HomeUncategorizedಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

ಆತಂಕದ ಸುಳಿಯಲ್ಲಿದೆ ಗೇರು ಹಣ್ಣಿನ ಪೆನ್ನಿ ನಂಬಿ ಬದುಕಿದ್ದ ಕುಟುಂಬಗಳ ಬದುಕು!

- Advertisement -
- Advertisement -

ಗೇರು ಬೀಜ ಅಥವಾ ಗೋಡಂಬಿ ಹಣ್ಣಿಗೆ ಜಗತ್ತಿನ ಮೂಲೆ ಮೂಲೆಯಲ್ಲಿ ಅಪಾರ ಬೇಡಿಕೆಯಿದೆ. 500 ವರ್ಷಗಳ ಹಿಂದೆ ಬ್ರಿಟಿಷರು ಭಾರತಕ್ಕೆ ತಂದ ಈ ಗೋಡಂಬಿ ಅಥವಾ ಗೇರು ಹಣ್ಣು ಭಾರತದ ಪಶ್ಚಿಮ ಕರಾವಳಿಯ ಉದ್ದಕ್ಕೂ ಹಬ್ಬಿದೆ. ಗೋವಾದ ಉತ್ತರ ತುದಿಯಿಂದ ಕೇರಳದ ದಕ್ಷಿಣ ತುದಿಯವರೆಗೆ ಕರಾವಳಿಯ ಪ್ರದೇಶದಲ್ಲಿ ಬೇಸಿಗೆಯಲ್ಲಿ ಅಪಾರ ಪ್ರಮಾಣದ ಗೇರು ಹಣ್ಣನ್ನು ಬೆಳೆಯಲಾಗುತ್ತದೆ.

ಯಾವುದೇ ಪೋಷಣೆಯಿಲ್ಲದೇ ಬಿದ್ದಲ್ಲಿ ಬೇರೂರಿ ಕೃಷಿಕರಿಗೆ ಕೈತುಂಬ ವರಮಾನ ನೀಡುವ ಗೇರು ಹಣ್ಣಿನ ಬೆಳೆ ಇತ್ತೀಚೆಗೆ ನಶಿಸಿ ಹೋಗುತ್ತಿದೆ. ಮಂಗಳೂರು, ಕೊಚ್ಚಿ, ಪಣಜಿಂಗಳಲ್ಲೂ ಗೋಡಂಬಿ ಫ್ಯಾಕ್ಟರಿಗಳು ಕಡಿಮೆಯಾಗುತ್ತಿವೆ. ಜೊತೆಗೆ ಗೇರು ಹಣ್ಣಿನ ಇನ್ನೊಂದು ವಿಶೇಷ ಪಾನೀಯವಾದ ಸಾಂಪ್ರದಾಯಿಕ ಕ್ಯಾಶ್ಯೂ ಪೆನ್ನಿ (ಮದ್ಯ) ಉತ್ಪಾದನೆಯೂ ಕುಸಿಯ ತೊಡಗಿದೆ.

ನೀವು ಸಾಂಪ್ರದಾಯಿಕ ಉಡುಗೆ ತೊಟ್ಟು ಕಚೇರಿಗೆ (ಆಫೀಸ್) ಹೋಗಲು ಇಚ್ಚಿಸುವಿರೇ? - Quora

ಮೊದಲೇ ಹೇಳಿದಂತೆ ಗೇರು ಹಣ್ಣು ಬಹು ಉಪಯೋಗದ ವಸ್ತು. ಗೇರು ಹಣ್ಣಿನ ಗೋಡಂಬಿ ಬೀಜವು  ಅಡಿಗೆಗಳಿಗೆ, ಖಾದ್ಯಗಳಿಗೆ ಬಳಕೆಯಾದರೆ, ಗೇರು ಹಣ್ಣು ದನಗಳಿಗೆ, ಪಶು ಪಕ್ಷಿಗಳಿಗೆ ಆಹಾರವಾಗಿ, ತೋಟಕ್ಕೆ ಗೊಬ್ಬರವಾಗಿ ಹಾಗೂ ಮದ್ಯ ತಯಾರಿಕೆಗೂ ಬಳಕೆಯಾಗುತ್ತದೆ. ಈ ಗೇರು ಹಣ್ಣಿನ ಪೆನ್ನಿ ಹೆಚ್ಚಾಗಿ ಕೇರಳದಲ್ಲಿ ಮಾತ್ರ ತಯಾರಾಗುತ್ತದೆ. ಕರ್ನಾಟಕ ಹಾಗೂ ಕೇರಳದ ಕೆಲವು ಕಡೆ ಮನೆಯಲ್ಲಿ ಸ್ವಂತ ಬಳಕೆಗಾಗಿಯೂ ಗೇರು ಹಣ್ಣಿನ ಪಾನೀಯವನ್ನು ತಯಾರಿಸಲಾಗುತ್ತದೆ. ಆದರೆ ಗೇರು ಹಣ್ಣಿನ ಪೆನ್ನಿಗೆ ಭಾರತದಲ್ಲಿ ಪ್ರಸಿದ್ಧವಾಗಿರುವ ಸ್ಥಳ ಗೋವಾ. ಇಲ್ಲಿ ಲೆಕ್ಕವಿಲ್ಲದಷ್ಟು ಸ್ವಾದಿಷ್ಟವಾದ ದೇಸಿ ಫೆನಿಗಳು ತಯಾರಾಗುತ್ತವೆ.

