Homeಚಳವಳಿಹಿರಿಯ ಕೈದಿಗಳ ಬಿಡುಗಡೆಗಾಗಿ ಹೋರಾಟಗಾರ್ತಿ‌ ಮೇಧಾ ಪಾಟ್ಕರ್‌‌ ಅರ್ಜಿ

ಹಿರಿಯ ಕೈದಿಗಳ ಬಿಡುಗಡೆಗಾಗಿ ಹೋರಾಟಗಾರ್ತಿ‌ ಮೇಧಾ ಪಾಟ್ಕರ್‌‌ ಅರ್ಜಿ

- Advertisement -
- Advertisement -

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 70 ವರ್ಷ ವಯಸ್ಸಿನ ಕೈದಿಗಳನ್ನು ಬಿಡುಗಡೆ ಮಾಡಲು ಏಕರೂಪದ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪಾಟ್ಕರ್‌‌ ಪರವಾಗಿ ವಕೀಲ ಎಸ್‌.ಬಿ ತಾಲೇಕರ್ ಸಲ್ಲಿಸಿದ ಅರ್ಜಿಯಲ್ಲಿ, ಕೈದಿಗಳ ವರ್ಗೀಕರಣ ಮತ್ತು ಅವರ ಬಿಡುಗಡೆಯ ವಿಷಯ ಹೆಚ್ಚಾಗಿ ಸಾಮಾಜಿಕ ಪರಿಸ್ಥಿತಿಗಳು ಮತ್ತು ಆಡಳಿತಾತ್ಮಕ ಅನುಕೂಲತೆಯನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ.

ಪಾಟ್ಕರ್ ತಮ್ಮ ಮನವಿಯಲ್ಲಿ ವೃದ್ಧಾಪ್ಯ ಮತ್ತು ವೈರಸ್‌ಗೆ ತುತ್ತಾಗುವ ಸಾಧ್ಯತೆ ಹೇಗೆ ಒಂದು ಪ್ರಮುಖ ಅಂಶವಾಗಿರಬೇಕು ಎಂದು ಉಲ್ಲೇಖಿಸಿದ್ದಾರೆ. ವಯಸ್ಸಾದ ಕೈದಿಗಳು ಹೆಚ್ಚು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ವಿಶೇಷವಾಗಿ 70 ವರ್ಷ ಮೇಲ್ಪಟ್ಟವರಿಗೆ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚಿವೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಅರ್ಜಿಯಲ್ಲಿ, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶದಂತಹ ರಾಜ್ಯಗಳ ಉದಾಹರಣೆಗಳನ್ನು ನೀಡಲಾಗಿದೆ. ಈ ರಾಜ್ಯಗಳು, ಮೇ 8ರಂದು ಸುಪ್ರೀಂಕೋರ್ಟ್‌ ನೀಡಿದ ಆದೇಶದ ಪ್ರಕಾರ ವೃದ್ಧಾಪ್ಯದಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ದೊರೆಸ್ವಾಮಿಯವರಿಗೆ ಸಂತಾಪಸೂಚಕ ನಿರ್ಣಯ ಮಂಡಿಸುವ ಅರ್ಹತೆ ಉಳಿಸಿಕೊಂಡಿದೆಯೇ?

“ಎಚ್‌ಪಿಸಿಯ (ಉನ್ನತಾಧಿಕಾರ ಸಮಿತಿಗಳು) ವಿಭಿನ್ನ ವಿಧಾನಗಳಿಂದ  ವಿಭಿನ್ನ ರಾಜ್ಯಗಳಲ್ಲಿ ಏಕರೂಪತೆಯಿಲ್ಲ. ವೃದ್ಧರನ್ನು ಹೊಂದಿರುವ ಕಾರಾಗೃಹಗಳಲ್ಲಿ ದಟ್ಟಣೆಯನ್ನು ಕಡಿಮೆ  ಮಾಡಲು ರಾಜ್ಯಗಳು ಯಾವುದೇ ಏಕರೂಪದ ಮಾನದಂಡಗಳನ್ನು ಹೊಂದಿಲ್ಲ” ಎಂದು ಪಾಟ್ಕರ್ ತಮ್ಮ ಅರ್ಜಿಯಲ್ಲಿ ವಿವರಿಸಿದ್ದಾರೆ.

ಮೇ 8, 2021ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ಕಳೆದ ವರ್ಷ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಾಪಿಸಿದ ಉನ್ನತಾಧಿಕಾರ ಸಮಿತಿಗಳು ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವುದನ್ನು ಪರಿಗಣಿಸಬೇಕು ಎಂದು ಆದೇಶಿಸಿತ್ತು. ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಸಮಯದಲ್ಲಿ ಜೈಲುಗಳಲ್ಲಿನ ಜನದಟ್ಟಣೆಯನ್ನು ಈ ಪೀಠ ಪರಿಶೀಲನೆ ಮಾಡಿತ್ತು.

ಇದಾದ ನಂತರವೂ ಉನ್ನತಾಧಿಕಾರ ಸಮಿತಿಗಳು  ಈ ವಿಷಯವನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ, ಕೈದಿಗಳನ್ನು ಸೋಂಕಿಗೆ ಒಳಪಡಿಸುವ ಆಧಾರದ ಮೇಲೆ ವರ್ಗೀಕರಿಸುವ ಕೆಲಸ ಮಾಡಿಲ್ಲ. ಜೈಲುಗಳಂತಹ ಪರಿಸರದಲ್ಲಿ ಕೊರೋನಾ ಸೋಂಕಿಗೆ ಹೆಚ್ಚು ಗುರಿಯಾಗಬಹುದಾದ ಕೈದಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಮೇಧಾ ಪಾಟ್ಕರ್‌‌ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...