Homeಮುಖಪುಟತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

’ಆಗಮ ಶಾಸ್ತ್ರ, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿರುವ 36,000 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸದಾಗಿ ರಚನೆಯಾಗಿರುವ ಡಿಎಂಕೆ ಸರ್ಕಾರ ನೂರು ದಿನಗಳನನ್ನು ಪೂರೈಸುವ ಮೊದಲೇ ಅರ್ಹರನ್ನು ಅರ್ಚಕರಾಗಿ ನೇಮಿಸುವುದಾಗಿ ತಿಳಿಸಿದೆ.

ತಮಿಳುನಾಡಿನ ಸ್ಟಾಲಿನ ನೇತೃತ್ವದ ಡಿಎಂಕೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ರಾಜ್ಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಮುನ್ನಲೆಗೆ ಬರಲು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಬ್ರಾಹ್ಮಣ್ಯದ ವಿಚಾರ ವಿವಾದ ಮತ್ತು ದೂರಿಗೆ ಕಾರಣವಾಗಿರುವುದು.

ಆಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು ಘೋಷಿಸಿದ್ದರು. ಇದು ಪರ-ವಿರೋಧ ಚರ್ಚೆಗೆ ನಾಂದಿ ಹಾಡಿತ್ತು. ಈಗ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವ ಕ್ರಮ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ನಟ ಚೇತನ್ ಅವರ ಬ್ರಾಹ್ಮಣ್ಯದ ಹೇಳಿಕೆ ಕುರಿತು ಸಂಘಟನೆಗಳು ದೂರು ನೀಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನಟ ಚೇತನ್ ಪರ-ವಿರೋಧ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಜೊತೆಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ನಡುವಿನ ವ್ಯತ್ಯಾಸಗಳನ್ನು ಕುರಿತು ನೆಟ್ಟಿಗರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಂತಕ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ರಾಜ್ಯದಲ್ಲಿಯೂ ಇಂತಹ ದಿಟ್ಟ ನಿರ್ಧಾರ ಜಾರಿಯಾಗಲಿ ಎಂದಿದ್ದಾರೆ.

“ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ನಾರಾಯಣ ಗುರುಗಳನ್ನು ತಮ್ಮ ಗುರುಗಳೆಂದು ಒಪ್ಪಿಕೊಳ್ಳುವ ಬಿಲ್ಲವ ಸಮುದಾಯದ ನಾಯಕರೊಬ್ಬರು ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದಾರೆ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಈ ಅವಕಾಶವನ್ನು ಬಳಸಿಕೊಂಡು ನಾರಾಯಣ ಗುರುಗಳ ಆಶಯಕ್ಕೆ ಅನುಗುಣವಾಗಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಜಾತಿಭೇದವಿಲ್ಲದೆ ಅರ್ಚಕರನ್ನು ನೇಮಿಸುವ ದಿಟ್ಟ ನಿರ್ಧಾರವನ್ನು ಕೈಗೊಳ್ಳಬೇಕು” ಎಂದಿದ್ದಾರೆ.

“ಹಿಂದೂಗಳೆಲ್ಲ ಸೋದರರು ಎಂದು ಭಾವಿಸುವ ಆರ್‌ಎಸ್‌ಎಸ್‌ ಮತ್ತು ಅದರ ಪರಿವಾರ ಸಂಘಟನೆಗಳು ಹಾಗೂ ಬ್ರಾಹ್ಮಣರು ಬೇರೆ, ಜಾತಿಭೇದ, ಪುರೋಹಿತಷಾಹಿಯನ್ನು ಒಪ್ಪಿಕೊಳ್ಳುವ ಬ್ರಾಹ್ಮಣ್ಯ ಬೇರೆ ಎಂದು ವಾದಿಸುತ್ತಿರುವ ಬ್ರಾಹ್ಮಣರು ಮತ್ತು ಅವರ ಸಂಘಸಂಸ್ಥೆಗಳು ಕೂಡಾ ಇದನ್ನು ವಿರೋಧಿಸಲಿಕ್ಕಿಲ್ಲ ಎಂದು ನಂಬಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಲೇಖಕ ನಾಗೇಗೌಡ ಕೀಲಾರ ಅವರು ತಮಿಳುನಾಡಿನ ಸರ್ಕಾರದ ನಿರ್ಧಾರವನ್ನು, ’ಈ ಆಗಮ ಶಾಸ್ತ್ರದ ಟ್ರೈನಿಂಗ್, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಅರ್ಚಕ ವೃತ್ತಿ ಎನ್ನುವುದೇ ಇರಬಾರದು ಎನ್ನುವ ನಾಗೇಗೌಡ ಕೀಲಾರ ಅವರು, ’ ಅರ್ಚಕ ವೃತ್ತಿ ಅನ್ನುವುದೇ ಇರಬಾರದು. ಮೊದಲು ನಾವುಗಳು ನಮ್ಮ ದೇವಸ್ಥಾನಗಳ ಗರ್ಭಗುಡಿಯನ್ನು ಮಾರ್ಪಾಟು ಮಾಡಬೇಕು. ವಿಶಾಲವಾದ ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿ ಒಳ್ಳೆಯ ಗಾಳಿ ಬೆಳಕು ಇರಬೇಕು. ಜನರೇ ಸ್ವತಃ ಒಳಗೆ ಹೋಗಿ ಯಾರದೇ ನೆರವು ಇಲ್ಲದೆ ಒಂದೆರಡು ನಿಮಿಷ ಸ್ವತಃ ಪೂಜೆ ಮಾಡಿಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪೂಜಾ ಕೋಣೆಯ ಸುವ್ಯವಸ್ಥೆಯನ್ನು ಕಾಪಾಡಲು ಯಾರನ್ನಾದರೂ ಒಬ್ಬರನ್ನು ನೇಮಕ ಮಾಡಿದರೆ ಸಾಕು. ಈ ವ್ಯಕ್ತಿಗೆ ಸೆಕ್ಯುರಿಟಿ ಗಾರ್ಡ್ ಗೆ ಇರುವ ಕೌಶಲ್ಯ ಇದ್ದರೆ ಸಾಕೇ ಹೊರತು ಯಾವುದೇ ಆಗಮ ಶಾಸ್ತ್ರದ ಟ್ರೈನಿಂಗ್ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

’ಅಬ್ರಾಹ್ಮಣರು ಅರ್ಚಕರು ಆಗೋದು ನನ್ನ ಅಭಿಪ್ರಾಯದಲ್ಲಿ ಯಾವುದೇ ಸಾಮಾಜಿಕ ಮೇಲಿನ ಚಲನೆ ಅಲ್ಲವೇ ಅಲ್ಲ. ಇದು ಕೂಡ ಬ್ರಾಹ್ಮಣ್ಯದ ಮುಂದುವರಿಕೆಯೇ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಕೆಲವು ವರ್ಷಗಳ ಹಿಂದೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪರಿಶಿಷ್ಟಜಾತಿ-ಪಂಗಡದವರ ಜೊತೆಯಲ್ಲಿ ಮಹಿಳೆಯರನ್ನೂ ಅರ್ಚಕರನ್ನಾಗಿ ನೇಮಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಈಗ ತಮಿಳುನಾಡು ಸರ್ಕಾರದ ಕ್ರಮದಿಂದ ಪ್ರೇರಿತರಾಗಿ ರಾಜ್ಯದಲ್ಲಿಯೂ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡಲಿ ಎಂಬುದು ಸಾಮಾಜಿಕ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...