Homeಮುಖಪುಟಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

- Advertisement -
- Advertisement -

ಕೊರೊನಾ ಸಾಂಕ್ರಾಮಿಕವನ್ನು ಬಿಜೆಪಿ ಸರ್ಕಾರ ಉತ್ತಮವಾಗಿ ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರಗಳು ತಮ್ಮ ತಮ್ಮ ರಾಜ್ಯಗಳ ಜನರ ಮನವೊಲಿಸಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋದೊಂದಿಗೆ ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಪೂರ್ಣಪುಟದ ಜಾಹೀರಾತುಗಳಿಗಾಗಿ ಹಣ ವ್ಯಯಿಸಿದ್ದಾರೆ.

ದಿ ಹಿಂದೂ, ಎಕನಾಮಿಕ್ ಟೈಮ್ಸ್ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನಲ್ಲಿ ನೀಡಲಾಗಿರುವ ಜಾಹೀರಾತುಗಳಲ್ಲಿ ತಮ್ಮ ರಾಜ್ಯದಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವನ್ನು ಎದುರಿಸಲು ತಾವು  ಕೈಗೊಂಡ ಪ್ರಯತ್ನಗಳ ಬಗ್ಗೆ ತಮ್ಮನ್ನು ತಾವೇ ಶ್ಲಾಘಿಸಿಕೊಂಡಿವೆ. ಜೊತೆಗೆ ಇದು ಅನೇಕರು ಹೆಮ್ಮೆ ಪಡುವಂತದ್ದು ಎಂದು ಜಾಹೀರಾತಿನಲ್ಲಿ ಹೇಳಿಕೊಂಡಿವೆ.

ಕರ್ನಾಟಕ ಸರ್ಕಾರ ದಿ ಹಿಂದೂ ಪತ್ರಿಕೆಯ 3ನೇ ಪುಟದಲ್ಲಿ ಜಾಹೀರಾತನ್ನು ನೀಡಿದೆ. ಅದು “ಚೇತರಿಕೆ ಹಾದಿಯಲ್ಲಿ ಕರ್ನಾಟಕ” ಎಂಬ ಶೀರ್ಷಿಕೆಯಲ್ಲಿ ‘ಐದು ಸ್ಟೋರಿ’ಗಳನ್ನು ನೀಡಿದೆ. ಅವುಗಳಲ್ಲಿರುವ ಆರು ಚಿತ್ರಗಳ ಪೈಕಿ ಐದರಲ್ಲಿ ಯಡಿಯೂರಪ್ಪ ಕಾಣಿಸಿಕೊಳ್ಳುತ್ತಾರೆ. ಜಾಹೀರಾತಿನ ಒಂದು ಸ್ಟೋರಿಯಲ್ಲಿ “ಕರ್ನಾಟಕದ ನೂರಾರು ಕಾರ್ಮಿಕರಿಗೆ ಸಿಎಂ ಜೊತೆ ಮುಖಾಮುಖಿಯಾಗಿ ಚರ್ಚಿಸಲು ಹೇಗೆ ಅವಕಾಶ ಸಿಕ್ಕಿದೆ” ಎಂದು ವಿವರಿಸಿದೆ. ಇದು ಕೋವಿಡ್‌ ವಿರುದ್ದದ ಹೋರಾಟದಲ್ಲಿ ಕಾರ್ಮಿಕರ ಮನೋಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್‌

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಬೆಂಗಳೂರು ಆವೃತ್ತಿಯ 3ನೇ ಪುಟದಲ್ಲಿ “ಕರ್ನಾಟಕದ ಭರವಸೆಯ ಪ್ಯಾಕೇಜ್‌ಗಳು” ಮತ್ತು ಅದರ ಹುಬ್ಬಳ್ಳಿ ಆವೃತ್ತಿಯ 12ನೇ ಪುಟದಲ್ಲಿ “ಕೊರೊನಾ ಅಲೆಗಳನ್ನು ಗೆಲ್ಲುವುದು” ಕುರಿತು ಪೂರ್ಣ ಪುಟದ ಜಾಹೀರಾತನ್ನು ಪ್ರಕಟಿಸಿದೆ. ಅಮೆರಿಕನ್ ಕಾದಂಬರಿಕಾರ ಲೂಯಿಸ್ ಎಲ್’ಮೊರ್ ಅವರನ್ನು ಉಲ್ಲೇಖಿಸಿರುವ, ಯಡಿಯೂರಪ್ಪ ಸರ್ಕಾರವು ಎಲ್ಲಾ ಸಂಕಷ್ಟಗಳ ವಿರುದ್ಧ ಹೋರಾಡುತ್ತಿದೆ, ಕತ್ತಲೆಯಲ್ಲಿ ಬೆಳಕನ್ನು ಕಾಣುವಂತೆ ಮಾಡುವ ಭರವಸೆ ಇದೆ ಎಂದು ಜಾಹೀರಾತಿನಲ್ಲಿ ಹೇಳಿದೆ.

ರಾಜ್ಯದಲ್ಲಿ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ “ಯಶಸ್ವಿಯಾಗಿದ್ದಾರೆ” ಎಂಬ ಕಥೆಗಳೊಂದಿಗೆ ಕರ್ನಾಟಕ ಸರ್ಕಾರ ಗುರುವಾರ ಡೆಕ್ಕನ್ ಹೆರಾಲ್ಡ್‌ನಲ್ಲಿ ಇದೇ ರೀತಿಯ ಜಾಹೀರಾತು ನೀಡಿದೆ.

ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿರುವ ಉತ್ತರ ಪ್ರದೇಶ ಸರ್ಕಾರವು ಜಾಹೀರಾತುಗಳ ಮೂಲಕ ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ. ಟೈಮ್ಸ್‌ ಆಫ್‌ ಇಂಡಿಯಾದ ಸಹೋದರಿ ಪತ್ರಿಕೆ ಎಕನಾಮಿಕ್ ಟೈಮ್ಸ್‌ನ ಮೊದಲ ಎರಡು ಪುಟಗಳಲ್ಲಿ ರಾಜ್ಯ ಸರ್ಕಾರಗ ಕೊರೊನಾ ನಿರ್ವಹಿಸಿದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸಿದೆ.

ಮೊದಲ ಪುಟದಲ್ಲಿ ಕೋವಿಡ್‌ ಸೋಲಿಸಲು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿಕೊಳ್ಳುವ “ಐದು-ಹಂತದ ಯೋಜನೆ”ಗಳ ಜೊತೆಗೆ ಪ್ರಧಾನಿ ಮೋದಿ ಮತ್ತು ಆದಿತ್ಯನಾಥ್ ಅವರ ಚಿತ್ರಗಳನ್ನು ಪ್ರಕಟಿಸಲಾಗಿದೆ. ಪ್ರಧಾನಿ ಮೋದಿಗೆ ದೊರೆತ ಪ್ರತಿಯೊಂದು ಅವಕಾಶವನ್ನೂ ಬಿಜೆಪಿ ಪಕ್ಷವು ಶ್ಲಾಘಿಸುವುದು ರೂಡಿಯಾಗಿರುವುದರಿಂದ,  “ಉಚಿತ ಲಸಿಕೆಗಳನ್ನು” ನೀಡಿದ್ದಕ್ಕಾಗಿ ಮೋದಿಯವರ ಸಹಾಯಕ್ಕೆ ಪ್ರತಿಯಾಗಿ ಆದಿತ್ಯನಾಥ್ ಅವರು ಜಾಹೀರಾತಿನ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ಇದನ್ನೂ ಓದಿ: ’ಟೈಮ್’ ಮ್ಯಾಗಜೀನ್‌ನಲ್ಲಿ ಯುಪಿ ಸರ್ಕಾರದ ಜಾಹೀರಾತು; ’ವರದಿ’ ಎಂದು ಬಿಂಬಿಸಿದ ಭಾರತೀಯ ಮಾಧ್ಯಮಗಳು!

ಇನ್ನು ಎರಡನೇ ಪುಟವು ಸುದ್ದಿಯ ರೂಪದ ಜಾಹೀರಾತನ್ನು ಹೊಂದಿದೆ. ಈ ಪುಟದ ಕೆಳಭಾಗದಲ್ಲಿ ಕಾಣಸಿಗುವ ಒಂದು ಸಣ್ಣ “ಗ್ರಾಹಕ ಸಂಪರ್ಕ”ದ ಲೇಬಲ್ ಮಾತ್ರ ಇದು ಜಾಹೀರಾತು ಎಂದು ಸೂಚಿಸುತ್ತದೆ. ಜಾಹೀರಾತುದಾರರು ಪತ್ರಿಕೆಯ ಟೈಟಲ್‌ಹೆಡ್‌ನ ಬದಲಿಗೆ “ಕೊರೊನಾ ವಿರುದ್ಧ ಯುಪಿ ಹೋರಾಟ” ಎಂದು ಬರೆಸಿದ್ದಾರೆ. ಅದರಡಿಯಲ್ಲಿ ಯೋಗಿ ಸರ್ಕಾರದ ಬಹುಸಂಖ್ಯೆಯ ಕಾರ್ಯತಂತ್ರವು ಫಲಿತಾಂಶಗಳನ್ನು ವಿವರಿಸಿದೆ. ಕೊರೊನಾ ಎರಡನೇ ಅಲೆಯಲ್ಲಿ ಉತ್ತರ ಪ್ರದೇಶವು ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಒಂದಾಗಿದೆ. ಆದರೆ, ಜಾಹೀರಾತಿನ ಮುಖ್ಯ ಸ್ಟೋರಿಯಲ್ಲಿ “ರಾಜ್ಯದ ಸಾಂಕ್ರಾಮಿಕ ನಿಯಂತ್ರಣ ಒಂದು ಮಾದರಿ” ಎಂದು ಬರೆದುಕೊಂಡಿದೆ.

“ಉತ್ತರ ಪ್ರದೇಶವು ಎಲ್ಲಾ ರೀತಿಯಲ್ಲಿಯೂ ಸರಿಯಾದ ಕಾರಣಗಳಿಗಾಗಿ ಸುದ್ದಿಯಲ್ಲಿದೆ” ಎಂದು ಜಾಹೀರಾತಿನ ಪ್ರಮುಖ “ಸ್ಟೋರಿ” ಆರಂಭವಾಗುತ್ತದೆ. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.

ಕೃಪೆ: ನ್ಯೂಸ್‌ ಲ್ಯಾಂಡ್ರಿ


ಇದನ್ನೂ ಓದಿ: ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...