿಯ ಕನಸಿನ ಯೋಜನೆಯಾದ ಯೋಗ ದಿನದಂದು ಎಲ್ಲಾ ಸಂಸದರಿಗೆ ಅವರು ಮುಖ್ಯ ಅತಿಥಿಯಾಗಲಿದ್ದಾರೆ. ಇದು ಮನಪೂರ್ವಕವಾಗಿ ಕ್ಷಮಿಸಿರುವುದನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ.

ವಿಡಿಯೊದಲ್ಲಿ, ಗಾಂಧಿಯ ಕೊಲೆಗಾರನನ್ನು ಹೊಗಳಿದ ಬಿಜೆಪಿ ಅಭ್ಯರ್ಥಿಯ ಬಗ್ಗೆ ಮೋದಿಯೊಂದಿಗೆ ಪತ್ರಕರ್ತ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಮೋದಿ, “ಗಾಂಧಿ ಮತ್ತು ಗಾಡ್ಸೆ ಕುರಿತಾದ ಕಾಮೆಂಟ್‌ಗಳು ಭಯಾನಕವಾಗಿದೆ. ಇದು ತಿರಸ್ಕಾರಾರ್ಹ ಮತ್ತು ಖಂಡನೀಯವಾಗಿದ್ದು, ಈ ರೀತಿಯ ಮನಸ್ಥಿತಿಯು ಸುಸಂಸ್ಕೃತ ಸಮಾಜದ್ದಲ್ಲ. ಈ ರೀತಿಯ ಹೇಳಿಕೆ ನೀಡುವವರು ಭವಿಷ್ಯದಲ್ಲಿ 100 ಬಾರಿ ಯೋಚಿಸಬೇಕು. ತನ್ನ ಹೇಳಿಕೆಗಾಗಿ ಅವರು ಈಗ ಕ್ಷಮೆಯಾಚಿಸಿದ್ದಾರೆ, ಅದು ಒಳ್ಳೆಯದಾಗಿದೆ. ಆದರೆ ನಾನು ಅವರನ್ನು ನನ್ನ ಮನಪೂರ್ವಕವಾಗಿ ಕ್ಷಮಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

 

ಪ್ರಜ್ಞಾ ಠಾಕೂರ್ ಭೋಪಾಲ್‌ನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರನ್ನು ಸೋಲಿಸಿ ಚುನಾವಣೆಯಲ್ಲಿ ಜಯಗಳಿಸಿದ್ದರು. ಅಂದಿನಿಂದ ಅವರು ಹಲವಾರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಲೆ ಬಂದಿದ್ದಾರೆ.

ಮಹಾತ್ಮ ಗಾಂಧಿ ಮೇಲಿನ ವಿವಾದಾತ್ಮಕ ಹೇಳಿಕೆ ನಂತರ ಪ್ರಜ್ಞಾ ಠಾಕೂರ್ ಅವರನ್ನು ರಕ್ಷಣಾ ಸಂಸದೀಯ ಸಮಿತಿಯಿಂದ ಕಿತ್ತುಹಾಕಲಾಯಿತು ಮತ್ತು ಬಿಜೆಪಿ ಸಂಸದೀಯ ಸಭೆಗಳಿಂದ ಹೊರಗಿಡಲಾಗಿತ್ತು.

ಸಂಸದೆ ಪ್ರಜ್ಞಾ ಠಾಕೂರ್ 2008 ರ ‘ಮಾಲೆಗಾಂವ್ ಸ್ಫೋಟ’ದಲ್ಲಿನ ಪ್ರಮುಖ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಡೆಯಿದ್ದಾರೆ. ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಸ್ಫೋಟಕ ಸಾಧನವೊಂದು ಸ್ಪೋಟಗೊಂಡಿದ್ದರಿಂದ ಆರು ಜನರು ಸಾವನ್ನಪ್ಪಿದ್ದು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂದಿದ್ದರು.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...