Homeಕರ್ನಾಟಕಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

- Advertisement -
- Advertisement -

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡದಲ್ಲಿ ವಾರದ ಮಳೆ ಶನಿವಾರದ ಹೊತ್ತಿಗೆ ಧಾರಕಾರವಾಗಿ ಸುರಿಯುತ್ತಿದ್ದು ನದಿಗಳೆಲ್ಲ ತುಂಬಿ ಹರಿಯತೊಡಗಿವೆ. ಕೃಷ್ಣ ಮತ್ತು ಕಾವೇರಿ ಕೊಳ್ಲದಲ್ಲಿ ಭಾರಿ ಮಳೆಯ ಪರಿಣಾಮ ಕೆಆರ್‌ಎಸ್‌, ಆಲಮಟ್ಟಿ, ತುಂಗಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಭಾರಿ ಏರಿಕೆಯಾಗಿದೆ. ನದೀ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತಗಳು ಈಗಾಗಲೇ ಆದೇಶ ಹೊರಡಿಸಿವೆ. ಹಾಗೇ ನದಿಗೆ ಇಳಿಯದಂತೆ ಮೀನುಗಾರರಿಗೆ ಸರ್ಕಾರ ಸೂಚಿಸಿದೆ.

ಮುಳುಗಡೆಯ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಮಹರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೆರೆ ಪರಿಸ್ಥಿತಿ ತಲೆದೊರಿದೆ. ಗೋಕಾಕ್, ಚಿಕ್ಕೋಡಿ ಭಾಗದಲ್ಲಿ ಕೂಡ ಮಳೆ ಪ್ರಮಾಣ ಹೆಚ್ಚಾಗಿದೆ. ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ತಗ್ಗಿನ ಪ್ರದೇಶದ ಗ್ರಾಮಗಳಲ್ಲಿ ನೀರು ನುಗ್ಗುವ ಅಪಾಯ ಎದುರಾಗಿದೆ. ಅನೇಕ ಕಡೆ ಸೇತುವೆಗಳು ಮುಳುಗಡೆಯಾಗಿದ್ದು ಹತ್ತಾರು ಗ್ರಾಮಗಳಲ್ಲಿ ಸಂಪರ್ಕ ಕಡಿತವಾಗಿದೆ.

ಮಳೆಯ ಆರ್ಭಟಕ್ಕೆ 2 ಜನ ಬಲಿ

ಬೆಳಗಾವಿಯ ಮಲಪ್ರಭಾ ಮತ್ತು ಮಾರ್ಕಾಂಡೇಯ ನದಿಯ ಪ್ರವಾಹದಲ್ಲಿ ಇಬ್ಬರು ವ್ಯಕ್ತಿಗಳು ಕೊಚ್ಚಿ ಹೋಗಿದ್ದಾರೆ. ಮಳೆಯ ರಭಸಕ್ಕೆ ಈಗ 2 ಬಲಿಯಾಗಿದೆ. ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು ಇನ್ನು 3 ದಿನ ಭಾರಿ ಮಳೆ ಹೊಯ್ಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದು ಜನರು ಕತ್ತಲೆಯಲ್ಲಿ ದಿನದೂಡುತ್ತಿದ್ದಾರೆ. ಬೆಳಗಾವಿಯ ಜೊತೆಗೆ ಕೊಡಗು ಮತ್ತು ಉತ್ತರ ಕನ್ನಡದಲ್ಲಿಯೂ ಭಾರಿ ಮಳೆಗೆ ಭೂಕುಸಿತಗಳು ಉಂಟಾಗಿವೆ. ಜೂನ್ ಆರಂಭದಲ್ಲಿಯೇ ವರುಣನ ಆರ್ಭಟಕ್ಕೆ ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗದ ತುಂಗಾ, ಶರಾವತಿ ಮತ್ತು ಭದ್ರಾ ನದಿಗಳು ರಭಸದಿಂದ ಹರಿಯತೊಡಗಿದ್ದು ಕೆಲವು ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ : ಸೋಮವಾರದಿಂದ ಕರ್ನಾಟಕದಲ್ಲಿ ಲಾಕ್‌ಡೌನ್‌-2.0 ಜಾರಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...