Homeಮುಖಪುಟತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

- Advertisement -
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.
‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.
ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಸೈನ್ಯದಲ್ಲಿ ನೀಡುವ ಕಳಪೆ ಆಹಾರ ಮತ್ತು ಮೇಲಾಧಿಕಾರಿಗಳ ಭ್ರಷ್ಟಚಾರದು ವಿಡಿಯೋ ಒಂದನ್ನು ಮಾಡಿ ಫೇಸ್ ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರು. ಲಕ್ಷಾಂತರ ಜನ ಆ ವಿಡಿಯೋವನ್ನು ಮೆಚ್ಚಿಕೊಂಡು ಷೇರ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.
ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.
ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.
ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು.
ಇದನ್ನು ತೇಜ್ ಬಹದ್ದೂರ್ ತನಗಾದ ದೊಡ್ಡ ಅವಮಾನವೆಂದು ಬಗೆದರು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ನಿರ್ಧರಿಸಿದರು. 2019ರ ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಮಾರ್ಚ್ 30ರಂದು ಪ್ರಧಾನಿ ನರೇಂದ್ರ ಮೋದಿಯವರು ವಿರುದ್ಧ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಣಕ್ಕಿಳಯಲು ನಿರ್ಧರಿಸಿದರು.
ಹಲವು ಪಕ್ಷಗಳು ತಮ್ಮ ಪಕ್ಷದಿಂದ ಟಿಕೇಟ್ ನೀಡುವುದಾಗಿಯೂ, ತಮ್ಮ ಪಕ್ಷಕ್ಕೆ ಬರಬೇಕೆಂಬ ಮನವಿಯನ್ನು ತೇಜ್ ಬಹದ್ದೂರ್ ಒಪ್ಪಲಿಲ್ಲ. ಹಲವು ಮಾಜಿ ಸೈನಿಕರು, ಕೆಲವು ರೈತರ ಬೆಂಬಲದೊಂದಿಗೆ ವಾರಣಾಸಿಯಲ್ಲಿ ಪ್ರಚಾರ ಆರಂಭಿಸಿದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು ಮಾತ್ರವಲ್ಲ ಈ ಮಾಜಿ ಯೋಧನಿಗೆ ಬೆಂಬಲದ ಮಹಾಪೂರವೇ ಹರಿದುಬಂದಿತು. ಏಪ್ರಿಲ್ 24ರಂದು ಇವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ತದನಂತರ ಸಮಾಜವಾದಿ ಪಕ್ಷವೂ ಇವರಿಗೆ ಬಿ ಫಾರಂ ನೀಡಿತು. ಅಲ್ಲಿಗೆ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾದರು.
ಏಪ್ರಿಲ್ 30ರಂದು ಚುನಾವಣಾ ಆಯೋಗ ತೇಜ್ ಬಹದ್ದುರ್‍ರವರಿಗೆ ಸಂಜೆ ಆರು ಗಂಟೆಯ ಒಳಗೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕೆಂದು ನೋಟಿಸ್ ನೀಡಿತು. ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು ಜೊತೆಗೆ ಈ ವಿಚಾರವಾಗಿ ಮೂರು ಗಂಟೆಯೊಳಗೆ ಬಿಎಸ್‍ಎಫ್‍ನಿಂದ ಕ್ಲಿಯರೆನ್ಸ್ ಲೆಟರ್ ತರುವಂತೆ ಸೂಚಿಸಿತ್ತು. ನಂತರ ಅವರ ನಾಮಪತ್ರವನ್ನು ತಿರಸ್ಕರಿಸಿತು.
ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತಗೊಂಡಕೂಡಲೇ ಫೇಸ್‍ಬುಕ್ ಲೈವ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಷಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‍ಬುಕ್, ವಾಟ್ಸ್‍ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು ಮತ್ತು ಸುಪ್ರೀಂ ಕೋರ್ಟ್‍ನಲ್ಲಿ ಇದನ್ನು ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
ಇದಾದ ನಂತರ ಬಿಜೆಪಿ ಕಾರ್ಯಕರ್ತರು ತೇಜ್ ಬಹದ್ದೂರ್ ಮೇಲೆ ಆರೋಪಗಳ ಸುರಿಮಳೆ ಸುರಿಸಿದರು. ಆತನನ್ನು ಐದಾರು ಬಾರಿ ಡಿಸ್‍ಮಿಸ್ ಮಾಡಲಾಗಿತ್ತು, ಆತ ಮದ್ಯಪಾನಿಯಾಗಿದ್ದ, ಆತನಿಗೆ ಫೇಸ್‍ಬುಕ್‍ನಲ್ಲಿ 500 ಜನ ಸ್ನೇಹಿತರಿದ್ದರು ಎಂದೆಲ್ಲಾ ಫೇಕ್ ನ್ಯೂಸ್‍ಗಳನ್ನು ಹರಡಲಾಯಿತು.
ತೇಜ್ ಬಹದ್ದೂರ್‍ರವರು ಮೇ 06ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ತನ್ನ ನಾಮಪತ್ರ ಅಸಿಂಧುಗೊಳಿಸಿದ ಚುನಾವನಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾರೆ. ಮುಂದೆ ಏನಾಗುತ್ತದೆ ಎಂದು ಕಾದುನೋಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...