Homeಕರೋನಾ ತಲ್ಲಣಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

- Advertisement -
- Advertisement -

ಕರ್ನಾಟಕ, ಮಹರಾಷ್ಟ್ರ, ತಮಿಳುನಾಡು, ದೆಹಲಿ, ಪಂಜಾಬ್ ಸೇರಿದಂತೆ ದೇಶದ ಅನೇಕ ರಾಜ್ಯಗಳು ಎರಡನೇ ಹಂತದ ಅನ್‌ಲಾಕ್‌ ಪ್ರಕ್ರಿಯೆಯನ್ನು ಆರಂಭಿಸಿವೆ. ಕೊರೊನಾ ಲಾಕ್‌ಡೌನ್‌ನಿಂದ 2 ತಿಂಗಳುಗಳ ಕಾಲ ಬಂದಾಗಿದ್ದ ಅಂಗಡಿ ಮುಂಗಟ್ಟುಗಳು, ವ್ಯಾಪಾರೋದ್ಯಮ, ವಾಣಿಜ್ಯ ಚಟುವಟಿಕೆಗಳು ಮತ್ತೆ ಗರಿಗೆದರಲಾರಂಭಿಸಿವೆ.

ಬೆಂಗಳೂರು, ಮುಂಬೈ, ದೆಹಲಿಯಂತರ ಮಹಾನಗರಗಳಿಂದ ತಮ್ಮ ತಮ್ಮ ಊರಿಗೆ ತೆರಳಿದ್ದ ಜನರು ಮತ್ತೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಏಕಾಏಕಿ ನಗರಗಳನ್ನು ಪ್ರವೇಶಿಸುತ್ತಿದ್ದಾರೆ. ಮಾರುಕಟ್ಟೆಗಳು, ಬಸ್‌ ನಿಲ್ಧಾಣ, ರೈಲ್ವೆ ನಿಲ್ದಾಣಗಳು ಜನ ಜಂಗುಳಿಯಿಂದ ತುಂಬಿ ಹೋಗಿದ್ದು, ಅನ್‌ಲಾಕ್‌ ಪ್ರಕ್ರಿಯೆಯೇ ಕೊರೊನಾ ಮೂರನೇ ಅಲೆಗೆ ಆಹ್ವಾನ ನೀಡುತ್ತಿರುವಂತೆ ಭಾಸವಾಗುತ್ತಿದೆ ಎಂದಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಯಾವ ಹಂತದಲ್ಲಿ ಯಾವ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು ಎಂದು ತಜ್ಞರ ವರದಿಯನ್ನು ಪಾಲಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಅನ್‌ಲಾಕ್ ಪ್ರಕ್ರಿಯೆಯಿಂದ ನಗರಗಳಲ್ಲಿ ಉಂಟಾಗುತ್ತಿರುವ ಜನ ದಟ್ಟಣೆಯನ್ನುತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌, ಸ್ಯಾನಿಟೈಜರ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ ಎಂದಿರುವ ಕೇಂದ್ರ ಸರ್ಕಾರ ಅವಸರದ ಅನ್‌ಲಾಕ್ ಬೇಡ ಎಂಬ ಸಲಹೆಯನ್ನು ನೀಡಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ರಾಜ್ಯಗಳು 5 ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್‌ಗಳಾದ (CAB)  ಟೆಸ್ಟಿಂಗ್, ಟ್ರ್ಯಾಕಿಂಗ್, ಟ್ರೀಟ್‌ಮೆಂಟ್, ವ್ಯಾಕ್ಸಿನೇಶನ್, ಪ್ರಿವೆನ್ಶನ್‌ಗಳನ್ನು ತಪ್ಪದೇ ಪಾಲಿಸಬೇಕು. ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಚುರುಕು ನೀಡಬೇಕು. ಎಲ್ಲ ರೀತಿಯ ಅಗತ್ಯ ಸುರಕ್ಷಾಕ್ರಮಗಳನ್ನು ಕೈಗೊಂಡು ಹಂತ ಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಅನ್‌ಲಾಕ್ ಪ್ರಕ್ರಿಯೆಗಳ ನಡುವೆಯೇ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ , ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಮಾರ್ಗಸೂಚಿಯನ್ನು ನೀಡಿದೆ.

ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕ ರಂದೀಪ್ ಗುಲೇರಿಯಾ, ಭಾರತದಲ್ಲಿ ಇನ್ನು 6 ರಿಂದ 8 ವಾರಗಳಲ್ಲಿ ಕೊರೊನಾ ಮೂರನೇ ಅಲೆಯು ದೇಶದಲ್ಲಿ ಅಪ್ಪಳಿಸಲಿದೆ. ಒಂದು ವೇಳೆ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಮೂರನೇ ಅಲೆಯು ಎರಡನೇ ಅಲೆಗಿಂತ ತೀವ್ರವಾಗಿರಲಿದೆ. ಮುಂದಿನ ಮೂರು ತಿಂಗಳು ಕೋವಿಡ್ ಸುರಕ್ಷತಾ ಕ್ರಮಗಳ ಪಾಲನೆ ಮತ್ತು ಜನದಟ್ಟಣೆ ನಿಯಂತ್ರಣ ಅತ್ಯಂತ ಅಗತ್ಯವಾಗಿದೆ ಎಂದು ರಾಜ್ಯಗಳಿಗೆ ಎಚ್ಚರಿಸಿದ್ದಾರೆ.

ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ತೀವ್ರ ವೇಗವನ್ನು ನೀಡುವಂತೆ ಸೂಚಿಸಿದ್ದಾರೆ. ಕೊರೊನಾ ವಿರುದ್ಧ ದೇಶವು ಒಟ್ಟಾಗಿ ಹೋರಾಡುವ ಸಂದರ್ಭದಲ್ಲಿ ಇದ್ದೇವೆ. ವ್ಯಾಕ್ಸೀನ್ ಸೇರಿದಂತೆ ಎಲ್ಲಾ ವಿಚಾರಗಳಲ್ಲಿ ರಾಜ್ಯ ರಾಜ್ಯಗಳು ಸಮನ್ವಯವನ್ನು ಸಾಧಿಸಿ ಜನಸಾಮಾನ್ಯರ ಆರೋಗ್ಯದ ಕಾಳಜಿ ಮಾಡಬೇಕು ಕೇಂದ್ರ ಸೂಚಿಸಿದೆ.


ಇದನ್ನೂ ಓದಿ : ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...