Homeಕರೋನಾ ತಲ್ಲಣಮುಂಬೈ: ನಕಲಿ ಲಸಿಕೆ ಕ್ಯಾಂಪ್ ಹಗರಣದಲ್ಲಿ ನಾಲ್ವರ ಬಂಧನ

ಮುಂಬೈ: ನಕಲಿ ಲಸಿಕೆ ಕ್ಯಾಂಪ್ ಹಗರಣದಲ್ಲಿ ನಾಲ್ವರ ಬಂಧನ

- Advertisement -
- Advertisement -

ಮುಂಬೈನಲ್ಲಿ ಹೌಸಿಂಗ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ‘ನಕಲಿ ವ್ಯಾಕ್ಸಿನೇಷನ್ ಕ್ಯಾಂಪ್’ ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿಗಳ ಹೇಳಿಕೆಗಳನ್ನು ದಾಖಲಿಸಿ, ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಚಲನಚಿತ್ರ ನಿರ್ಮಾಪಕ ರಮೇಶ್ ತೌರಾನಿ ಕೂಡ ಹಗರಣದಲ್ಲಿ ಮೋಸವಾಗಿದೆ. ನಾನು ನಕಲಿ ಲಸಿಕೆ ಕ್ಯಾಂಪ್‌ನ ಸಂತ್ರಸ್ತ ಎಂದು ಹೇಳಿಕೊಂಡಿದ್ದಾರೆ. ಏಕೆಂದರೆ, ತಮ್ಮ ಉದ್ಯೋಗಿಗಳಿಗಾಗಿ ರಮೇಶ್ ಆಯೋಜಿಸಿದ್ದ ವ್ಯಾಕ್ಸಿನೇಷನ್ ಕ್ಯಾಂಪ್ ಇದೇ ರೀತಿಯ ದಂಧೆಗೆ ಬಲಿಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.

ಟಿಪ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥರಾಗಿರುವ ರಮೇಶ್ ತೌರಾನಿ, ಮೇ 30 ಮತ್ತು ಜೂನ್ 3 ರಂದು ತಮ್ಮ ಸಂಸ್ಥೆಯ 365 ಉದ್ಯೋಗಿಗಳಿಗೆ ಲಸಿಕಾ ಶಿಬಿರವನ್ನು ಏರ್ಪಡಿಸಿದ್ದರು. ಆದರೆ ಇಲ್ಲಿಯವರೆಗೂ ಇನ್ನೂ ಲಸಿಕೆ ಪ್ರಮಾಣಪತ್ರವನ್ನು ಪಡೆದಿಲ್ಲ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ನಾವು ಇನ್ನೂ ಪ್ರಮಾಣಪತ್ರಗಳಿಗಾಗಿ ಕಾಯುತ್ತಿದ್ದೇವೆ. ಪ್ರಮಾಣಪತ್ರಗಳಿಗಾಗಿನನ್ನ ಕಚೇರಿಯಿಂದ ಎಸ್‌ಪಿ ಈವೆಂಟ್‌ನ ಸಂಜಯ್ ಗುಪ್ತಾ ಅವರನ್ನು ಸಂಪರ್ಕಿಸಿದಾಗ, ಶನಿವಾರ (ಜೂನ್ 12) ರ ವೇಳೆಗೆ ಪ್ರಮಾಣಪತ್ರಗಳು ಸಿಗಲಿವೆ ಎಂದು ಹೇಳಿದ್ದರು. ಆದರೆ, ಇನ್ನೂ ನಮಗೆ ಪ್ರಮಾಣ ಪತ್ರ ದೊರೆತಿಲ್ಲ. ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಯಿಂದ ಲಸಿಕೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ನಮಗೆ ತಿಳಿಸಿದ್ದರು” ಎಂದು ನಿರ್ಮಾಪಕ ರಮೇಶ್ ತೌರಾನಿ ಹೇಳಿದ್ದಾರೆ.

’ನಮ್ಮ ಸಂಸ್ಥೆಯ 356 ಜನರಿಗೆ ಲಸಿಕೆ ನೀಡಲಾಗಿದೆ. ಪ್ರತಿ ಡೋಸ್‌ಗೆ 1,200 ರೂಪಾಯಿ ಪಾವತಿಸಿದ್ದೇವೆ. ಇದರ ಜೊತೆಗೆ ಹೆಚ್ಚುವರಿ ಜಿಎಸ್‌ಟಿ ಹಣವನ್ನು ನೀಡಲಾಗಿದೆ. ಆದರೆ, ಈಗ ಚಿಂತೆಗೆ ಈಡು ಮಾಡಿರುವುದು ಹಣವಲ್ಲ. ಲಸಿಕೆ ಎಂದು ನಮಗೆ ಏನು ನೀಡಿದ್ದಾರೆ ಎಂಬ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಇದು ನಿಜವಾದ ಕೋವಿಶೀಲ್ಡ್ ಅಥವಾ ಯಾವುದೋ ಲವಣಯುಕ್ತ ನೀರೇ? ಎಂಬ ಬಗ್ಗೆ ಅನುಮಾನ ಬಂದಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಆಸ್ಪತ್ರೆಯನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಮೂಲಕ ವ್ಯಾಕ್ಸಿನೇಷನ್ ಶಿಬಿರವನ್ನು ಆಯೋಜಿಸಿದ ಕೆಲವು ವ್ಯಕ್ತಿಗಳು ಮೋಸ ಮಾಡಿದ್ದಾರೆ. ನಕಲಿ ಲಸಿಕೆ ನೀಡಿದ್ದಾರೆ ಎಂದು ಕಂಡಿವಲ್ಲಿ ಉಪನಗರದಲ್ಲಿನ ವಸತಿ ಸಂಘವು ಪೊಲೀಸರಿಗೆ ದೂರು ನೀಡಿತ್ತು. ಕೋವಿನ್ ಪೋರ್ಟಲ್‌ನಲ್ಲಿ ಇವರ ಯಾವುದೇ ದಾಖಲುಗಳು ಇಲ್ಲ ಎಂದು ದೂರು ನೀಡಿದ್ದಾರೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...