Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...