Homeಅಂತರಾಷ್ಟ್ರೀಯಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

ಕೆಜಿಗೆ 2.7 ಲಕ್ಷ ರೂ. ಬೆಲೆಯ ಜಗತ್ತಿನ ಅತಿ ದುಬಾರಿ ಮಾವಿನ ಹಣ್ಣು ಮಿಯಝಾಕಿ

- Advertisement -
- Advertisement -

ಭಾರತವಲ್ಲದೇ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಾವಿನ ಹಣ್ಣಿಗೆ ವಿಶೇಷ ಸ್ಥಾನಮಾನವಿದೆ. ಜಗತ್ತಿನ ಮೂಲೆ ಮೂಲೆಯಲ್ಲಿ ಮಾವಿನ ಹಣ್ಣಿನ ಪ್ರಿಯರಿದ್ದಾರೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾವಿನ ಬೆಳೆ ಬಹಳ ಕಡಿಮೆ. ಹಾಗಾಗಿ ಭಾರತ ಸೇರಿ ಏಷ್ಯಾದ ರಾಷ್ಟ್ರಗಳಿಂದ ಅಮೆರಿಕ ಮತ್ತು ಯುರೋಪ್‌ಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣು ರಫ್ತಾಗುತ್ತದೆ. ವಿದೇಶಗಳಿಗೆ ರಫ್ತಾಗುವ ಮಾವಿನ ಹಣ್ಣುಗಳು ವಿಶೇಷ ಗುಣಮಟ್ಟವನ್ನು ಹೊಂದಿರುತ್ತವೆ ಮತ್ತು ಅವುಗಳ ಬೆಲೆಯೂ ಅಷ್ಟೇ ಹೆಚ್ಚಾಗಿರುತ್ತದೆ. ನಾವು ಮಾವಿನ ಹಣ್ಣಿನ ಬೆಲೆ ಕೆ.ಜಿ.ಗೆ 100 ರೂಪಾಯಿ ಎಂದರೆ ದುಬಾರಿ ಎಂದುಕೊಳ್ಳುತ್ತೇವೆ. ಆದರೆ ಇಲ್ಲೊಂದು ಮಾವಿನ ಹಣ್ಣಿದೆ. ಇದರ ಬೆಲೆಯನ್ನು ಕೇಳಿದರೆ ನಾವೆಲ್ಲರೂ ಆಶ್ಚರ್ಯಕ್ಕೆ ಒಳಗಾಗುತ್ತೇವೆ. ಹಾಗೇ ಇದು ನಿಜವೇ ಎಂದು ಪ್ರಶ್ನಿಸುತ್ತೇವೆ…

ಹೌದು ಇದು ಅಂತಹದ್ದೇ ಮಾವಿನ ಹಣ್ಣು. ನೋಡಲು ಅಷ್ಟೇ ಸುಂದರ. ಅಷ್ಟೇ ರುಚಿಕರ. ಸುವಾಸನೆ ಭರಿತ ತಳಿ. ಅಷ್ಟೇ ದುಬಾರಿ. ಒಂದು ಕೆಜಿಗೆ 2.7 ಲಕ್ಷ ರುಪಾಯಿ. ಅದು ಯಾವ ಮಾವಿನ ಹಣ್ಣು ಎನ್ನುತ್ತೀರಾ ? ಅದೇ ಜಪಾನ್ ಮೂಲದ ತಳಿಯ ಮಾವಿನ ಹಣ್ಣು ಮಿಯಝಾಕಿ. ಕೆಂಪು-ಬೂದು ಬಣ್ಣದ ಈ ಮಾವಿನ ಹಣ್ಣಿಗೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆಯಿದೆ. ಮಧ್ಯಪ್ರದೇಶದ ಕೃಷಿಕ ದಂಪತಿಯೊಂದು ಮಿಯಝಾಕಿ ತಳಿಯ ಮಾವಿನ ಹಣ್ಣನ್ನು ತಮ್ಮ ಹೊಲದಲ್ಲಿ ಬೆಳೆದು ಅಪಾರ ಲಾಭ ಗಳಿಸಿದ್ದಾರೆ.

ದುಬಾರಿ ಈ ಮಾವಿನ ಹಣ್ಣನ್ನು ಕಾಯ್ದುಕೊಳ್ಳುವುದು ಅಷ್ಟು ಸುಲಭವಲ್ಲ. ಹಾಗಾಗಿ ಕೃಷಿ ದಂಪತಿ ಈ ಮಾವಿನ ಹಣ್ಣಿನ ತೋಟಕ್ಕೆ ಗಾರ್ಡ್‌ಗಳನ್ನು ನೇಮಿಸಿದ್ದಾರೆ.