ಇತ್ತೀಚೆಗೆ ಯಂತ್ರ ಆಧಾರಿತ ಮಧ್ಯ ತಯಾರಿಕಾ ಘಟಕಗಳ ಸ್ಥಾಪನೆಯ ಕಾರಣದಿಂದ ಮನೆಯಲ್ಲಿಯೇ ತಯಾರಾಗುತ್ತಿದ್ದ ರಾಸಾಯನಿಕ ಮುಕ್ತ ಸಾವಯವ ಪೆನ್ನಿಗೆ ಈಗ ಬೇಡಿಕೆ ಕಡಿಮೆಯಾಗಿದೆ. ಗೇರು ಹಣ್ಣನ್ನು ಕಾಡಿನಿಂದ ಸಂಗ್ರಹಿಸಿ, ಅದರಿಂದ ಹಣ್ಣಿನ ರಸವನ್ನು ತಯಾರಿಸಿ, ಅದನ್ನು ಭಟ್ಟಿ ಇಳಿಸಿ ಮದ್ಯ ತಯಾರಿಸುವ ಪದ್ಧತಿ ಈಗ ನಶಿಸುತ್ತಿದೆ. ಇದನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಗಳ ಭವಿಷ್ಯವೂ ಆತಂಕಕ್ಕೆ ಸಿಲುಕಿದೆ.

ಗೋವಾದಲ್ಲಿ ದಶಕಗಳಿಂದ ದೇಸಿ ಮದ್ಯವನ್ನು ಮನೆಯಲ್ಲಿಯೇ ತಯಾರಿಸುತ್ತಿದ್ದ ಕುಟುಂಬ ಗಾಂವಕರ್ ಫ್ಯಾಮಿಲಿ. ಕಟ್ಟಿಗೆಯ ಕಡ್ಡಿಯನ್ನು ಬಳಸಿ ಕಾಡಿನಿಂದ ಹಣ್ಣನ್ನು ಆರಿಸಿ ತಂದು ಫೆನಿಯನ್ನು ತಯಾರಿಸುತ್ತಿದ್ದರು. ಆದರೆ ಸರ್ಕಾರ ಗೇರು ಹಣ್ಣುಗಳನ್ನು ಕಟಾವು ಮಾಡಲು ದೊಡ್ಡ ದೊಡ್ಡ ಮಾಲೀಕರಿಗೆ ಟೆಂಡರ್‌ ನೀಡುತ್ತಿದೆ. ಹೀಗಾಗಿ ನಮಗೆ ಏನೂ ಸಿಗುತ್ತಿಲ್ಲ ಎಂದು ಗಾಂವಕರ್ ಕುಟುಂಬದ ದೃಪತಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಾಡಿನಿಂದ ಗೇರು ಹಣ್ಣು ಆರಿಸಲು ಮಕ್ಕಳು ದೃಪತಿ ಅವರಿಗೆ ಸಹಾಯ ಮಾಡುತ್ತಾರೆ. ಕಾಡಿನಿಂದ ತಂದ ಹಣ್ಣಿನಿಂದ ಕುಟುಂಬಸ್ಥರು ಸೇರಿ ಬೀಜವನ್ನು ಬೇರ್ಪಡಿಸುತ್ತಾರೆ. ನಂತರ ಗೇರು ಹಣ್ಣನ್ನು ತುಳಿದು ಅದರಿಂದ ರಸ ತೆಗೆಯುವ ಕಾರ್ಯ. ದೃಪತಿ ಗಾಂವಕಾರ್ ಅವರ ಮಕ್ಕಳು ಒಂದು ತೊಟ್ಟು ಗೇರು ಹಣ್ಣಿನ ರಸವನ್ನೂ ವ್ಯರ್ಥ ಮಾಡುವುದಿಲ್ಲ. ಉಳಿಕೆ ತ್ಯಾಜ್ಯ ಹಣ್ಣನ್ನು ಕುಟುಂಬಸ್ಥರು ರೈತರಿಗೆ ನೀಡುತ್ತಾರೆ. ಗೇರು ಹಣ್ಣಿನ ತ್ಯಾಜ್ಯ ಹಸು ಕುರಿಗಳಿಗೆ ಒಳ್ಳೆಯ ಆಹಾರವಾಗಿದೆ. ಹಾಗೇ ರೈತರ ತೋಟಕ್ಕೆ ಒಳ್ಲೆಯ ಗೊಬ್ಬರವೂ ಹೌದು.

