Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...