Homeಅನುವಾದಿತ ಲೇಖನತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿದ್ದ ತಮಿಳುನಾಡಿನ ಲಾಕ್‌ಆಪ್ ಡೆತ್‌ಗೆ ಇಂದು 1 ವರ್ಷ ತುಂಬುತ್ತದೆ. 2020 ರ ಜೂನ್ 19 ರ   ಬೆಳಿಗ್ಗೆ 58 ವರ್ಷದ ಜಯರಾಜ್ ಮತ್ತು ಅವರ 31 ವರ್ಷದ ಮಗ ಇಮ್ಯಾನುವೆಲ್ ಬೆನಿಕ್ಸ್     ಸತಾಂಕುಲಮ್‌‌‌ನ ತಮ್ಮ ಮನೆಯಿಂದ ಹೊರಟಿದ್ದರು. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ತಂದೆ ಮಗ ಸಂಜೆ 7 ರ ಹೊತ್ತಿಗೆ ತಮ್ಮ ಅಂಗಡಿಯನ್ನು ಮುಚ್ಚಲು ಮುಂದಾಗಿದ್ದಾರೆ. ಆದರೆ ಆ ಸಂಜೆ ಕುಟುಂಬದ ನೆಮ್ಮದಿಯ ಬದುಕಿಗೆ ಕೊನೆ ಹಾಡಿತ್ತು.

ತಮಿಳುನಾಡಿನ ತೂತುಕುಡಿಯಲ್ಲಿ ಕಳೆದ ಜೂನ್‌ 19 ರಂದು ನಡೆದ ಲಾಕಪ್‌ ಡೆತ್ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ತಮಿಳುನಾಡಿನ ಪೊಲೀಸರ ಕ್ರೌರ್ಯದ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ಆದರೆ 1 ವರ್ಷಗಳ ನಂತರವೂ ತೂತುಕುಡಿ ಲಾಕಪ್‌ ಡೆತ್ ಪ್ರಕರಣದಲ್ಲಿ ಹೆಚ್ಚಿನ ಪ್ರಗತಿಯಾಗಿಲ್ಲ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಜಯರಾಜ್ ಮತ್ತು ಇಮ್ಯಾನುವೆಲ್ ಬಿನಿಕ್‌ ಅವರ ಸ್ನೇಹಿತರು ಲಾಕಪ್‌ ಡೆತ್‌ ಕುರಿತು ಏನು ಹೇಳುತ್ತಾರೆ ನೋಡೋಣ.

ಇದನ್ನೂ ಓದಿ : 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಲಾಕಪ್‌ ಡೆತ್‌ಗೆ 1 ವರ್ಷ ಎಂದರೆ ನಂಬಲಾಗುತ್ತಿಲ್ಲ

ಲಾಕಪ್‌ ಡೆತ್‌ನಲ್ಲಿ ಮೃತಪಟ್ಟ ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು 2020 ರ ಆಗಸ್ಟ್ ನಲ್ಲಿ ತಮ್ಮ ಸಾತಂಕುಲಮ್‌ನ ಮನೆಯನ್ನು ತೊರೆದು ಮಗಳು ಪೆರ್ಸಿಸ್ ಜೊತೆ ಪಕ್ಕದ ಟೆಂಕಾಸಿ ಜಿಲ್ಲೆಯ ಪುಲ್ಲಂಗುಡಿಯಲ್ಲಿ ವಾಸಿಸುತ್ತಿದ್ದಾರೆ.

ಲಾಕಪ್‌ ಡೆತ್‌ ನಡೆದ ರಾತ್ರಿ ಪೊಲೀಸ್ ಠಾಣೆಯ ಆಚೆಗೆ ನಿಂತಿದ್ದ ಬಿನಿಕ್‌ ಅವರ ಸ್ನೇಹಿತ್ ರವಿ ತಮ್ಮ ಸ್ನೇಹಿತನನ್ನು ನೆನೆಸಿಕೊಂಡು ಮರುಗುತ್ತಾರೆ. ಬೆನಿಕ್‌ನನ್ನು ನೆನೆಯದ ಒಂದೇ ಒಂದು ದಿನವೂ ಇಲ್ಲ ಈ ಒಂದು ವರ್ಷದಲ್ಲಿ ಎಂದು ರವಿ ನೆನೆಸಿಕೊಂಡಿದ್ದಾರೆ. ಲಾಕಪ್‌‌‌ ಡೆತ್‌ಗೆ  1 ವರ್ಷವೆಂದರೆ ನಂಬಲಾಗದು ಎಂದು ರವಿ ತಮ್ಮ ದು:ಖವನ್ನು ಹಂಚಿಕೊಂಡಿದ್ದಾರೆ.

