Homeಅಂತರಾಷ್ಟ್ರೀಯನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಅಂತರಾಷ್ಟ್ರೀಯ ಯೋಗದಿನ ಆಚರಣೆ

- Advertisement -
- Advertisement -

ಇಂದು ಅಂತರಾಷ್ಟ್ರೀಯ ಯೋಗದಿನ. ಭಾರತದ ಮೂಲೆ ಮೂಲೆಯಲ್ಲದೇ ಜಗತ್ತಿನ ವಿವಿಧ ದೇಶಗಳಲ್ಲೂ ಯೋಗದಿನವನ್ನು ಆಚರಿಸಲಾಗುತ್ತಿದೆ. ಜಾತಿ, ಮತ, ಭಾಷೆ, ಧರ್ಮಗಳ ಎಲ್ಲೆಗಳನ್ನು ಮೀರಿ ಯೋಗ ಜಗತ್ತನ್ನು ಬೆಸೆಯುತ್ತಿದ್ದು ದೈಹಿಕ ಮತ್ತು ಮಾನಸಿಕ ಆರೊಗ್ಯದ ಜಾಗೃತಿಗೆ ಯೋಗದ ಮೂಲಕ ಕರೆಕೊಡಲಾಗುತ್ತಿದೆ. ಅಮೆರಿಕಾದ ನ್ಯೂಯಾರ್ಕ್‌ ನಗರದ ಪ್ರಸಿದ್ಧ ಟೈಮ್‌ ಸ್ಕ್ವೈರ್‌ನಲ್ಲಿ ಸುಮಾರು 3,000 ಜನರು ಯೋಗವನ್ನು ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗದಿನದ ಆಚರಿಸಿದ್ದಾರೆ.

ಅಮೇರಿಕಾದಲ್ಲಿರುವ ಭಾರತದ ರಾಯಭಾರಿ ಕಚೇರಿಯು ನ್ಯೂಯಾರ್ಕ್ ಟೈಮ್‌ ಸ್ಕ್ವೈರ್ ಅಲೈನ್ಸ್ ಜೊತೆ ಸೆರಿ ಈ ಸಾಮೂಹಿಕ ಯೋಗದಿನದ ಆಚರಣೆಯನ್ನು ಆಯೋಜಿಸಿದೆ.

“ಯೋಗ ಭಾರತದಲ್ಲಿ ಹುಟ್ಟಿ ಇಂದು ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಪಸರಿಸಿದೆ. ಸಾವಿರಾರು ಜನರು ಯೋಗದ ಕಲಿಕೆಗಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಇರುವಲ್ಲಿಯೇ ಯೊಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡುವ ನೈಸರ್ಗಿಕ ವಿಧಾನವಾದ ಯೋಗವನ್ನು ಜಗತ್ತಿನ ಎಲ್ಲರು ರೂಢಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಮೆರಿಕಾದ ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಯೋಗದಿನವನ್ನು ಆಯೊಜಿಸಲು ಹರ್ಷವಾಗುತ್ತಿದೆ. ಯೋಗ ಒಂದು ಜೀವನಶೈಲಿಯಾಗಿ ನಮ್ಮದಾಗಬೇಕು. ಇಂದು ಬಹುಮುಖ್ಯವಾಗಿ ಯೋಗದ ಮೂಲ ಸ್ವರೂಪವನ್ನು ಉಳಿಸಿಕೊಂಡು ಅತ್ಯಂತ ಸಹಜವಾಗಿ ಯೋಗವನ್ನು ಅಭ್ಯಾಸ ಮಾಡುವ ಅಗತ್ಯವಿದೆ. ಸಮಾಜದ ಸ್ವಾಸ್ಥ್ಯ ಮತ್ತು ಹಸಿರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯೊಗವನ್ನು ಉಳಿಸಬೇಕು ಮತ್ತು ಬೆಳೆಸಬೇಕು” ಎಂದು ಭಾರತದ ಮುಖ್ಯ ರಾಯಭಾರಿ ರಂಧೀರ್ ಜೈಸ್ವಾಲ್ ತಿಳಿಸಿದ್ದಾರೆ.

“ಯೋಗ ಪ್ರಾಣಾಯಾಮ ಮತ್ತು ಆಯುರ್ವೇದದ ಮಹತ್ವವನ್ನು ನ್ಯೂಯಾರ್ಕ್‌ನ ಟೈಮ್‌ ಸ್ಕ್ವೈರ್‌ನಲ್ಲಿ ಸಾರಲು ಅತ್ಯಂತ ಸಂತೋಷವಾಗುತ್ತದೆ. ನಗರದ ಗದ್ದಲಗಳು ಎಂದಿಗೂ ನಿಲ್ಲುವುದಿಲ್ಲ. ನಡುವೆ ನಮ್ಮ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದೆ” ಎಂದು ಟೈಮ್‌ ಸ್ಕ್ವೈರ್‌ನ ಯೋಗ ದಿನದ ಅಚರಣೆಯಲ್ಲಿ ಭಾಗವಹಿಸಿದ್ದ ರುಚಿಕಾ ಲಾಲ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಸಂಸ್ಥೆಯು ಯೋಗಾ ಫಾರ್ ವೆಲ್‌ನೆಸ್‌ ಎಂಬ ಧ್ಯೇಯವಾಕ್ಯವನ್ನು ಈ ವರ್ಷದ ಯೋಗದಿನದ ಆಚರಣೆಯ ಸಂದರ್ಭದಲ್ಲಿ ನೀಡಿದ್ದು ಟೈಮ್‌ ಸ್ಕ್ವ್ಯಾರ್‌ನ ಕಾರ್ಯಕ್ರಮದಲ್ಲಿ ಭಾರತದ ಯೋಗ, ಪ್ರಣಾಯಾಮ, ಆಯುರ್ವೇದ ಮತ್ತು ಭಾರತದ ಬುಡಕಟ್ಟುಗಳಲ್ಲಿರುವ  ಗಿಡಮೂಲಿಕೆ ಔಷಧಗಳ ಮಹತ್ವವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಕೂಡ ನಡೆದಿದೆ.


ಇದನ್ನೂ ಓದಿ : ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...