ತಾಮ್ರದ ದೊಡ್ಡ ಹಂಡೆಗೆ ಗೇರು ಹಣ್ಣಿನ ರಸವನ್ನು ಸುರಿದು, ಹುತ್ತದ ಮಣ್ಣಿನಿಂದ ಹಂಡೆಯನ್ನು ಭದ್ರ ಪಡಿಸಿದೆರೆ ಪೆನ್ನಿ ತಯಾರಿಸುವ ಅರ್ಧ ಕೆಲಸ ಮುಗಿಯುತ್ತದೆ. ನಂತರ ಎಂಟುಗಂಟೆಗಳ ಕಾಲ ಸಮನಾದ ಶಾಖದಲ್ಲಿ ಗೇರು ಹಣ್ಣಿನ ರಸವನ್ನು ಕುದಿಸಿದರೆ ನೀರಿನ ಅಂಶ ಆವಿಯಾಗಿ ಪೆನ್ನಿ ಮಾತ್ರ ಹಂಡೆಗೆ ಜೋಡಿಸಿದ ಪೈಪ್ ಮೂಲಕ ಹೊರ ಬರುತ್ತದೆ. ಆಗ 40-45% ಆಲ್ಕೋಹಾಲ್ ಹೊಂದಿದ ಗೇರು ಹಣ್ಣಿನ ದೇಸಿ ಪೆನ್ನಿ ಸಿದ್ದವಾಗುತ್ತದೆ.

ಇದನ್ನೂ ಓದಿ : ಭದ್ರಾ  ಮೇಲ್ದಂಡೆ ಯೋಜನೆ ಭ್ರಷ್ಟಾಚಾರ: ಬಾಂಬ್ ಸಿಡಿಸಿದ ಹೆಚ್‌. ವಿಶ್ವನಾಥ್‌!

ದೃಪತಿ ಗಾಂವಕಾರ್ ಕುಟುಂಬ ವರ್ಷಕ್ಕೆ 175 ಲೀಟರ್ ಮಧ್ಯವನ್ನು ತಯಾರಿಸುತ್ತಾರೆ. ಆದರೆ ಇತ್ತೀಚೆಗೆ ಹಳ್ಳಿಗರೆಲ್ಲರೂ ಪಟ್ಟಣ ಸೇರಿರುವುದರಿಂದ ಗಾಂವಕಾರ್ ಕುಟುಂಬದ ದೇಸಿ ಪೆನ್ನಿಗೆ ಬೇಡಿಕೆಯೇ ಇಲ್ಲ.

ಮನೆಯಲ್ಲಿ ತಯಾರಿಸದ ಪೆನ್ನಿಗೆ ಯಾವುದೇ ರಾಸಾಯನಿಕೆ ಸೇರುವುದಿಲ್ಲ. ಅತ್ಯಂತ ಸಾವಯವವಾದ ಈ ಪೆನ್ನಿಗೆ  ಸ್ವಾದಿಷ್ಟ ರುಚಿ ಇದೆ. ಹಿಂದೆ ಸುತ್ತ ಮುತ್ತ ಹಳ್ಳಿಗರೆಲ್ಲ ನಮ್ಮಲ್ಲಿಯೇ ಪೆನ್ನಿ ಖರೀದಿಸುತ್ತಿದ್ದರು. ಈಗ ನಮಗೆ ಬೇಡಿಕೆಯೇ ಇಲ್ಲ. ಮಾರ್ಚ್‌-ಜೂನ್ ಸೀಸನ್‌ನಲ್ಲಿ ದಿನಕ್ಕೆ 300 ರೂಪಾಯಿ ಸಂಪಾದನೆಯೂ ಕಷ್ಟವಾಗಿದೆ. ಹಿಂದೆಲ್ಲ ಒಂದು ಸೀಸನ್‌ನಲ್ಲಿ 50,000 ರೂಪಾಯಿ ಸಂಪಾದಿಸುತ್ತಿದ್ದೆವು ಎಂದು ಗಾಂವಕಾರ್ ಕುಟುಂಬಸ್ಥರು ಹೇಳುತ್ತಾರೆ.