1 ವರ್ಷ ಆಗಿಹೋಯಿತೇ ? ಬೆನಿಕ್ ಮುಖ ಇನ್ನೂ ಅಚ್ಚಳಿಯದಂತೆ ನನ್ನ  ಕಣ್ಣ ಮುಂದಿದೆ ಎಂದು ಬೆನಿಕ್ ಅವರ ಮತ್ತೊಬ್ಬ ಸ್ನೇಹಿತ ತಮ್ಮ ನೋವನ್ನು ಹಂಚಿಕೊಳ್ಳುತ್ತಾರೆ.

ಜೂನ್ 22 ರಂದು ಜಯರಾಜ್ ಮತ್ತು ಬೆನಿಕ್ ಅವರ ಕುಟುಂಬ ಲಾಕಪ್ ಡೆತ್‌ನಲ್ಲಿ ಮಡಿದವರ ನೆನಪಿನಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಂಡಿದೆ.

ಘಟನೆಯ ಹಿನ್ನಲೆ

2020 ರ ಜೂನ್ 18 ರಂದು ಜಯರಾಜ್ ಅವರ ಮೊಬೈಲ್ ಅಂಗಡಿಗೆ ಆಗಮಿಸಿದ ಪೊಲೀಸ್ ಪೇದೆಗಳು ಸರ್ಕಾರ ನಿಗದಿ ಪಡಿಸಿದ ಲಾಕ್‌ಡೌನ್ ಅವಧಿಯನ್ನು ಮೀರಿ ಅಂಗಡಿಯನ್ನು ತೆರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಹೋಗಿದ್ದರು. ಮಾರನೇ ದಿನ ಸಂಜೆ 7:45 ನಿಮಿಷಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಾಲಕೃಷ್ಣನ್ ಕೆಲವು ಪೇದೆಗಳೊಂದಿಗೆ ಜಯರಾಜ್ ಅವರ ಅಂಗಡಿಗೆ ಆಗಮಿಸಿ ಮಾತಿನ ಚಕಮುಕಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಜಯರಾಜ್ ಮತ್ತು ಇಮ್ಯಾನುವೆಲ್ ಬೆನಿಕ್ ಅವರನ್ನು ಪೊಲೀಸ್ ಠಾಣೆಗೆ ಒಯ್ದಿದ್ದಾರೆ. ರಾತ್ರಿಯಿಡಿ ಪೊಲೀಸರು ಥಳಿಸಿದ ಪರಿಣಾಮ ಬೆನಿಕ್ ಅದೇ ರಾತ್ರಿ ಮೃತಪಟ್ಟಿದ್ದಾರೆ. ತಂದೆ ಜಯರಾಜ್ ಮಾರನೇಯ ದಿನ ಅಸು ನೀಗಿದ್ದಾರೆ.

ಜಯರಾಜ್ ಮತ್ತು ಬೆನಿಕ್‌ರನ್ನು ಪೊಲೀಸರು ಲಾಟಿಗಳಿಂದ ಮನಸೋ ಇಚ್ಛೆ ಥಳಿಸಿದರು. ರಕ್ತ ಹರಿಯುತ್ತಿತ್ತು. ನಿಲ್ಲಿಸಿ ಎಂದರೆ ಮತ್ತಷ್ಟು ಹೊಡೆದರು. ಪರಿಣಾಮ ತಂದೆ ಮತ್ತು ಮಗ ಪೊಲೀಸ್ ಠಾಣೆಯಲ್ಲಿಯೇ ಕೊನೆ ಉಸಿರು ಎಳೆದಿದ್ದಾರೆ ಎಂದು 2020 ರ ಜೂನ್ 19 ರಂದು ಸತಾಂಕುಲಮ್ ಪೊಲೀಸ್ ಠಾಣೆಯ ಎದುರು ಕಾಯುತ್ತ ನಿಂತಿದ್ದ ಬೆನಿಕ್ ಸ್ನೇಹಿತರು ತಿಳಿಸಿದ್ದಾರೆ.

