Homeಮುಖಪುಟಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

ಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

- Advertisement -
- Advertisement -

ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿಯ ಮುಂದೆ ಹಾಜರಾದ ಟ್ವಿಟರ್ ಇಂಡಿಯಾದ ಪಬ್ಲಿಕ್ ಪಾಲಿಸಿ ಮ್ಯಾನೇಜರ್ ಶಗುಫ್ತ ಕಮ್ರಾನ್ ಮತ್ತು ಕಾನೂನು ಪ್ರತಿನಿಧಿ ಆಯುಶಿ ಕಪೂರ್ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆ ವೇಳೆ ಸಂಸದೀಯ ಸಮಿತಿಯು ಟ್ವಿಟ್ಟರ್‌ಗೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕಂಪನಿಯು ದೇಶದ ಕಾನೂನನ್ನು ಪಾಲಿಸಲು ಸಿದ್ಧವಿದೆಯೇ ಎಂದು ಸಂಸದೀಯ ಸಮಿತಿಯು ಕೇಳಿದಾಗ ಟ್ವಿಟರ್ ಪ್ರತಿನಿಧಿಗಳು “ಟ್ವಿಟರ್ ತನ್ನದೇ ಆದ ನೀತಿ ನಿಯಮಗಳಿವೆ. ಆದರೆ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ” ಎಂದು ಉತ್ತರಿಸಿದೆ.

ನಾವು ಪಾರ್ಲಿಮೆಂಟಿನ ಸ್ಟ್ಯಾಂಡಿಂಗ್ ಕಮಿಟಿಯ ವಿಚಾರಣೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇವೆ. ದೇಶದ ಜನರ ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗೆ ಟ್ವಿಟರ್ ಸದಾ ಬದ್ಧವಾಗಿದೆ. ಪಾರದರ್ಶಕತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಜನರ ಖಾಸಗಿತನದೊಂದಿಗೆ ಟ್ವಿಟ್ಟರ್ ಎಂದೂ ರಾಜಿಯಾಗುವುದಿಲ್ಲ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಜನರ ಸುರಕ್ಷತೆ, ಅಪರಾಧ ತಡೆ, ದೇಶದ ಭದ್ರತೆಗೆ ಸಂಬಂಧಿಸಿದ ಹಾಗೆ ನಾವು ಭಾರತ ಸರ್ಕಾರದೊಂದಿಗಿನ ನಮ್ಮ ಆದ್ಯತೆ ಮತ್ತು ಬದ್ಧತೆಯನ್ನು ಮುಂದುವರೆಸುತ್ತೇವೆ ಎಂದು ಟ್ವಿಟ್ಟರ್ ಪ್ರತಿನಿಧಿಗಳು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆಯು ಕೇಂದ್ರ ಸರ್ಕಾರ ಮತ್ತು ಟ್ವಿಟ್ಟರ್ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಡೆದಿದೆ. ಟ್ವಿಟ್ಟರ್ ಸಾರ್ವಜನಿಕರ ಸುರಕ್ಷತೆಗೆ ಬದ್ಧವಾಗಿಲ್ಲ ಎಂಬ ಕಾರಣದಿಂದ ಟ್ವಿಟರ್‌ಗೆ ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನೀಡಿದ್ದ ಕಾನೂನಾತ್ಮಕ ರಕ್ಷಣೆಯನ್ನು ಕೇಂದ್ರ ಸರ್ಕಾರ ಬುಧವಾರ ಜೂನ್ 16 ರಂದು ಹಿಂಪಡೆದಿದೆ. ಈಗ ಪ್ರತಿಯೊಂದು ಟ್ವೀಟ್, ಪೋಸ್ಟ್ ಗಳಿಗೆ ಟ್ವಿಟರ್ ನೇರ ಹೊಣೆಯಾಗಿರುತ್ತದೆ. ಟ್ವೀಟ್ ಮಾಡಿದ ವ್ಯಕ್ತಿಗಳ ಜೊತೆಗೆ ಟ್ವಿಟರ್ ಮೇಲೆ ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಮೇ ತಿಂಗಳಿನಲ್ಲಿ ‘ಕಾಂಗ್ರೆಸ್‌ ಟೂಲ್‌ಕಿಟ್’ ಎಂಬ ಟ್ವೀಟ್ ಮಾಡಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಆ ನಂತರ ಟ್ವಿಟರ್‌ ಆ ಪೋಸ್ಟ್‌ಗಳಿಗೆ ಮ್ಯಾನುಪಲೇಟೆಡ್ ಮೀಡಿಯಾ ಎಂಬ ಟ್ಯಾಗ್‌ ಹಾಕಿತ್ತು. ಮ್ಯಾನುಪಲೇಟೆಡ್ ಮೀಡಿಯಾ ಟ್ಯಾಗ್‌ ಡಿಲೀಟ್ ಮಾಡುವಂತೆ ಟ್ವಿಟರ್‌ಗೆ ಕೆಂದ್ರ ಸರ್ಕಾರ ಆದೇಶಿಸಿತ್ತು. ಆದರೆ ಟ್ವಿಟ್ಟರ್ ಆ ಟ್ಯಾಗ್‌ಗಳನ್ನು ಡಿಲೀಟ್ ಮಾಡಿರಲಿಲ್ಲ. ಅಲ್ಲಿಂದ ಆರಂಭವಾದ ವೈಮನಸ್ಸು ಮುಂದುವರಿದಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...