ಗೋವಾದ ದೊಡ್ಡ ಪೆನ್ನಿ ಬ್ರಾಂಡ್ ಖಜೂಲೋ ಈಗ ದೇಸಿ ಪೆನ್ನಿಗಳ ಸಹಾಯಕ್ಕೆ ಮುಂದೆ ಬಂದಿದೆ. ಗಂವಕಾರ್ ತರಹದ ನೂರಾರು ಕುಟುಂಬಗಳಿಂದ ಪೆನ್ನಿಯನ್ನು ಖರೀದಿಸಿ ದೊಡ್ಡ ಮಾರುಕಟ್ಟೆಯಲ್ಲಿ ಅದನ್ನು ಖಜೂಲೊ ಕಂಪನಿಯವರು ಮಾರುತ್ತಿದ್ದಾರೆ. ಆದರೆ ಪೆನ್ನಿ ದೇಸಿ ಮಧ್ಯದ ಅಡಿಯಲ್ಲಿ ಬರುವ ಕಾರಣ ಗೋವಾದ ಆಚೆಗೆ ಅದಕ್ಕೆ ಪ್ರವೇಶವಿಲ್ಲ. ಜೊತೆಗೆ ವರ್ಷದಿಂದ ವರ್ಷಕ್ಕೆ ದೇಸಿ ಪೆನ್ನಿ ಬೇಡಿಕೆ ಇಳಿಕೆಯಾಗುತ್ತಿದೆ. ಹಿಂದೆ ಗೋವಾದ ಆಕರ್ಷಣೆಗಳಲ್ಲಿ ಕ್ಯಾಷ್ಯೂ ಪೆನ್ನಿ ಕೂಡ ಒಂದಾಗಿತ್ತು ಎಂದು ಖಜೂಲೊ ಸಂಸ್ಥೆಯ ಮಾಲೀಕರು ತಿಳಿಸುತ್ತಾರೆ.

ಸರ್ಕಾರದ ಗೇರುಹಣ್ಣು ಕೀಳುವ ಟೆಂಡರ್ ದೊಡ್ಡ ದೊಡ್ಡ ಕಂಪನಿಗಳಿಗೆ ಪಾಲಾಗುತ್ತಿರುವುದರಿಂದ ಸಣ್ಣ ಸಣ್ಣ ಕುಟುಂಬಗಳಿಗೆ ಇಂದು ಏನೂ ಸಿಗುತ್ತಿಲ್ಲ. ಜೊತೆಗೆ ದೊಡ್ಡ ದೊಡ್ಡ ಮಧ್ಯ ತಯಾರಿಕರು ಡಿಸ್ಟಿಲರಿಯಲ್ಲಿ ಪೆನ್ನಿಯನ್ನು ತಯಾರಿಸಿ ಅಗ್ಗದ ಬೆಲೆಗೆ ಮಾರುತ್ತಿದ್ದಾರೆ. ದೊಡ್ಡ ಕಂಪನಿಗಳ ಜೊತೆ ದೃಪತಿ ಗಾಂವಕಾರ್ ತರಹದವರು ಸ್ಪರ್ಧಿಸಲು ಸಾಧ್ಯವಿಲ್ಲ. ಸರ್ಕಾರ ದೇಸಿ ಪೆನ್ನಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಪೆನ್ನಿ ತಯಾರಕ ಕುಟುಂಬಗಳ ಜೊತೆ ನಿಲ್ಲಬೇಕಿದೆ. ಗೇರು ಹಣ್ಣಿನ ಟೆಂಡರ್ ಬೆಲೆಯನ್ನು ತಗ್ಗಿಸಿ ಪೆನ್ನಿ ತಯಾರಕರ ಬದುಕು ಬೀದಿಗೆ ಬೀಳದಂತೆ ಸರ್ಕಾರ ನೋಡಿಕೊಳ್ಳಬೇಕಿದೆ. ಕೊರೋನಾ ಕಾರಣದಿಂದ ಗೋವಾ ಮತ್ತು ಪಶ್ಚಿಮ ಕರಾವಳಿಯಲ್ಲಿ ಪ್ರವಾಸೋದ್ಯಮ ನಿಂತು ಹೋಗಿದೆ. ಮತ್ತೊಮ್ಮೆ ಪ್ರವಾಸಿಗರನ್ನು ಗೋವಾದತ್ತ ಆಕರ್ಷಿಸಲು ಗೇರುಹಣ್ಣಿನ ಸಾವಯವ ಪೆನ್ನಿ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ಸ್ವಾದಿಷ್ಟ ಮತ್ತು ಸುರಕ್ಷಿತ ವಾದ 500 ವರ್ಷ ಇತಿಹಾಸವಿರುವ ಪೋರ್ಚುಗೀಸ್ ಮೂಲದ ಪೆನ್ನಿಯ ಭವಿಷ್ಯ ಸರ್ಕಾರಗಳ ಕೈಯಲ್ಲಿ ನರಳಾಡುತ್ತಿದೆ.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...