Homeಮುಖಪುಟಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

- Advertisement -
- Advertisement -

ತಮಿಳುನಾಡಿನ ಎಐಡಿಂಕೆ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದ ಎಂ.ಮಣಿಕಂಠನ್, ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಭಾನುವಾರ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಭಾನುವಾರ ಬೆಳಗ್ಗೆ ಬೆಂಗಳೂರು ನಗರದಲ್ಲಿ ಚೆನ್ನೈನ ವಿಶೇಷ  ಪೊಲೀಸರ ತಂಡ ಮಣಿಕಂಠನ್ ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದುಕೊಂಡು ಹೋಗಿದೆ.

ಇಂಡೊ-ಮಲೇ‍ಷಿಯಾ ಮೂಲದ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ, ಗರ್ಭಪಾತ ಮಾಡಿಸಿದ ಮತ್ತು ಬೆದರಿಕೆ ಒಡ್ಡಿದ ಕೃತ್ಯಗಳಲ್ಲಿ ತೊಡಗಿದ ಆರೋಪವನ್ನು ಮಾಜಿ ಸಚಿವ ಮಣಿಕಂಠನ್ ಎದುರಿಸುತ್ತಿದ್ದಾರೆ.

ಮದ್ರಾಸ್ ಹೈಕೋರ್ಟ್‌ನಲ್ಲಿ  ತಮ್ಮ ಬಂಧನಕ್ಕೆ ತಡಕೋರಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮದ್ರಾಸ್ ಹೈಕೋರ್ಟ್ ಮಣಿಕಂಠನ್ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿ ಜೂನ್ 9 ರ ವರೆಗೆ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಮಣಿಕಂಠನ್ ತಮಿಳುನಾಡನ್ನು ತೊರೆದು ತಲೆಮರೆಸಿಕೊಂಡಿದ್ದರು. ಬೆಂಗಳೂರಿನಲ್ಲಿ ಮಣಿಕಂಠನ್ ಅಡಗಿರುವ ನಿಖರ ಮಾಹಿತಿಯನ್ನು ಪಡೆದ ಪೊಲೀಸರು ಇಂದು ಮುಂಜಾನೆ ಅವರನ್ನು ಬಂಧಿಸಿ ತಮಿಳುನಾಡಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ: ಆಯಿಷಾ ಸುಲ್ತಾನಾ

ಕಳೆದ ತಿಂಗಳು ಮಲೇಷಿಯಾ ಮೂಲದ ಮಹಿಳೆ ಆಡ್ಯಾರ್ ಆಲ್ ವಿಮೆನ್ ಪೊಲೀಸ್ ಠಾಣೆಯಲ್ಲಿ ಮಣಿಕಂದನ್ ಅವರ ವಿರುದ್ಧ ಮೋಸ, ಅತ್ಯಾಚಾರ, ಗರ್ಭಪಾತದ ಆರೋಪದಲ್ಲಿ ದೂರು ದಾಖಲಿಸಿದ್ದರು.  ಆಡ್ಯಾರ್ ಪೊಲೀಸರು ಮಣಿಕಂಠನ್ ವಿರುದ್ಧ IPC ಸೆಕ್ಷನ್ 376 ( ಅತ್ಯಾಚಾರ) ,ಸೆಕ್ಷನ್ 313 (ಗರ್ಭಪಾತ), ಸೆಕ್ಷನ್ 323 ( ಸ್ವಯಂ ಪ್ರೇರಿತ ಹಲ್ಲೆ), ಸೆಕ್ಷನ್ 417(ಮೋಸ), ಸೆಕ್ಷನ್ 506(i)(ಅಪರಾಧಿಕ ಕೃತ್ಯಕ್ಕೆ ಕುಮ್ಮಕ್ಕು) IT ಕಾಯ್ದೆ ಸೇರಿ ಹಲವು ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ಮಣಿಕಂದನ್ ಕಳೆದ ನಾಲ್ಕು ವರ್ಷಗಳಿಂದ ತಮ್ಮ ಜೊತೆ ಲಿವ್‌ ಇನ್ ಸಂಬಂಧದಲ್ಲಿ ಇದ್ದಾರೆ. 3 ಸಾರಿ ಬಲವಂತದಿಂದ ಗರ್ಭಪಾತವನ್ನು ಮಾಡಿಸಿದ್ದಾರೆ. ಈಗ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ.

2017 ರಲ್ಲಿ ಮಣಿಕಂಠನ್ ತಮಿಳು ನಾಡಿನ IT  ಇಲಾಖೆಯ ಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ಇಂಡೋ-ಮಲೇಷಿಯನ್ ನಟಿಯ ಪರಿಚಯವಾಗಿದೆ. ಹಾಗೇ ಪರಿಚಯ ಸ್ನೇಹಕ್ಕೆ ತಿರುಗಿ, ಮದುವೆಯಾಗುವ ಆಮಿಷವೊಡ್ಡಿ ಮಹಿಳೆಗೆ ಗರ್ಭಪಾತವನ್ನು ಮಾಡಿಸಿದ್ದಾರೆ. ವಿವಾಹಿತ ವ್ಯಕ್ತಿಯಾಗಿದ್ದರೂ ತನ್ನನ್ನು ಮದುವೆಯಾಗುವುದಾಗಿ ತಮಿಳು ನಾಡಿನ ಮಾಜಿ ಮಂತ್ರಿ ನಂಬಿಸಿದ್ದರು. ಈಗ ಅವರು ಮಲೇಷಿಯಾಗೆ ಮರಳು, ಇಲ್ಲವಾದರೆ ನಿನ್ನ ಕುಟಂಬಕ್ಕೆ ತೊಂದರೆ ಕೊಡುವುದಾಗಿ ಬೆದರಿಸಿದ್ದಾರೆ. ಹಾಗೆ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಎಲ್ಲಾ ಆರೋಪಗಳನ್ನು ಎಂ.ಮಣಿಕಂಠನ್ ನಿರಾಕರಿಸಿದ್ದು, ಆರೋಪಗಳು ನಿರಾಧಾರವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....