Homeಅನುವಾದಿತ ಲೇಖನತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಲಾಕ್‌ಆಪ್ ಡೆತ್‌ಗೆ ಇಂದು 1 ವರ್ಷ ತುಂಬುತ್ತದೆ. 2020 ರ ಜೂನ್ 19 ರ   ಬೆಳಿಗ್ಗೆ 58 ವರ್ಷದ ಜಯರಾಜ್ ಮತ್ತು ಅವರ 31 ವರ್ಷದ ಮಗ ಇಮ್ಯಾನುವೆಲ್ ಬೆನಿಕ್ಸ್     ಸತಾಂಕುಲಮ್‌‌‌ನ ತಮ್ಮ ಮನೆಯಿಂದ ಹೊರಟಿದ್ದರು. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ತಂದೆ ಮಗ ಸಂಜೆ 7 ರ ಹೊತ್ತಿಗೆ ತಮ್ಮ ಅಂಗಡಿಯನ್ನು ಮುಚ್ಚಲು ಮುಂದಾಗಿದ್ದಾರೆ. ಆದರೆ ಆ ಸಂಜೆ ಕುಟುಂಬದ ನೆಮ್ಮದಿಯ ಬದುಕಿಗೆ ಕೊನೆ ಹಾಡಿತ್ತು.

ತಮಿಳುನಾಡಿನ ತೂತುಕುಡಿಯಲ್ಲಿ ಕಳೆದ ಜೂನ್‌ 19 ರಂದು ನಡೆದ ಲಾಕಪ್‌ ಡೆತ್ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ತಮಿಳುನಾಡಿನ ಪೊಲೀಸರ ಕ್ರೌರ್ಯದ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಆದರೆ 1 ವರ್ಷಗಳ ನಂತರವೂ ತೂತುಕುಡಿ ಲಾಕಪ್‌ ಡೆತ್ ಪ್ರಕರಣದಲ್ಲಿ ಹೆಚ್ಚಿನ ಪ್ರಗತಿಯಾಗಿಲ್ಲ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಜಯರಾಜ್ ಮತ್ತು ಇಮ್ಯಾನುವೆಲ್ ಬಿನಿಕ್‌ ಅವರ ಸ್ನೇಹಿತರು ಲಾಕಪ್‌ ಡೆತ್‌ ಕುರಿತು ಏನು ಹೇಳುತ್ತಾರೆ ನೋಡೋಣ.

ಇದನ್ನೂ ಓದಿ : 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಲಾಕಪ್‌ ಡೆತ್‌ಗೆ 1 ವರ್ಷ ಎಂದರೆ ನಂಬಲಾಗುತ್ತಿಲ್ಲ

ಲಾಕಪ್‌ ಡೆತ್‌ನಲ್ಲಿ ಮೃತಪಟ್ಟ ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು 2020 ರ ಆಗಸ್ಟ್ ನಲ್ಲಿ ತಮ್ಮ ಸಾತಂಕುಲಮ್‌ನ ಮನೆಯನ್ನು ತೊರೆದು ಮಗಳು ಪೆರ್ಸಿಸ್ ಜೊತೆ ಪಕ್ಕದ ಟೆಂಕಾಸಿ ಜಿಲ್ಲೆಯ ಪುಲ್ಲಂಗುಡಿಯಲ್ಲಿ ವಾಸಿಸುತ್ತಿದ್ದಾರೆ.

