Homeಮುಖಪುಟ‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

- Advertisement -
- Advertisement -

ಮಾಲೆಗಾಂವ್‌ ಭಯೋತ್ಪಾದಕ ಸ್ಪೋಟದ ಪ್ರಮುಖ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌ ಅವರ ಕುರಿತಂತೆ, ‘ಪ್ರಧಾನಿ ಮೋದಿ ಮನಸು ಬದಲಾಯಿಸಿರುವ ಹಾಗೆ ತೋರುತ್ತಿದೆ’ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್‌ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಅಂತರ್‌‌ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಅಂದು ಸಂಸದರಿಗಾಗಿ ಲೋಕಸಭೆಯು ನಾಲ್ಕು ಆನ್‌ಲೈನ್‌‌‌‌ ಅಧಿವೇಶನಗಳನ್ನು ಆಯೋಜಿಸಿದೆ. ಅದರಲ್ಲಿ ಒಂದು ಅಧಿವೇಶನವನ್ನು ಉದ್ದೇಶಿಸಿ ಬಿಜೆಪಿಯ ವಿವಾದಾತ್ಮಕ ಸಂಸದೆ ಪ್ರಜ್ಞಾ ಠಾಕೂರ್‌ ಮಾತನಾಡಲಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು 2019 ರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ದೇಶಭಕ್ತ” ಎಂದು ವೈಭವೀಕರಿಸಿ ಹೇಳಿಕೆ ನೀಡಿದ್ದ ಪ್ರಜ್ಞಾ ಠಾಕೂರ್ ಅವರ ಟೀಕೆಗಳನ್ನು ಪ್ರಧಾನಿ ಮೋದಿ ಖಂಡಿಸಿದ್ದರು. ಈ ಹೇಳಿಕೆಗಾಗಿ ತಾನು ಅವರನ್ನು ಮನಪೂರ್ವಕವಾಗಿ ಕ್ಷಮಿಸುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ವಿವಾದದ ಕುರಿತು ಪ್ರಧಾನಿ ಮೋದಿ ನೀಡುವ ಹೇಳಿಕೆಯ ವಿಡಿಯೋವನ್ನು ತನ್ನ ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿರುವ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಮಾಣಿಕಂ ಟ್ಯಾಗೋರ್, “ಮೋದಿ ಸಾಹೀಬ್‌ ಅವರು ಪ್ರಜ್ಞಾ ಠಾಕೂರ್ ಅವರ ಕುರಿತಂತೆ ಮನಸ್ಸನ್ನು ಬದಲಾಯಿಸಿದ್ದೀರಾ? ಪ್ರಧಾನ ಮಂತ್ರಿಯ ಕನಸಿನ ಯೋಜನೆಯಾದ ಯೋಗ ದಿನದಂದು ಎಲ್ಲಾ ಸಂಸದರಿಗೆ ಅವರು ಮುಖ್ಯ ಅತಿಥಿಯಾಗಲಿದ್ದಾರೆ. ಇದು ಮನಪೂರ್ವಕವಾಗಿ ಕ್ಷಮಿಸಿರುವುದನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ.

ವಿಡಿಯೊದಲ್ಲಿ, ಗಾಂಧಿಯ ಕೊಲೆಗಾರನನ್ನು ಹೊಗಳಿದ ಬಿಜೆಪಿ ಅಭ್ಯರ್ಥಿಯ ಬಗ್ಗೆ ಮೋದಿಯೊಂದಿಗೆ ಪತ್ರಕರ್ತ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಮೋದಿ, “ಗಾಂಧಿ ಮತ್ತು ಗಾಡ್ಸೆ ಕುರಿತಾದ ಕಾಮೆಂಟ್‌ಗಳು ಭಯಾನಕವಾಗಿದೆ. ಇದು ತಿರಸ್ಕಾರಾರ್ಹ ಮತ್ತು ಖಂಡನೀಯವಾಗಿದ್ದು, ಈ ರೀತಿಯ ಮನಸ್ಥಿತಿಯು ಸುಸಂಸ್ಕೃತ ಸಮಾಜದ್ದಲ್ಲ. ಈ ರೀತಿಯ ಹೇಳಿಕೆ ನೀಡುವವರು ಭವಿಷ್ಯದಲ್ಲಿ 100 ಬಾರಿ ಯೋಚಿಸಬೇಕು. ತನ್ನ ಹೇಳಿಕೆಗಾಗಿ ಅವರು ಈಗ ಕ್ಷಮೆಯಾಚಿಸಿದ್ದಾರೆ, ಅದು ಒಳ್ಳೆಯದಾಗಿದೆ. ಆದರೆ ನಾನು ಅವರನ್ನು ನನ್ನ ಮನಪೂರ್ವಕವಾಗಿ ಕ್ಷಮಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

 

ಪ್ರಜ್ಞಾ ಠಾಕೂರ್ ಭೋಪಾಲ್‌ನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರನ್ನು ಸೋಲಿಸಿ ಚುನಾವಣೆಯಲ್ಲಿ ಜಯಗಳಿಸಿದ್ದರು. ಅಂದಿನಿಂದ ಅವರು ಹಲವಾರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಲೆ ಬಂದಿದ್ದಾರೆ.

ಮಹಾತ್ಮ ಗಾಂಧಿ ಮೇಲಿನ ವಿವಾದಾತ್ಮಕ ಹೇಳಿಕೆ ನಂತರ ಪ್ರಜ್ಞಾ ಠಾಕೂರ್ ಅವರನ್ನು ರಕ್ಷಣಾ ಸಂಸದೀಯ ಸಮಿತಿಯಿಂದ ಕಿತ್ತುಹಾಕಲಾಯಿತು ಮತ್ತು ಬಿಜೆಪಿ ಸಂಸದೀಯ ಸಭೆಗಳಿಂದ ಹೊರಗಿಡಲಾಗಿತ್ತು.

ಸಂಸದೆ ಪ್ರಜ್ಞಾ ಠಾಕೂರ್ 2008 ರ ‘ಮಾಲೆಗಾಂವ್ ಸ್ಫೋಟ’ದಲ್ಲಿನ ಪ್ರಮುಖ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಡೆಯಿದ್ದಾರೆ. ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಸ್ಫೋಟಕ ಸಾಧನವೊಂದು ಸ್ಪೋಟಗೊಂಡಿದ್ದರಿಂದ ಆರು ಜನರು ಸಾವನ್ನಪ್ಪಿದ್ದು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂದಿದ್ದರು.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...