Homeಕರೋನಾ ತಲ್ಲಣಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

ಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಮೃತಪಟ್ಟ ಎಲ್ಲರಿಗೂ 4 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗದು ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್​ಗೆ ಭಾನುವಾರ ಅಫಿಡವಿಟ್​ ಸಲ್ಲಿಸಿದೆ. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ತೆರಿಗೆ ಆದಾಯ ಕಡಿಮೆಯಾಗಿದೆ. ಜೊತೆಗೆ ಆರೋಗ್ಯ ವೆಚ್ಚಗಳ ಹೆಚ್ಚಳದಿಂದಾಗಿ ರಾಜ್ಯಗಳು ಮತ್ತು ಕೇಂದ್ರದ ಹಣಕಾಸು ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ ಎಂದು ಮಾಹಿತಿ ನೀಡಿದೆ.

“ಎಲ್ಲರಿಗೂ ಪರಿಹಾರ ನೀಡಿದರೆ, ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡಿದಂತಾಗುತ್ತದೆ ಮತ್ತು ಕೊರೊನಾ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್​ಗೆ ಭಾನುವಾರ ಅಫಿಡವಿಟ್​ ಸಲ್ಲಿಸಿದೆ.

ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 12 ಅನ್ನು ಉಲ್ಲೇಖಿಸಿ ಇದರ ಅಡಿಯಲ್ಲಿ  ವಿಪತ್ತು ಪೀಡಿತ ವ್ಯಕ್ತಿಗಳಿಗೆ ಕನಿಷ್ಟ ಪರಿಹಾರ ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿತ್ತು. ಅದರಂತೆ ಒಕ್ಕೂಟ ಸರ್ಕಾರ ಹರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

“ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ರಾಜ್ಯ ಹಾಗೂ ಕೇಂದ್ರದ ತೆರಿಗೆ ಆದಾಯ ಕಡಿಮೆಯಾಗಿದೆ. ಇದೇ ಸಂದರ್ಭದಲ್ಲಿ ಆರೋಗ್ಯ ವೆಚ್ಚಗಳು ಅಧಿಕವಾಗಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರದ ಹಣಕಾಸು ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ. ಈಗಾಗಲೇ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ 12 ಅಧಿಸೂಚನೆಗಳಿಗೆ ಮಾಜಿ ಗ್ರೇಟಿಯಾ ಪರಿಹಾರವನ್ನು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ಮೂಲಕ ರಾಜ್ಯ ಸರ್ಕಾರಗಳಿಗೆ ಒದಗಿಸಲಾಗಿದೆ. 2021-22ರ ವಾರ್ಷಿಕ ಹಂಚಿಕೆ ಎಸ್‌ಡಿಆರ್‌ಎಫ್, ಎಲ್ಲಾ ರಾಜ್ಯಗಳಿಗೆ ಸೇರಿ 22,184 ಕೋಟಿ ರೂ ನೀಡಲಾಗಿದೆ” ಎಂದಿದೆ.

“ಇಂತಹ ಸಂದರ್ಭದಲ್ಲಿ ಕೊರೊನಾ ಮುಂದಿನ ಅಲೆಗಳು ಉಂಟು ಮಾಡಬಹುದಾದ ಅನಾಹುತಗಳನ್ನು ಎದುರಿಸುವುದು ಕಷ್ಟವಾಗಲಿದೆ. ಸರ್ಕಾರಗಳ ಖಜಾನೆ ಖಾಲಿಯಾದರೆ ಆರ್ಥಿಕತೆಯೂ ಮತ್ತಷ್ಟು ಕುಸಿಯಲಿದೆ. ಸರ್ಕಾರಗಳ ಸಂಪನ್ಮೂಲಗಳಿಗೆ ಮಿತಿಗಳಿವೆ ಮತ್ತು ಎಕ್ಸ್-ಗ್ರೇಟಿಯಾ ಮೂಲಕ ಯಾವುದೇ ಹೆಚ್ಚುವರಿ ಹೊರೆ ಇತರ ಆರೋಗ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಲಭ್ಯವಿರುವ ಹಣವನ್ನು ಕಡಿಮೆ ಮಾಡುತ್ತದೆ” ಎಂದು ಅಫಿಡವಿಟ್​ನಲ್ಲಿ ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಪ್ರವಾಹ, ಭೂಕಂಪ, ಚಂಡಮಾರುತ ಇತ್ಯಾದಿಗಳಿಗಿಂತ ಭಿನ್ನವಾಗಿ, ತಡೆಗಟ್ಟುವಿಕೆ, ಪರೀಕ್ಷೆ, ಚಿಕಿತ್ಸೆ, ಸಂಪರ್ಕತಡೆ, ಆಸ್ಪತ್ರೆಗೆ ಸೇರಿಸುವುದು, ಔಷಧಿಗಳು ಮತ್ತು ವ್ಯಾಕ್ಸಿನೇಷನ್ ಇತ್ಯಾದಿಗಳಿಗಾಗಿ ಕೇಂದ್ರ ಮತ್ತು ರಾಜ್ಯಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿವೆ. ಅದು ಇನ್ನೂ ಮುಂದುವರೆದಿದೆ. ಅಲ್ಲದೆ ಇನ್ನೂ ಎಷ್ಟು ಹಣ ಬೇಕು ಎಂದು ತಿಳಿದಿಲ್ಲ. ಹೀಗಾಗಿ, ಕೊರೊನಾ ಭವಿಷ್ಯದ ಅಲೆಗಳನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ” ಎಂದು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...