Homeಕರೋನಾ ತಲ್ಲಣಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

ಸೋಮವಾರದಿಂದ ಕರ್ನಾಟಕದಲ್ಲಿ ಅನ್ ಲಾಕ್-2.0 ಜಾರಿಗೆ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ದೇಶದ ಹಲವು ರಾಜ್ಯಗಳು ಕೊರೊನಾ ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿವೆ. ಅದರಂತೆ ರಾಜ್ಯದಲ್ಲೂ ಮೊದಲ ಹಂತದ ಅನ್‌ಲಾಕ್‌ ಪ್ರಕ್ರಿಯೆ ಕಳೆದ ವಾರವೆ ಪ್ರಾರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸಲಾಗಿದೆ. ಈಗ ಎರಡನೇ ಹಂತದ ಅನ್​ಲಾಕ್​ ಮಾಡಲು ಸರ್ಕಾರ ಮುಂದಾಗಿದೆ.

ಜೂನ್​ 21 ರಿಂದ ಅನ್​ಲಾಕ್​ 2.0 ಜಾರಿಯಾಗಲಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 2 ನೇ ಹಂತದ ಲಾಕ್​ಡೌನ್​ ಸಡಿಲಿಕೆಯಲ್ಲಿ ಯಾವುದಕ್ಕೆಲ್ಲಾ ಅನುಮತಿ ಇರುತ್ತದೆ ಮತ್ತು ಯಾವುದಕ್ಕೆಲ್ಲಾ ನಿರ್ಬಂಧ ಎಂಬುದನ್ನು ಇನ್ನಷ್ಟೆ ತಿಳಿಯಬೇಕಿದೆ. ಸೋಮವಾರದಿಂದ ಅನ್‌ಲಾಕ್ 2.O ಜಾರಿ ಹಿನ್ನಲೆ, ಅಂದಿನಿಂದ ಕರ್ನಾಟಕ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬಸ್​ ಮತ್ತು ಮೆಟ್ರೋ ಸಂಚಾರದ ಬಗ್ಗೆ ಇಂದಿನ ಸಿಎಂ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಜೂನ್‌ 21 ರಿಂದ ಅನ್​ಲಾಕ್​​‌ 2.O ಜಾರಿಯಾದರೆ ಬಿಎಂಟಿಸಿ, ಕೆಎಸ್ಆರ್ಟಿಸಿ, ಮೆಟ್ರೋ ಓಡಾಟವಿರುತ್ತದೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 1500-2000 ಬಸ್​ಗಳು ಓಡಾಟ ನಡೆಸಲಿವೆ. ಕೊರೋನಾ ಭೀತಿಯಿಂದಾಗಿ ಬಿಎಂಟಿಸಿ ಎಸಿ ವೋಲ್ವೋ ಬಸ್ಸುಗಳ ಸಂಚಾರ ಬಹುತೇಕ ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಬಸ್ಸುಗಳಲ್ಲಿ 50% ದಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ ಎನ್ನಾಗಿದೆ. ಬಸ್ಸುಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ ಇರಲಿದ್ದು, ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ. ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ ನೀಡಲಾಗಿದೆ.

ಇದರ ಜೊತೆಗೆ ಜೂನ್‌ 21ರಿಂದ ಕೆಎಸ್​ಆರ್​ಟಿಸಿ ಬಸ್​​ಗಳನ್ನು ರಸ್ತೆಗಿಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಒಟ್ಟು 8 ಸಾವಿರ ಕೆಎಸ್​ಆರ್​ಟಿಸಿ ಬಸ್ಸುಗಳಿದ್ದು, ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳನ್ನು ಮಾತ್ರ ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ ಎಂದು ವರದಿಯಾಗಿದೆ.

ಅತೀ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್​​ಟಿಸಿ ಬಸ್ ಓಡಾಟ ಇರುವುದಿಲ್ಲ. ಸದ್ಯ ಹೊರ ರಾಜ್ಯಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಮಾಡುವ ಸಾಧ್ಯತೆ ಕಡಿಮೆ ಇದೆ. ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದೆ. ಕೆಎಸ್ ಆರ್ ಟಿಸಿ ಬಸ್​ಗಳಲ್ಲಿಯೂ ಬಿಎಂಟಿಸಿಯಂತೆ 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...