ಮಧ್ಯಪ್ರದೇಶದ ಈ ಕೃಷಿ ದಂಪತಿ ಬೆಳೆದಿರುವ ಮಿಯಝಾಕಿ ಮಾವಿನ ಹಣ್ಣಿನ ಒಂದು ಚಿಕ್ಕ ಹೋಳಿನ ಬೆಲೆಯೇ ಸುಮಾರು 1,000 ರೂಪಾಯಿಗೂ ಅಧಿಕವಾಗಿದೆ ಎಂದರೆ ನೀವು ನಂಬಲಾರರಿ. ಆದರೆ ಇದು ಸತ್ಯ. ಮಧ್ಯಪ್ರದೇಶದ ಈ ಕೃಷಿಕರು ಬೆಳೆದ ಮಿಯಝಾಕಿ ಮಾವಿನ ಹಣ್ಣು ಬೂದು ಬಣ್ಣವನ್ನು ಪಡೆದುಕೊಂಡಿದೆ. ಹಾಗೇ ವಿಶೇಷ ಸುವಾಸನೆಯನ್ನು ಹೊಂದಿದೆ.

ಇದನ್ನೂ ಓದಿ : ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

1970-80 ರಲ್ಲಿ ಜಪಾನ್ ದೇಶದ ಮಿಯಝಾಕಿ ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಬೆಳೆಯಲಾದ ಈ ಮಾವಿನ ತಳಿ ಆ ಪಟ್ಟಣದ ಹೆಸರನ್ನೇ ಪಡೆದುಕೊಂಡು ಜಗತ್ತಿನಾದ್ಯಂತ ಮಿಯಝಾಕಿ ಎಂದೇ ಪ್ರಸಿದ್ಧವಾಗಿದೆ. ಜಪಾನ್‌ನಲ್ಲಿ ಆರಂಭವಾದ ಮಿಯಝಾಕಿ ತಳಿಯ ಬೆಳೆ ಕೊರಿಯಾ, ಮಲೇಷ್ಯಾ, ಥೈಲಾಂಡ್ ಹೀಗೆ ಭಾರತದ ಮಧ್ಯಪ್ರದೇಶದವರೆಗೂ ಬಂದಿದೆ. ಸಾಧಾರಣ ಮಾವಿಗಿಂತ 15% ಹೆಚ್ಚು ಸಕ್ಕರೆಯ ಅಂಶವನ್ನು ಹೊಂದಿರುವ ಈ ಮಿಯಝಾಕಿ ಮಾವು ಅತ್ಯಂತ ಕಡಿಮೆ ಆಮ್ಲದ ಗುಣವನ್ನು ಹೊಂದಿದೆ. ಏಪ್ರಿಲ್ ನಿಂದ ಆಗಸ್ಟ್ ತಿಂಗಳವರೆಗೆ ಹಣ್ಣನ್ನು ಬಿಡುವ ಈ ತಳಿ ಉಷ್ಣವಲಯದಲ್ಲಿ ಮಾತ್ರ ಚೆನ್ನಾಗಿ ಫಲ ಕೊಡುತ್ತದೆ.

ಕಳೆದ ವರ್ಷ ಅಂತರರಾಷ್ಟಿಯ ಮಾರುಕಟ್ಟೆಯಲ್ಲಿ ಕೆಜಿಗೆ 2.7 ಲಕ್ಷ ಬೆಲೆಗೆ ಮಾರಾಟವಾಗಿದ್ದ ಮಿಯಝಾಕಿ ಬೆಲೆ ಈ ವರ್ಷ 3  ಲಕ್ಷ ರೂಪಾಯಿ ತಲುಪುವ ನಿರೀಕ್ಷೆಯನ್ನು ರೈತರು ಇಟ್ಟುಕೊಂಡಿದ್ದಾರೆ. ಕೆಂಪು ಬಣ್ಣದ ಡೈನೋಸಾರ್ ಮೊಟ್ಟೆಯನ್ನು ಹೋಲುವ ಈ ಮಿಯಝಾಕಿ ಹಣ್ಣು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿದೆ. ಈ ಹಣ್ಣಿನ ವಿವರ ಕೇಳಿದ ನೆಟ್ಟಿಗರು ದುಬಾರಿ ಬೆಲೆಯಿಂದಾಗಿ ಮಿಯಝಾಕಿ ಕೊಳ್ಳುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಾವಿನ ಹಣ್ಣಿನ ಸೀಸನ್‌ನಲ್ಲಿ ನೀವು ಮಾವಿನ ಪ್ರಿಯರಾಗಿದ್ದರೆ ಮಿಯಝಾಕಿ ತಳಿಯ ಹಣ್ಣನ್ನು ಪ್ರಯತ್ನಿಸುವ ಆಸೆಯಾಗುತ್ತಿದೆಯಾ ? ಹಾಗಿದ್ದರೆ 2.70 ಲಕ್ಷ ರೂಪಾಯಿಯನ್ನು ಮಾವಿನ ಹಣ್ಣಿಗಾಗಿ ನಿಮ್ಮ ಜೇಬಿನಿಂದ ತೆಗೆದಿರಿಸಿಕೊಳ್ಳುವುದು ಉತ್ತಮ.

– ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಹಿಂದುತ್ವ ಅಜೆಂಡಾದ ಪ್ರಯೋಗಕ್ಕೆ ಈಗ ನೂತನ ಬಲಿ ಲಕ್ಷದ್ವೀಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...