ಲಾಕಪ್‌ ಡೆತ್‌ ನಡೆದ ರಾತ್ರಿ ಪೊಲೀಸ್ ಠಾಣೆಯ ಆಚೆಗೆ ನಿಂತಿದ್ದ ಬಿನಿಕ್‌ ಅವರ ಸ್ನೇಹಿತ್ ರವಿ ತಮ್ಮ ಸ್ನೇಹಿತನನ್ನು ನೆನೆಸಿಕೊಂಡು ಮರುಗುತ್ತಾರೆ. ಬೆನಿಕ್‌ನನ್ನು ನೆನೆಯದ ಒಂದೇ ಒಂದು ದಿನವೂ ಇಲ್ಲ ಈ ಒಂದು ವರ್ಷದಲ್ಲಿ ಎಂದು ರವಿ ನೆನೆಸಿಕೊಂಡಿದ್ದಾರೆ. ಲಾಕಪ್‌‌‌ ಡೆತ್‌ಗೆ  1 ವರ್ಷವೆಂದರೆ ನಂಬಲಾಗದು ಎಂದು ರವಿ ತಮ್ಮ ದು:ಖವನ್ನು ಹಂಚಿಕೊಂಡಿದ್ದಾರೆ.

1 ವರ್ಷ ಆಗಿಹೋಯಿತೇ ? ಬೆನಿಕ್ ಮುಖ ಇನ್ನೂ ಅಚ್ಚಳಿಯದಂತೆ ನನ್ನ  ಕಣ್ಣ ಮುಂದಿದೆ ಎಂದು ಬೆನಿಕ್ ಅವರ ಮತ್ತೊಬ್ಬ ಸ್ನೇಹಿತ ತಮ್ಮ ನೋವನ್ನು ಹಂಚಿಕೊಳ್ಳುತ್ತಾರೆ.

ಜೂನ್ 22 ರಂದು ಜಯರಾಜ್ ಮತ್ತು ಬೆನಿಕ್ ಅವರ ಕುಟುಂಬ ಲಾಕಪ್ ಡೆತ್‌ನಲ್ಲಿ ಮಡಿದವರ ನೆನಪಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಂಡಿದೆ.

ಘಟನೆಯ ಹಿನ್ನಲೆ

2020 ರ ಜೂನ್ 18 ರಂದು ಜಯರಾಜ್ ಅವರ ಮೊಬೈಲ್ ಅಂಗಡಿಗೆ ಆಗಮಿಸಿದ ಪೊಲೀಸ್ ಪೇದೆಗಳು ಸರ್ಕಾರ ನಿಗದಿ ಪಡಿಸಿದ ಲಾಕ್‌ಡೌನ್ ಅವಧಿಯನ್ನು ಮೀರಿ ಅಂಗಡಿಯನ್ನು ತೆರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಹೋಗಿದ್ದರು. ಮಾರನೇ ದಿನ ಸಂಜೆ 7:45 ನಿಮಿಷಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಾಲಕೃಷ್ಣನ್ ಕೆಲವು ಪೇದೆಗಳೊಂದಿಗೆ ಜಯರಾಜ್ ಅವರ ಅಂಗಡಿಗೆ ಆಗಮಿಸಿ ಮಾತಿನ ಚಕಮುಕಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಜಯರಾಜ್ ಮತ್ತು ಇಮ್ಯಾನುವೆಲ್ ಬೆನಿಕ್ ಅವರನ್ನು ಪೊಲೀಸ್ ಠಾಣೆಗೆ ಒಯ್ದಿದ್ದಾರೆ. ರಾತ್ರಿಯಿಡಿ ಪೊಲೀಸರು ಥಳಿಸಿದ ಪರಿಣಾಮ ಬೆನಿಕ್ ಅದೇ ರಾತ್ರಿ ಮೃತಪಟ್ಟಿದ್ದಾರೆ. ತಂದೆ ಜಯರಾಜ್ ಮಾರನೇಯ ದಿನ ಅಸು ನೀಗಿದ್ದಾರೆ.

