Homeಕರೋನಾ ತಲ್ಲಣಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್, ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ದಂಡು ನೆರೆದಿರುತ್ತಿತ್ತು.

- Advertisement -
- Advertisement -

ಬೆಳಗಾವಿಯಿಂದ ಕೊಡಗಿನ ತುದಿಯವರೆಗೆ ವಾರವಿಡಿ ಇನ್ನಿಲ್ಲದ ಮಳೆ. ಗುಡುಗು, ಸಿಡಿಲು, ಮಳೆ ಬಿಲ್ಲುಗಳ ಜೂಟಾಟ. ಘಟ್ಟದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ನದಿಗಳು ತುಂಬಿಹರಿಯುತ್ತಿವೆ. ಅಣೆಕಟ್ಟೆಗಳಿಗೆ ಒಳ ಹರಿವು ಹೆಚ್ಚಿದೆ. ಕೃಷ್ಣಾ ಕಾವೇರಿ ಕೊಳ್ಳದ ನದಿಗಳೆಲ್ಲ ಕೆಂಪು ಸಮುದ್ರದಂತೆ ರಭಸದಿಂದ ಭೋರ್ಗರೆಯತೊಡಗಿವೆ. ಆದರೆ, ಕೊರೊನಾ ಸಾಂಕ್ರಾಮಿಕದಿಂದ ಮಲೆನಾಡಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ.

ಹೌದು, ರಾಜ್ಯದೆಲ್ಲೆಡೆ ರೈತರ ಮೊಗದಲ್ಲಿ ಸಂತಸ ಅರಳಿದೆ. ಹಳ್ಳಿ ಹಳ್ಲಿಯಲ್ಲೂ ಜನರು ಗೊಬ್ಬರ, ಭತ್ತ, ಟ್ರಿಲ್ಲರ್, ನಾಟಿಗಳ ಅವಸರದ ಓಡಾಟದಲ್ಲಿ ಮುಳುಗಿದ್ದಾರೆ. ಜೂನ್ ತಿಂಗಳು ಬಂದರೆ ಎಲ್ಲರಿಗೂ ಆತಂಕ, ಸಂತಸ, ಚಿಂತೆ ಪ್ರಾರಂಭವಾಗಿ ಬಿಡುತ್ತದೆ. ಸಮಯಕ್ಕೆ ಸರಿಯಾಗಿ ಮಳೆ ಬಂದರೆ ಸರಿ, ಬರದಿದ್ದರೆ ಏನು ಎತ್ತ ಎಂಬ ನಿರಾಶೆ, ಅನಿಶ್ಚಿತತೆ. ಮುಂಗಾರು ಕೈಕೊಟ್ಟರೆ ವರ್ಷದ ಕೂಳಿನ ಕತೆ ಏನೆಂಬ ಚಿಂತೆ..   ಈ ವರ್ಷ ಜನರಲ್ಲಿ ಯಾವುದೇ ಆತಂಕಗಳಿಲ್ಲ. ಏಕೆಂದರೆ ಮುಂಗಾರು ಸರಿಯಾದ ಸಮಯಕ್ಕೆ ಬಂದಿದೆ, ವರುಣ ಆರ್ಭಟಿಸೊಡಗಿದ್ದಾನೆ. ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತಿವೆ. ಎತ್ತು ಕೋಣಗಳನ್ನು ಗದ್ದೆಗೆ ಹೊಡೆದುಕೊಂಡು ಜನರು ಪದಗಳನ್ನು ಹಾಡುತ್ತಿದ್ದಾರೆ.

ಕೃಷಿಯ ಕತೆ ಹಾಗಾದರೆ ಮಳೆಗಾಲದಲ್ಲಿ ಮಲೆನಾಡಿನ ಚಿತ್ರವೇ ಬೇರೆ. ದಿನವಿಡೀ ಬಿಡುವಿರದೇ  ಸುರಿಯುವ ಜಡಿ ಮಳೆ. ಬೇಸಿಗೆಯ ಬಿರು ಬಿಸಿಲಿಗೆ  ಬತ್ತಿ ಬಸವಳಿದು ಒಣಗಿದ್ದ ಹಳ್ಳ ಕೊಳ್ಲಗಳೆಲ್ಲ ಮರು ಹುಟ್ಟು ಪಡೆದು ಧುಮ್ಮಿಕ್ಕುವ ಕಲರವ. ಪ್ರಕೃತಿ ಹಚ್ಚ ಹಸಿರಾಗಿ ನಳ ನಳಿಸುವ ಸಂಭೃಮ. ನಡುವೆ ಮಾರು ಮಾರಿಗೆ ಬೆಟ್ಟದಿಂದ ಧುಮ್ಮಿಕ್ಕುವ ಝರಿಗಳು. ರಭಸದಿಂದ ಭೋರ್ಗರೆಯುವ ಜಲಪಾತಗಳು. ಮಲೆನಾಡಿನ ಮಳೆಗಾಲವೇ ಹಾಗೆ..! ದೇಶದ ಮೂಲೆ ಮೂಲೆಯಿಂದ ಪ್ರವಾಸಿಗರನ್ನು ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಜಿಟಿ ಜಿಟಿ ಮಳೆಯ ನಡುವೆ ಆ ಬೆಟ್ಟದಿಂದ ಈ ಗುಡ್ಡದಿಂದ ಇಳಿಯುವ ಜಲಧಾರೆಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಪ್ರವಾಸಿಗರ ದಂಡು ಮುಗಿ ಬೀಳುತ್ತದೆ. ಮಲೆನಾಡಿನ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೊಟೇಲು, ಲಾಡ್ಜು, ಟೀ, ತಿಂಡಿ ತಿನಿಸು ಮಾರುವವರು, ಬಾಡಿಗೆ ವಾಹನ ನಡೆಸುವವರು ಎಲ್ಲರ ಬದುಕು ಈ ಮಳೆಗಾಲದ ಮೇಲೆಯೇ ನಿಂತಿದೆ.

