Homeಕರೋನಾ ತಲ್ಲಣಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

- Advertisement -
- Advertisement -

ಕರ್ನಾಟಕ, ಮಹರಾಷ್ಟ್ರ, ತಮಿಳುನಾಡು, ದೆಹಲಿ, ಪಂಜಾಬ್ ಸೇರಿದಂತೆ ದೇಶದ ಅನೇಕ ರಾಜ್ಯಗಳು ಎರಡನೇ ಹಂತದ ಅನ್‌ಲಾಕ್‌ ಪ್ರಕ್ರಿಯೆಯನ್ನು ಆರಂಭಿಸಿವೆ. ಕೊರೊನಾ ಲಾಕ್‌ಡೌನ್‌ನಿಂದ 2 ತಿಂಗಳುಗಳ ಕಾಲ ಬಂದಾಗಿದ್ದ ಅಂಗಡಿ ಮುಂಗಟ್ಟುಗಳು, ವ್ಯಾಪಾರೋದ್ಯಮ, ವಾಣಿಜ್ಯ ಚಟುವಟಿಕೆಗಳು ಮತ್ತೆ ಗರಿಗೆದರಲಾರಂಭಿಸಿವೆ.

ಬೆಂಗಳೂರು, ಮುಂಬೈ, ದೆಹಲಿಯಂತರ ಮಹಾನಗರಗಳಿಂದ ತಮ್ಮ ತಮ್ಮ ಊರಿಗೆ ತೆರಳಿದ್ದ ಜನರು ಮತ್ತೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಏಕಾಏಕಿ ನಗರಗಳನ್ನು ಪ್ರವೇಶಿಸುತ್ತಿದ್ದಾರೆ. ಮಾರುಕಟ್ಟೆಗಳು, ಬಸ್‌ ನಿಲ್ಧಾಣ, ರೈಲ್ವೆ ನಿಲ್ದಾಣಗಳು ಜನ ಜಂಗುಳಿಯಿಂದ ತುಂಬಿ ಹೋಗಿದ್ದು, ಅನ್‌ಲಾಕ್‌ ಪ್ರಕ್ರಿಯೆಯೇ ಕೊರೊನಾ ಮೂರನೇ ಅಲೆಗೆ ಆಹ್ವಾನ ನೀಡುತ್ತಿರುವಂತೆ ಭಾಸವಾಗುತ್ತಿದೆ ಎಂದಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಯಾವ ಹಂತದಲ್ಲಿ ಯಾವ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ತಜ್ಞರ ವರದಿಯನ್ನು ಪಾಲಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಅನ್‌ಲಾಕ್ ಪ್ರಕ್ರಿಯೆಯಿಂದ ನಗರಗಳಲ್ಲಿ ಉಂಟಾಗುತ್ತಿರುವ ಜನ ದಟ್ಟಣೆಯನ್ನುತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌, ಸ್ಯಾನಿಟೈಜರ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ ಎಂದಿರುವ ಕೇಂದ್ರ ಸರ್ಕಾರ ಅವಸರದ ಅನ್‌ಲಾಕ್ ಬೇಡ ಎಂಬ ಸಲಹೆಯನ್ನು ನೀಡಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ರಾಜ್ಯಗಳು 5 ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್‌ಗಳಾದ (CAB)  ಟೆಸ್ಟಿಂಗ್, ಟ್ರ್ಯಾಕಿಂಗ್, ಟ್ರೀಟ್‌ಮೆಂಟ್, ವ್ಯಾಕ್ಸಿನೇಶನ್, ಪ್ರಿವೆನ್ಶನ್‌ಗಳನ್ನು ತಪ್ಪದೇ ಪಾಲಿಸಬೇಕು. ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಚುರುಕು ನೀಡಬೇಕು. ಎಲ್ಲ ರೀತಿಯ ಅಗತ್ಯ ಸುರಕ್ಷಾಕ್ರಮಗಳನ್ನು ಕೈಗೊಂಡು ಹಂತ ಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಅನ್‌ಲಾಕ್ ಪ್ರಕ್ರಿಯೆಗಳ ನಡುವೆಯೇ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ , ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಮಾರ್ಗಸೂಚಿಯನ್ನು ನೀಡಿದೆ.

ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕ ರಂದೀಪ್ ಗುಲೇರಿಯಾ, ಭಾರತದಲ್ಲಿ ಇನ್ನು 6 ರಿಂದ 8 ವಾರಗಳಲ್ಲಿ ಕೊರೊನಾ ಮೂರನೇ ಅಲೆಯು ದೇಶದಲ್ಲಿ ಅಪ್ಪಳಿಸಲಿದೆ. ಒಂದು ವೇಳೆ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಮೂರನೇ ಅಲೆಯು ಎರಡನೇ ಅಲೆಗಿಂತ ತೀವ್ರವಾಗಿರಲಿದೆ. ಮುಂದಿನ ಮೂರು ತಿಂಗಳು ಕೋವಿಡ್ ಸುರಕ್ಷತಾ ಕ್ರಮಗಳ ಪಾಲನೆ ಮತ್ತು ಜನದಟ್ಟಣೆ ನಿಯಂತ್ರಣ ಅತ್ಯಂತ ಅಗತ್ಯವಾಗಿದೆ ಎಂದು ರಾಜ್ಯಗಳಿಗೆ ಎಚ್ಚರಿಸಿದ್ದಾರೆ.

ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ತೀವ್ರ ವೇಗವನ್ನು ನೀಡುವಂತೆ ಸೂಚಿಸಿದ್ದಾರೆ. ಕೊರೊನಾ ವಿರುದ್ಧ ದೇಶವು ಒಟ್ಟಾಗಿ ಹೋರಾಡುವ ಸಂದರ್ಭದಲ್ಲಿ ಇದ್ದೇವೆ. ವ್ಯಾಕ್ಸೀನ್ ಸೇರಿದಂತೆ ಎಲ್ಲಾ ವಿಚಾರಗಳಲ್ಲಿ ರಾಜ್ಯ ರಾಜ್ಯಗಳು ಸಮನ್ವಯವನ್ನು ಸಾಧಿಸಿ ಜನಸಾಮಾನ್ಯರ ಆರೋಗ್ಯದ ಕಾಳಜಿ ಮಾಡಬೇಕು ಕೇಂದ್ರ ಸೂಚಿಸಿದೆ.


ಇದನ್ನೂ ಓದಿ : ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...