ಜಯರಾಜ್ ಮತ್ತು ಬೆನಿಕ್‌ರನ್ನು ಪೊಲೀಸರು ಲಾಟಿಗಳಿಂದ ಮನಸೋ ಇಚ್ಛೆ ಥಳಿಸಿದರು. ರಕ್ತ ಹರಿಯುತ್ತಿತ್ತು. ನಿಲ್ಲಿಸಿ ಎಂದರೆ ಮತ್ತಷ್ಟು ಹೊಡೆದರು. ಪರಿಣಾಮ ತಂದೆ ಮತ್ತು ಮಗ ಪೊಲೀಸ್ ಠಾಣೆಯಲ್ಲಿಯೇ ಕೊನೆ ಉಸಿರು ಎಳೆದಿದ್ದಾರೆ ಎಂದು 2020 ರ ಜೂನ್ 19 ರಂದು ಸತಾಂಕುಲಮ್ ಪೊಲೀಸ್ ಠಾಣೆಯ ಎದುರು ಕಾಯುತ್ತ ನಿಂತಿದ್ದ ಬೆನಿಕ್ ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿದ FIR ನಲ್ಲಿ ಸಾಕಷ್ಟು ದೋಷವಿರುವುದನ್ನು ಗಮನಿಸಿದ ತಮಿಳುನಾಡು ಹೈಕೋರ್ಟ್ ಸುಮೋಟೊ ಪ್ರಕರಣವನ್ನು ದಾಖಲಿಸಿಕೋಮಡು ವಿಚಾರಣೆಯನ್ನು ಆರಂಭಿಸಿತು. ಈ ನಡುವೆ ತಮಿಳುನಾಡಿನಾದ್ಯಂತ ಪೊಲೀಸರ ಕ್ರೌರ್ಯದ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ತಮಿಳುನಾಡು ಹೈಕೋರ್ಟ್‌ ಪ್ರಕತರಣವನ್ನು ಸಿಬಿಐಗೆ ವಹಿಸಿತ್ತು.

CBI ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತಾಂಕುಲಮ್ ಠಾಣಾಧಿಕಾರಿಯಾಗಿದ್ದ ಎಸ್‌.ಶ್ರೀಧರ್, ಕೆ. ಬಾಲಕೃಷ್ಣನ್ ಮತ್ತು ಮತ್ತೊಬ್ಬ ಸಬ್‌ ಇನ್ಸ್‌ಪೆಕ್ಟರ್, ಇಬ್ಬರು ಹೆಡ್‌ ಕಾನ್ಸಟೇಬಲ್, 4 ಜನ ಕಾನ್ಸಟೇಬಲ್ ಸೇರಿ 9 ಜನರನ್ನು ಬಂಧಿಸಿತ್ತು. ಅಪರಾಧಿಕ ಸಂಚು, ಕೊಲೆ, ಸುಳ್ಳು ಪ್ರಕರಣ ದಾಖಲು, ಸಾಕ್ಷಿ ನಾಶ, ಅಕ್ರಮ ಬಂಧನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಿದೆ. 9 ಜನರಲ್ಲಿ ಒಬ್ಬರು ಈಗಲೇ ಕೋವಿಡ್‌ ಕಾರಣಕ್ಕೆ ಮೃತಪಟ್ಟಿದ್ದಾರೆ. ಉಳಿದ 8 ಜನರು ಇನ್ನೂ ಜೈಲಿನಲ್ಲಿ ಇದ್ದಾರೆ.

ಕುಂಟುತ್ತ ಸಾಗುತ್ತಿರುವ CBI   ವಿಚಾರಣೆ

ಕಳೆದ 8 ತಿಂಗಳಿನಿಂದ CBI ಲಾಕಪ್‌ ಡೆತ್ ಪ್ರಕರಣದ ತನಿಖೆಯನ್ನು ನಡೆಸುತ್ತಲೇ ಇದೆ. ಈ ಸಂಬಂಧ ವಿಚಾರಣೆಯನ್ನು ಕೂಡ ನಡೆಸುತ್ತಿದೆ. ಮಾರ್ಚ್‌ 2021 ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು ಸಿಬಿಐ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಿಖೆ ಯಾಕೆ ಮುಗಿಯುತ್ತಿಲ್ಲ ? 8 ತಿಂಗಳು ಬೇಕೆ ? ಎಂದು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಸಿಬಿಐ ಸಮರ್ಪಕವಾಗಿ ಉತ್ತರಿಸಿರಲಿಲ್ಲ.  1 ವರ್ಷವಾದರೂ ಸಿಬಿಐ ತನಿಖೆಯನ್ನು ನಡೆಸುತ್ತಲೇ ಇದೆ.