ಇದನ್ನೂ ಓದಿ : ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಸುಪ್ರಸಿದ್ದ ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್ ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ಜನ ಜಾತ್ರೆ ನೆರೆಯುತ್ತಿತ್ತು. ಆದರೆ ಈ ವರ್ಷ ಕೊರೊನಾ ಕಾರಣದಿಂದ ಮಲೆನಾಡಿನ ಯಾವ ಪ್ರವಾಸಿ ತಾಣಗಳೂ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿಲ್ಲ. ಎಲ್ಲೆಡೆ ಸಂಚಾರ ನಿರ್ಬಂಧವಿದೆ. ವಾರಾಂತ್ಯದ ರಜೆ ಕಳೆಯಲು ಬರುತ್ತಿದ್ದ ಐಟಿ ಉದ್ಯೋಗಿಗಳೂ ಈ ವರ್ಷ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇದರ ಪರಿಣಾಮ ಮಲೆನಾಡಿನ ಪ್ರವಾಸಿ ತಾಣಗಳು ಜನರಿಲ್ಲದೇ ಬಣಗುಡುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಫಾಲ್ಸ್, ತೀರ್ಥಕೆರೆ ಫಾಲ್ಸ್, ಸಗೀರ್ ಫಾಲ್ಸ್‌, ಸಿರಿಮನೆ ಫಾಲ್ಸ್, ಕಲ್ಲತ್ತಿಗರಿ ಫಾಲ್ಸ್, ಶಂಕರ್ ಫಾಲ್ಸ್ ಸೇರಿದಂತೆ ಜಿಲ್ಲೆಯ ದಶದಿಕ್ಕುಗಳಲ್ಲೂ ಜಲಪಾತಗಳು ಮೈದುಂಬಿ ಧುಮುಕುತ್ತಿವೆ. ಚಿಕ್ಕಮಗಳೂರು-ಮಂಗಳೂರು ಮಾರ್ಗದ ಚಾರ್ಮಡಿ ಘಾಟಿಯ ಫಾಲ್ಸ್‌ಗಳು ನೋಡುಗರ ಕಣ್ಣು ಕೋರೈಸುವಂತೆ ಧುಮ್ಮಿಕ್ಕುತ್ತಿವೆ. ಯಾವಾಗಲೂ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಚಾರ್ಮಾಡಿಯ ರಸ್ತೆ ಜನರಿಲ್ಲದೇ ಬಿಕೋ ಎನ್ನುತ್ತಿದೆ.

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಬದಿಯ ಜಲಪಾತ

ಉತ್ತರ ಕನ್ನಡ, ಶಿವಮೊಗ್ಗ, ಕೊಡಗಿನಲ್ಲೂ ಇದೇ ಕತೆ.  ಸಸ್ಯ ಸಂಪದ್ಭರಿತವಾದ ಉತ್ತರ ಕನ್ನಡ ಜಿಲ್ಲೆ ತನ್ನ ಕಾಡಿನ ಗರ್ಭದಲ್ಲಿ ನೂರಾರು ಪ್ರಾಕೃತಿಕ ಕೌತುಕವನ್ನು ಅಡಗಿಸಿಟ್ಟುಕೊಂಡಿದೆ. ಇಲ್ಲಿನ ಕಾಡು ಕಣಿವೆಗಳಲ್ಲಿ ಪ್ರತಿ ವರ್ಷವೂ ಒಂದೊಂದು ಹೊಸ ಜಲಪಾತ ಸಂಶೋಧನೆಯಾಗುತ್ತದೆ. ಜನಾಕರ್ಷಣೆಯ ತಾಣವಾಗಿ ಮಾರ್ಪಡುತ್ತಿದೆ. ಮಾಗೋಡ್ ಫಾಲ್ಸ್‌, ಉಂಚಳ್ಳಿ ಫಾಲ್ಸ್, ಶಿರ್ಲೆ ಫಾಲ್ಸ್, ಸಾತೊಡ್ಡಿ ಫಾಲ್ಸ್, ಶಿವಗಂಗಾ ಫಾಲ್ಸ್, ವಾಗಳ್ಳಿ ಫಾಲ್ಸ್ ಹೀಗೆ ಹಲವು ಫಾಲ್ಸ್‌ಗಳಿವೆ. ಪಕ್ಕದಲ್ಲಿ ಜೋಗ, ಕಾಳಿ ಅಘನಾಶಿನಿ, ಬೇಡ್ತಿ, ಶರಾವತಿಯ ಕಣಿವೆಯಲ್ಲಿ ಹೇಳ ಹೆಸರಿಲ್ಲದ ಮಳೆಗಾಲದಲ್ಲಿ ಮಾತ್ರ ಕಾಣುವ ಅಪರೂಪದ ಇನ್ನೆಷ್ಟೊ ಅದ್ಭುತ ಜಲಪಾತಗಳು. ಇವನ್ನೆಲ್ಲ ನೋಡಲು ಸದ್ಯ ಯಾವ ಪ್ರವಾಸಿಗರಿಗೂ ಅವಕಾಶವಿಲ್ಲ.

