Homeಮುಖಪುಟತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

- Advertisement -
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.
‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.
ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಸೈನ್ಯದಲ್ಲಿ ನೀಡುವ ಕಳಪೆ ಆಹಾರ ಮತ್ತು ಮೇಲಾಧಿಕಾರಿಗಳ ಭ್ರಷ್ಟಚಾರದು ವಿಡಿಯೋ ಒಂದನ್ನು ಮಾಡಿ ಫೇಸ್ ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರು. ಲಕ್ಷಾಂತರ ಜನ ಆ ವಿಡಿಯೋವನ್ನು ಮೆಚ್ಚಿಕೊಂಡು ಷೇರ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.
ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.
ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.
ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು.
ಇದನ್ನು ತೇಜ್ ಬಹದ್ದೂರ್ ತನಗಾದ ದೊಡ್ಡ ಅವಮಾನವೆಂದು ಬಗೆದರು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ನಿರ್ಧರಿಸಿದರು. 2019ರ ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಮಾರ್ಚ್ 30ರಂದು ಪ್ರಧಾನಿ ನರೇಂದ್ರ ಮೋದಿಯವರು ವಿರುದ್ಧ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಣಕ್ಕಿಳಯಲು ನಿರ್ಧರಿಸಿದರು.
ಹಲವು ಪಕ್ಷಗಳು ತಮ್ಮ ಪಕ್ಷದಿಂದ ಟಿಕೇಟ್ ನೀಡುವುದಾಗಿಯೂ, ತಮ್ಮ ಪಕ್ಷಕ್ಕೆ ಬರಬೇಕೆಂಬ ಮನವಿಯನ್ನು ತೇಜ್ ಬಹದ್ದೂರ್ ಒಪ್ಪಲಿಲ್ಲ. ಹಲವು ಮಾಜಿ ಸೈನಿಕರು, ಕೆಲವು ರೈತರ ಬೆಂಬಲದೊಂದಿಗೆ ವಾರಣಾಸಿಯಲ್ಲಿ ಪ್ರಚಾರ ಆರಂಭಿಸಿದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು ಮಾತ್ರವಲ್ಲ ಈ ಮಾಜಿ ಯೋಧನಿಗೆ ಬೆಂಬಲದ ಮಹಾಪೂರವೇ ಹರಿದುಬಂದಿತು. ಏಪ್ರಿಲ್ 24ರಂದು ಇವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ತದನಂತರ ಸಮಾಜವಾದಿ ಪಕ್ಷವೂ ಇವರಿಗೆ ಬಿ ಫಾರಂ ನೀಡಿತು. ಅಲ್ಲಿಗೆ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾದರು.
ಏಪ್ರಿಲ್ 30ರಂದು ಚುನಾವಣಾ ಆಯೋಗ ತೇಜ್ ಬಹದ್ದುರ್‍ರವರಿಗೆ ಸಂಜೆ ಆರು ಗಂಟೆಯ ಒಳಗೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕೆಂದು ನೋಟಿಸ್ ನೀಡಿತು. ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು ಜೊತೆಗೆ ಈ ವಿಚಾರವಾಗಿ ಮೂರು ಗಂಟೆಯೊಳಗೆ ಬಿಎಸ್‍ಎಫ್‍ನಿಂದ ಕ್ಲಿಯರೆನ್ಸ್ ಲೆಟರ್ ತರುವಂತೆ ಸೂಚಿಸಿತ್ತು. ನಂತರ ಅವರ ನಾಮಪತ್ರವನ್ನು ತಿರಸ್ಕರಿಸಿತು.
ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತಗೊಂಡಕೂಡಲೇ ಫೇಸ್‍ಬುಕ್ ಲೈವ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಷಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‍ಬುಕ್, ವಾಟ್ಸ್‍ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು ಮತ್ತು ಸುಪ್ರೀಂ ಕೋರ್ಟ್‍ನಲ್ಲಿ ಇದನ್ನು ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
ಇದಾದ ನಂತರ ಬಿಜೆಪಿ ಕಾರ್ಯಕರ್ತರು ತೇಜ್ ಬಹದ್ದೂರ್ ಮೇಲೆ ಆರೋಪಗಳ ಸುರಿಮಳೆ ಸುರಿಸಿದರು. ಆತನನ್ನು ಐದಾರು ಬಾರಿ ಡಿಸ್‍ಮಿಸ್ ಮಾಡಲಾಗಿತ್ತು, ಆತ ಮದ್ಯಪಾನಿಯಾಗಿದ್ದ, ಆತನಿಗೆ ಫೇಸ್‍ಬುಕ್‍ನಲ್ಲಿ 500 ಜನ ಸ್ನೇಹಿತರಿದ್ದರು ಎಂದೆಲ್ಲಾ ಫೇಕ್ ನ್ಯೂಸ್‍ಗಳನ್ನು ಹರಡಲಾಯಿತು.
ತೇಜ್ ಬಹದ್ದೂರ್‍ರವರು ಮೇ 06ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ತನ್ನ ನಾಮಪತ್ರ ಅಸಿಂಧುಗೊಳಿಸಿದ ಚುನಾವನಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾರೆ. ಮುಂದೆ ಏನಾಗುತ್ತದೆ ಎಂದು ಕಾದುನೋಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...