ಪೊಲೀಸರು ದಾಖಲಿಸಿದ FIR ನಲ್ಲಿ ಸಾಕಷ್ಟು ದೋಷವಿರುವುದನ್ನು ಗಮನಿಸಿದ ತಮಿಳುನಾಡು ಹೈಕೋರ್ಟ್ ಸುಮೋಟೊ ಪ್ರಕರಣವನ್ನು ದಾಖಲಿಸಿಕೋಮಡು ವಿಚಾರಣೆಯನ್ನು ಆರಂಭಿಸಿತು. ಈ ನಡುವೆ ತಮಿಳುನಾಡಿನಾದ್ಯಂತ ಪೊಲೀಸರ ಕ್ರೌರ್ಯದ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ತಮಿಳುನಾಡು ಹೈಕೋರ್ಟ್‌ ಪ್ರಕತರಣವನ್ನು ಸಿಬಿಐಗೆ ವಹಿಸಿತ್ತು.

CBI ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತಾಂಕುಲಮ್ ಠಾಣಾಧಿಕಾರಿಯಾಗಿದ್ದ ಎಸ್‌.ಶ್ರೀಧರ್, ಕೆ. ಬಾಲಕೃಷ್ಣನ್ ಮತ್ತು ಮತ್ತೊಬ್ಬ ಸಬ್‌ ಇನ್ಸ್‌ಪೆಕ್ಟರ್, ಇಬ್ಬರು ಹೆಡ್‌ ಕಾನ್ಸಟೇಬಲ್, 4 ಜನ ಕಾನ್ಸಟೇಬಲ್ ಸೇರಿ 9 ಜನರನ್ನು ಬಂಧಿಸಿತ್ತು. ಅಪರಾಧಿಕ ಸಂಚು, ಕೊಲೆ, ಸುಳ್ಳು ಪ್ರಕರಣ ದಾಖಲು, ಸಾಕ್ಷಿ ನಾಶ, ಅಕ್ರಮ ಬಂಧನ ಸೇರಿ ಹಲವು ಪ್ರಕರಣಗಳನ್ನು ದಾಖಲಿಸಿದೆ. 9 ಜನರಲ್ಲಿ ಒಬ್ಬರು ಈಗಲೇ ಕೋವಿಡ್‌ ಕಾರಣಕ್ಕೆ ಮೃತಪಟ್ಟಿದ್ದಾರೆ. ಉಳಿದ 8 ಜನರು ಇನ್ನೂ ಜೈಲಿನಲ್ಲಿ ಇದ್ದಾರೆ.

ಕುಂಟುತ್ತ ಸಾಗುತ್ತಿರುವ CBI   ವಿಚಾರಣೆ

ಕಳೆದ 8 ತಿಂಗಳಿನಿಂದ CBI ಲಾಕಪ್‌ ಡೆತ್ ಪ್ರಕರಣದ ತನಿಖೆಯನ್ನು ನಡೆಸುತ್ತಲೇ ಇದೆ. ಈ ಸಂಬಂಧ ವಿಚಾರಣೆಯನ್ನು ಕೂಡ ನಡೆಸುತ್ತಿದೆ. ಮಾರ್ಚ್‌ 2021 ಜಯರಾಜ್ ಅವರ ಪತ್ನಿ ಸೆಲ್ವರಾಣಿಯವರು ಸಿಬಿಐ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಿಖೆ ಯಾಕೆ ಮುಗಿಯುತ್ತಿಲ್ಲ ? 8 ತಿಂಗಳು ಬೇಕೆ ? ಎಂದು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಸಿಬಿಐ ಸಮರ್ಪಕವಾಗಿ ಉತ್ತರಿಸಿರಲಿಲ್ಲ.  1 ವರ್ಷವಾದರೂ ಸಿಬಿಐ ತನಿಖೆಯನ್ನು ನಡೆಸುತ್ತಲೇ ಇದೆ.