ಕೊರೊನಾ ಸಾಂಕ್ರಾಮಿಕ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡು ಬದುಕುತ್ತಿರುವ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಜನರ ಪರಿಸ್ಥಿತಿಯನ್ನು ಕೇಳುವವರೂ ಯಾರೂ ಇಲ್ಲ. ಭೋರ್ಗರೆಯುವ ಜಲಪಾತಗಳ ಮುಂದಿನ ಖಾಲಿತನದಲ್ಲಿ ಇವರೆಲ್ಲರ ಹಸಿವು ಸಂಕಟ ಮಡುಗಟ್ಟುತ್ತಿದೆ.

ವಿಶ್ವ ವಿಖ್ಯಾತ ಜೋಗ ಜಲಪಾತದ ಸುತ್ತಮುತ್ತ ಪ್ರವಾಸಿಗರನ್ನೇ ನಂಬಿ ಸರಿಸುಮಾರು 500 ಕುಟುಂಬಗಳು ಜೀವನ ನಡೆಸುತ್ತಿವೆ. ಜೀವನೋಪಾಯಕ್ಕಾಗಿ,  ಹೋಮ್‌ ಸ್ಟೇ, ಲಾಡ್ಜು, ಟೀ ಅಂಗಡಿ, ಹೊಟೇಲ್, ಜೀಪು ಕಾರು ಬಾಡಿಗೆ, ಫೊಟೋಗ್ರಫಿ, ಅಡ್ವೆಂಚರ್ ಟೂರಿಸ್ಟ್ ಗೈಡ್‌, ಟ್ರಕ್ಕಿಂಗ್‌ ಪಾರ್ಟನರ್‌ ಹೀಗೆ ಇಲ್ಲಿನ ಜನರು  ಬೆಂಗಳೂರಿನಿಂದ ಬರುವ ಪ್ರವಾಸಿಗರನ್ನೇ ನಂಬಿ ಕುಳಿತಿದ್ದಾರೆ.

ಮುಂಗಾರಿಗೆ ಜೀವಪಡೆದ ರೈಲು ಮಾರ್ಗದ ಪಕ್ಕದ ಸಾಲು ಸಾಲು ಜಲಪಾತಗಳು

ಈ ವರ್ಷ ಮುಂಗಾರು ಕೈಹಿಡಿದಿದೆ. ಆದರೆ ಕೊರೊನಾ ಕೈಕೊಟ್ಟಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್, ಶಿವಮೊಗ್ಗದ ಆಗುಂಬೆ, ಕೊಡಚಾದ್ರಿ, ಸಕಲೇಶಪುರ, ಮಡಿಕೇರಿ, ವಿರಾಜಪೇಟೆ, ಸುಬ್ರಹ್ಮಣ್ಯದ ಸುತ್ತ ಮುತ್ತದ  ಜಲಪಾತಗಳು ಜನರನ್ನು ಕೈಬೀಸಿ ಕರೆಯುತ್ತಿವೆ. ಆದರೆ ಪ್ರವಾಸಿಗರು ಮಾತ್ರ ಎಲ್ಲಿಗೂ ಹೋಗುವಂತಿಲ್ಲ. ಒಟ್ಟಿನಲ್ಲಿ ಸಾಂಕ್ರಾಮಿಕದಿಂದಾಗಿ ಈ ವರ್ಷ ಮಲೆನಾಡಿನಲ್ಲಿ ಮುಂಗಾರಿನ ಕಲರವವಿಲ್ಲ. ಪ್ರತಿವರ್ಷದಂತೆ ಮುಂಗಾರು ಈ ವರ್ಷವೂ ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಮೆರಗು ನೀಡಿದೆ. ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು ನಗರಗಳು ಪ್ರವಾಸಿಗರಿಲ್ಲದೇ ನೀರವ ಮೌನದಲ್ಲಿ ಮುಳುಗಿವೆ.


ಇದನ್ನೂ ಓದಿ : ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...