ಮಧುರೈ ಹೈಕೋರ್ಟ್‌ ಬೆಂಚ್ 2021 ಮಾರ್ಚ್‌ 28 ರಂದು  6 ತಿಂಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಮುಧರೈನ ಜಿಲ್ಲಾ ನ್ಯಾಯಾಧೀಶರಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮೇ 25 ರಂದು ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಹುಟ್ಟಿಸುವ ಪ್ರಯತ್ನದಲ್ಲಿ ತಮಿಳುನಾಡು ಪೊಲೀಸ್ ಇಲಾಖೆ

ತೂತುಕುಡಿ ಲಾಕಪ್‌ ಡೆತ್‌ ಪ್ರಕರಣದ ನಂತರ ತಮಿಳುನಾಡು ಪೊಲೀಸ್ ಇಲಾಖೆ ಸಾಕಷ್ಟು ಮುಜುಗರ ಮತ್ತು ಅಪನಂಬಿಕೆಯನ್ನು ಅನುಭವಿಸಿದೆ. ಜನರು ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳ ತೊಡಗಿದ್ದಾರೆ. ತೂತುಕುಡಿ ಲಾಕಪ್‌ ಡೆತ್ ನಂತರ ಮತ್ತಷ್ಟು ಪೊಲೀಸ್ ದೌರ್ಜನ್ಯದ ಪ್ರಕರಣಗಳು ತಮಿಳುನಾಡಿನಲ್ಲಿ ಬೆಳಕಿಗೆ ಬಂದಿವೆ. ಸಾತಂಕುಲಂ ಪೊಲೀಸ್ ಠಾಣೆಯಲ್ಲಿ 30 ಜನ ಹೊಸ ಪೊಲೀಸ್ ಸಿಬ್ಬಂದಿಯನ್ನು ತಮಿಳುನಾಡು ಪೊಲೀಸ್ ಇಲಾಖೆ ನೇಮಿಸಿದೆ.

ಹೊಸದಾಗಿ ನೇಮಕವಾದ ಪೊಲೀಸ್ ಸಿಬ್ಬಂದಿ ಸಾತಂಕುಲ ಸುತ್ತಮುತ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಜನತೆಯೊಂದಿಗೆ ಪೊಲೀಸ್ ಎಂಬ ಜನರ ದೂರುಗಳನ್ನು ಆಲಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದ್ದಾರೆ. ಜೊತೆಗೆ ಸಾತಂಕುಲ ಸುತ್ತ ಮುತ್ತ ಸಾಕಷ್ಟು ಸಿಸಿ ಟಿವಿಯನ್ನು ಕೂಡ ಪೊಲೀಸರು ಅಳವಡಿಸಿದ್ದಾರೆ. ಆದರೂ ಇನ್ನೂ ತೂತುಕುಡಿಯ ಜನರಿಗೆ ಪೊಲೀಸರ ಮೇಲಿನ ಭಯ ದೂರವಾಗಿಲ್ಲ. ಲಾಕಪ್‌ ಡೆತ್ ಘಟನೆ ತಮಿಳುನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಕೂತುಬಿಟ್ಟಿದೆ. ಲಾಕಪ್‌ ಡೆತ್‌ಗೆ ಕಾರಣವಾದ ಪೊಲೀಸ್ ಅಧಿಕಾರಿಗಳಿಗೆ ಶೀಘ್ರದಲ್ಲಿ ಶಿಕ್ಷೆಯಾದರೆ ಮಾತ್ರ ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಒಂದಷ್ಟು ನಂಬಿಕೆ ಹುಟ್ಟಲು ಸಾಧ್ಯ.

ಅನುವಾದ –ರಾಜೇಶ್ ಹೆಬ್ಬಾರ್ 

ಮೂಲ : ಕ್ವಿಂಟ್ ಇಂಡಿಯಾ

ಇದನ್ನೂ ಓದಿ : ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...