Homeಕರೋನಾ ತಲ್ಲಣಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

- Advertisement -
- Advertisement -

ಕೋವಿಡ್ ನಿಯಮಾವಳಿಗಳ ಉಲ್ಲಂಘನೆಯು ಮೂರನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎಂದು ಶುಕ್ರವಾರ ದೆಹಲಿ ಹೈಕೋರ್ಟ್ ಎಚ್ಚರಿಸಿದೆ. ಈ ವಾರ ರಾಜಧಾನಿ ದೆಹಲಿಯಲ್ಲಿ ಭಾರೀ ಪ್ರಮಾಣದ ನಿರ್ಬಂಧಗಳನ್ನು ಸಡಿಲಿಸಿರುವ ಕಾರಣ ಮಾರುಕಟ್ಟೆಗಳಲ್ಲಿ ಕೊರೊನಾ ನಿಯಮಗಳ ಉಲ್ಲಂಘನೆ ಕಂಡುಬಂದಿದೆ. ಇದಕ್ಕೆ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ದೆಹಲಿಯಲ್ಲಿ ಅನ್‌ಲಾಕ್‌ ಮಾಡುವ ಬಗ್ಗೆ ವರದಿ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್, ಒಕ್ಕೂಟ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಕೊರೊನಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮತ್ತು ಅಂಗಡಿ ವ್ಯಾಪಾರಿಗಳಿಗೆ ಸೂಕ್ಷ್ಮತೆಯನ್ನು ಅರ್ಥ ಮಾಡಿಸಲು ಅಧಿಕಾರಿಗಳಿಗೆ ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇದೇ ರೀತಿ ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸುವುದು ಮುಂದುವರಿದರೆ, ನಾವು ದೊಡ್ಡ ತೊಂದರೆಗೆ ಸಿಲುಕುತ್ತೇವೆ. ಪರಿಸ್ಥಿತಿ ಹೀಗೆ ಆದರೆ, ದೇವರೇ ನಮಗೆ ಸಹಾಯ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ದೆಹಲಿಯಲ್ಲಿ, ಈಗ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಹಂತ ಹಂತವಾಗಿ ಅನ್‌ಲಾಕ್ ಮಾಡಲಾಗುತ್ತಿದೆ. ಈ ಹಿನ್ನೆಲೆ ನಗರದ ಜನಪ್ರಿಯ ಶಾಪಿಂಗ್ ಮಾರುಕಟ್ಟೆಗಳಲ್ಲಿ, ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂದಿದೆ. ಸಾಮಾಜಿಕ ಅಂತರ ಇಲ್ಲದಿರುವುದು, ಮಾಸ್ಕ್‌ಗಳನ್ನು ಬಳಸದಿರುವುದು ಸೇರಿದಂತೆ ಕೊರೊನಾ ನಿಯಮಾವಳಿಗನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ದೆಹಲಿಯ ಹಲವು ವೈದ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೆಹಲಿಯ ಏಮ್ಸ್ ವೈದ್ಯರೊಬ್ಬರು ಜನರು ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಚಿತ್ರಗಳನ್ನು ನ್ಯಾಯಮೂರ್ತಿಗಳಿಗೆ ಕಳುಹಿಸಿದ್ದರು. ಈ ಚಿತ್ರಗಳನ್ನು ಗಮನಿಸಿದ ನ್ಯಾಯಪೀಠ, “ನಾವು ಈ ನಗರದ ಪ್ರಜೆಯಾಗಿ ಈ ಚಿತ್ರಗಳನ್ನು ನೋಡಿದಾಗ ಚಿಂತೆ ಉಂಟಾಗುತ್ತದೆ” ಎಂದಿದೆ.

ಇನ್ನು 3ನೇ ಅಲೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ದೆಹಲಿಯಲ್ಲಿ ವೈದ್ಯರು ಮತ್ತು ನರ್ಸ್‌ಗಳಿಗೆ ಸಹಾಯ ಮಾಡಲು 5,000 ಯುವಜನರಿಗೆ ವೈದ್ಯಕೀಯ ತರಬೇತಿ ನೀಡಲು ಅರವಿಂದ್ ಕೇಜ್ರಿವಾಲ್ ಸರ್ಕಾರ ಮುಂದಾಗಿದೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...