Homeಕರ್ನಾಟಕರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದ (ಜೂನ್ 21) ಅನ್‌ಲಾಕ್‌ 2.0  ಜಾರಿಯಾಗುತ್ತಿದ್ದು, ಬಿಎಂಟಿಸಿ, ಕೆಸ್‌ಆರ್‌ಟಿಸಿ, ನಮ್ಮ ಮೆಟ್ರೋ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ.

ಮೊದಲ ಹಂತದಲ್ಲಿ ಸರ್ಕಾರಿ ಸಾರಿಗೆಗೆ ಅನುಮತಿ ನೀಡದ ಸರ್ಕಾರ ಅನ್‌ಲಾಕ್‌ ಎರಡನೇ  ಹಂತದಲ್ಲಿ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ  ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಬಿಎಂಟಿಸಿಯಲ್ಲಿ 6,400 ಬಸ್ಸುಗಳಿವೆ. ಅನ್‌ಲಾಕ್‌ ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್ಸುಗಳು ರಸ್ತೆಗಿಳಿಯಲಿದೆ.  ಡ್ರೈವರ್, ಕಂಡಕ್ಟರ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು. 2 ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ಅವಕಾಶ ನೀಡಬಹುದು. ಇನ್ನೂ ಬಸ್ ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಮವಾರದಿಂದ ನಮ್ಮ ಮೆಟ್ರೋ ಕೂಡ ಸೇವೆ ಆರಂಭಿಸಲಿದೆ. ಬಸ್‌ಗಳಂತೆಯೇ ಅರ್ಧದಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಡ್ ಬಳಸಿ ಮೆಟ್ರೋ ಸೇವೆ ಪಡೆಯಬಹುದು.

ಇದನ್ನೂ ಓದಿ: ಎಚ್. ಎಸ್. ದೊರೆಸ್ವಾಮಿ ಸದಾ ಜಾಗೃತವಾಗಿರುತ್ತಿದ್ದ ಪ್ರಜ್ಞೆ: ಡಾ. ಎ ಎಸ್ ಪ್ರಭಾಕರ್

ಕೆಎಸ್ಆರ್​ಟಿಸಿ ಯಲ್ಲಿ 8 ಸಾವಿರ ಬಸ್ಸುಗಳಿವೆ. ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳು ಮಾತ್ರ ರಸ್ತೆಗಿಳಿಸಲು ಅನುಮತಿ ‌‌ನೀಡಲು ನಿರ್ಧಾರ ಮಾಡಲಾಗಿದ್ದು, ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ. ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್ ಓಡಾಟ ನಡೆಸಲ್ಲ ಎನ್ನುವ ಮಾಹಿತಿ ಇದೆ. ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ತೀರಾ ಕಡಿಮೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದ್ದು, ಮೂರು ಸೀಟ್ನಲ್ಲಿ ಇಬ್ಬರು ಹಾಗೂ ಎರಡು ಸೀಟ್ನಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ನೀಡಲಾಗಿದೆ. ನಾನ್‌ ಎಸಿ, ಹವಾ ನಿಯಂತ್ರಣ ಇಲ್ಲದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಮಾಡಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಇರುತ್ತದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಅನ್‌ಲಾಕ್‌ ಸಡಿಲಿಕೆಗಳನ್ನು ನೀಡಲಾಗಿದೆ.

ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ ಎಂದು ಅನ್​ಲಾಕ್ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅನ್​ಲಾಕ್​ ಕುರಿತು ಮಾತನಾಡಿರುವ ಬಿ.ಎಸ್.ಯಡಿಯೂರಪ್ಪ, ಸಾಮಾನ್ಯ ಜನರಿಗೆ ಸಂಕಷ್ಟದ ಸ್ಥಿತಿ ಇದೆ. ಹೀಗಾಗಿ ವಿನಾಯಿತಿ ನೀಡಲಾಗಿದೆ, ಜನರು ಕೂಡ ಸೋಂಕು ಕಡಿಮೆಯಾಗಿದೆ ಎಂದು ಮೈ ಮರೆಯದೇ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಈ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿವೆ ಎಂದಿದ್ದಾರೆ.


ಇದನ್ನೂ ಓದಿ: ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...