ಮಧುರೈ ಹೈಕೋರ್ಟ್‌ ಬೆಂಚ್ 2021 ಮಾರ್ಚ್‌ 28 ರಂದು  6 ತಿಂಗಳಲ್ಲಿ ವಿಚಾರಣೆಯನ್ನು ಮುಗಿಸುವಂತೆ ಮುಧರೈನ ಜಿಲ್ಲಾ ನ್ಯಾಯಾಧೀಶರಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ ಮೇ 25 ರಂದು ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆ ಹುಟ್ಟಿಸುವ ಪ್ರಯತ್ನದಲ್ಲಿ ತಮಿಳುನಾಡು ಪೊಲೀಸ್ ಇಲಾಖೆ

ತೂತುಕುಡಿ ಲಾಕಪ್‌ ಡೆತ್‌ ಪ್ರಕರಣದ ನಂತರ ತಮಿಳುನಾಡು ಪೊಲೀಸ್ ಇಲಾಖೆ ಸಾಕಷ್ಟು ಮುಜುಗರ ಮತ್ತು ಅಪನಂಬಿಕೆಯನ್ನು ಅನುಭವಿಸಿದೆ. ಜನರು ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಳ್ಳ ತೊಡಗಿದ್ದಾರೆ. ತೂತುಕುಡಿ ಲಾಕಪ್‌ ಡೆತ್ ನಂತರ ಮತ್ತಷ್ಟು ಪೊಲೀಸ್ ದೌರ್ಜನ್ಯದ ಪ್ರಕರಣಗಳು ತಮಿಳುನಾಡಿನಲ್ಲಿ ಬೆಳಕಿಗೆ ಬಂದಿವೆ. ಸಾತಂಕುಲಂ ಪೊಲೀಸ್ ಠಾಣೆಯಲ್ಲಿ 30 ಜನ ಹೊಸ ಪೊಲೀಸ್ ಸಿಬ್ಬಂದಿಯನ್ನು ತಮಿಳುನಾಡು ಪೊಲೀಸ್ ಇಲಾಖೆ ನೇಮಿಸಿದೆ.

ಹೊಸದಾಗಿ ನೇಮಕವಾದ ಪೊಲೀಸ್ ಸಿಬ್ಬಂದಿ ಸಾತಂಕುಲ ಸುತ್ತಮುತ್ತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಜನತೆಯೊಂದಿಗೆ ಪೊಲೀಸ್ ಎಂಬ ಜನರ ದೂರುಗಳನ್ನು ಆಲಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಕೂಡ ನಡೆಸುತ್ತಿದ್ದಾರೆ. ಜೊತೆಗೆ ಸಾತಂಕುಲ ಸುತ್ತ ಮುತ್ತ ಸಾಕಷ್ಟು ಸಿಸಿ ಟಿವಿಯನ್ನು ಕೂಡ ಪೊಲೀಸರು ಅಳವಡಿಸಿದ್ದಾರೆ. ಆದರೂ ಇನ್ನೂ ತೂತುಕುಡಿಯ ಜನರಿಗೆ ಪೊಲೀಸರ ಮೇಲಿನ ಭಯ ದೂರವಾಗಿಲ್ಲ. ಲಾಕಪ್‌ ಡೆತ್ ಘಟನೆ ತಮಿಳುನಾಡಿನ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಕೂತುಬಿಟ್ಟಿದೆ. ಲಾಕಪ್‌ ಡೆತ್‌ಗೆ ಕಾರಣವಾದ ಪೊಲೀಸ್ ಅಧಿಕಾರಿಗಳಿಗೆ ಶೀಘ್ರದಲ್ಲಿ ಶಿಕ್ಷೆಯಾದರೆ ಮಾತ್ರ ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಒಂದಷ್ಟು ನಂಬಿಕೆ ಹುಟ್ಟಲು ಸಾಧ್ಯ.

ಅನುವಾದ –ರಾಜೇಶ್ ಹೆಬ್ಬಾರ್ 

ಮೂಲ : ಕ್ವಿಂಟ್ ಇಂಡಿಯಾ

ಇದನ್ನೂ ಓದಿ : ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...