Homeಚಳವಳಿಹಿರಿಯ ಕೈದಿಗಳ ಬಿಡುಗಡೆಗಾಗಿ ಹೋರಾಟಗಾರ್ತಿ‌ ಮೇಧಾ ಪಾಟ್ಕರ್‌‌ ಅರ್ಜಿ

ಹಿರಿಯ ಕೈದಿಗಳ ಬಿಡುಗಡೆಗಾಗಿ ಹೋರಾಟಗಾರ್ತಿ‌ ಮೇಧಾ ಪಾಟ್ಕರ್‌‌ ಅರ್ಜಿ

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 70 ವರ್ಷ ವಯಸ್ಸಿನ ಕೈದಿಗಳನ್ನು ಬಿಡುಗಡೆ ಮಾಡಲು ಏಕರೂಪದ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪಾಟ್ಕರ್‌‌ ಪರವಾಗಿ ವಕೀಲ ಎಸ್‌.ಬಿ ತಾಲೇಕರ್ ಸಲ್ಲಿಸಿದ ಅರ್ಜಿಯಲ್ಲಿ, ಕೈದಿಗಳ ವರ್ಗೀಕರಣ ಮತ್ತು ಅವರ ಬಿಡುಗಡೆಯ ವಿಷಯ ಹೆಚ್ಚಾಗಿ ಸಾಮಾಜಿಕ ಪರಿಸ್ಥಿತಿಗಳು ಮತ್ತು ಆಡಳಿತಾತ್ಮಕ ಅನುಕೂಲತೆಯನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ.

ಪಾಟ್ಕರ್ ತಮ್ಮ ಮನವಿಯಲ್ಲಿ ವೃದ್ಧಾಪ್ಯ ಮತ್ತು ವೈರಸ್‌ಗೆ ತುತ್ತಾಗುವ ಸಾಧ್ಯತೆ ಹೇಗೆ ಒಂದು ಪ್ರಮುಖ ಅಂಶವಾಗಿರಬೇಕು ಎಂದು ಉಲ್ಲೇಖಿಸಿದ್ದಾರೆ. ವಯಸ್ಸಾದ ಕೈದಿಗಳು ಹೆಚ್ಚು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ವಿಶೇಷವಾಗಿ 70 ವರ್ಷ ಮೇಲ್ಪಟ್ಟವರಿಗೆ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚಿವೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಅರ್ಜಿಯಲ್ಲಿ, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶದಂತಹ ರಾಜ್ಯಗಳ ಉದಾಹರಣೆಗಳನ್ನು ನೀಡಲಾಗಿದೆ. ಈ ರಾಜ್ಯಗಳು, ಮೇ 8ರಂದು ಸುಪ್ರೀಂಕೋರ್ಟ್‌ ನೀಡಿದ ಆದೇಶದ ಪ್ರಕಾರ ವೃದ್ಧಾಪ್ಯದಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ದೊರೆಸ್ವಾಮಿಯವರಿಗೆ ಸಂತಾಪಸೂಚಕ ನಿರ್ಣಯ ಮಂಡಿಸುವ ಅರ್ಹತೆ ಉಳಿಸಿಕೊಂಡಿದೆಯೇ?

“ಎಚ್‌ಪಿಸಿಯ (ಉನ್ನತಾಧಿಕಾರ ಸಮಿತಿಗಳು) ವಿಭಿನ್ನ ವಿಧಾನಗಳಿಂದ  ವಿಭಿನ್ನ ರಾಜ್ಯಗಳಲ್ಲಿ ಏಕರೂಪತೆಯಿಲ್ಲ. ವೃದ್ಧರನ್ನು ಹೊಂದಿರುವ ಕಾರಾಗೃಹಗಳಲ್ಲಿ ದಟ್ಟಣೆಯನ್ನು ಕಡಿಮೆ  ಮಾಡಲು ರಾಜ್ಯಗಳು ಯಾವುದೇ ಏಕರೂಪದ ಮಾನದಂಡಗಳನ್ನು ಹೊಂದಿಲ್ಲ” ಎಂದು ಪಾಟ್ಕರ್ ತಮ್ಮ ಅರ್ಜಿಯಲ್ಲಿ ವಿವರಿಸಿದ್ದಾರೆ.

ಮೇ 8, 2021ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ಕಳೆದ ವರ್ಷ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಾಪಿಸಿದ ಉನ್ನತಾಧಿಕಾರ ಸಮಿತಿಗಳು ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವುದನ್ನು ಪರಿಗಣಿಸಬೇಕು ಎಂದು ಆದೇಶಿಸಿತ್ತು. ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಸಮಯದಲ್ಲಿ ಜೈಲುಗಳಲ್ಲಿನ ಜನದಟ್ಟಣೆಯನ್ನು ಈ ಪೀಠ ಪರಿಶೀಲನೆ ಮಾಡಿತ್ತು.

ಇದಾದ ನಂತರವೂ ಉನ್ನತಾಧಿಕಾರ ಸಮಿತಿಗಳು  ಈ ವಿಷಯವನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ, ಕೈದಿಗಳನ್ನು ಸೋಂಕಿಗೆ ಒಳಪಡಿಸುವ ಆಧಾರದ ಮೇಲೆ ವರ್ಗೀಕರಿಸುವ ಕೆಲಸ ಮಾಡಿಲ್ಲ. ಜೈಲುಗಳಂತಹ ಪರಿಸರದಲ್ಲಿ ಕೊರೋನಾ ಸೋಂಕಿಗೆ ಹೆಚ್ಚು ಗುರಿಯಾಗಬಹುದಾದ ಕೈದಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಮೇಧಾ ಪಾಟ್ಕರ್‌‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...