Homeಮುಖಪುಟ’ಬಂಗಾರದ ಮನುಷ್ಯ'ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

’ಬಂಗಾರದ ಮನುಷ್ಯ’ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

- Advertisement -
- Advertisement -

ಕನ್ನಡ ಚಿತ್ರರಂಗದ ಬೆಳವಣಿಗೆಯ ಹಾದಿಯಲ್ಲಿ ಕೆ.ಸಿ.ಎನ್ ಕುಟುಂಬದ ಹೆಜ್ಜೆ ಗುರುತುಗಳು ದಟ್ಟವಾಗಿ ಕಾಣಿಸುತ್ತವೆ. ಚಿತ್ರನಿರ್ಮಾಣ, ಹಣಕಾಸಿನ ನೆರವು, ವಿತರಣೆ ಜೊತೆ ಪ್ರದರ್ಶಕರಾಗಿ ಸಿನಿಮಾರಂಗದೊಂದಿಗೆ ಈ ಕುಟುಂಬದ್ದು ಸುಮಾರು ಆರೇಳು ದಶಕಗಳ ಒಡನಾಟ. ಸರ್ವಮಂಗಳ, ಕಸ್ತೂರಿ ನಿವಾಸ, ಶರಪಂಜರ, ಬೆಳ್ಳಿಮೋಡ, ಬಬ್ರುವಾಹನ, ಹುಲಿಯ ಹಾಲಿನ ಮೇವು, ಬಂಗಾರದ ಮನುಷ್ಯ, ರಂಗನಾಯಕಿ, ಸತ್ಯ ಹರಿಶ್ಚಂದ್ರ, ದೂರದ ಬೆಟ್ಟ, ಅಂತ, ಮುತ್ತಿನಹಾರ-ಹೀಗೆ ಮೈಲುಗಲ್ಲಾದ ಕನ್ನಡ ಚಿತ್ರಗಳ ನಿರ್ಮಾಣ, ಫೈನಾನ್ಸ್, ವಿತರಣೆಯೊಂದಿಗೆ ಸದಭಿರುಚಿಯ ಸಿನಿಮಾಗಳ ಹರಿವಿಗೆ ತಮ್ಮದೇ ಆದ ಕೊಡುಗೆ ನೀಡಿದೆ ಕೆಸಿಎನ್ ಮೂವೀಸ್. ಪ್ರಮುಖವಾಗಿ ಕನ್ನಡ ಚಿತ್ರಗಳನ್ನು ನಿರ್ಮಿಸಿದ ಕುಟುಂಬ ಹಿಂದಿ, ತೆಲುಗು, ತಮಿಳು, ಬೆಂಗಾಲಿ ಭಾಷೆಗಳಲ್ಲೂ ಸಿನಿಮಾಗಳನ್ನು ತಯಾರಿಸಿದ್ದಾರೆ.

ತಂದೆ ಕೆ.ಸಿ.ಎನ್.ಗೌಡರು ಹಾಕಿಕೊಟ್ಟ ಭದ್ರ ಅಡಿಪಾಯದಲ್ಲಿ ಪುತ್ರ ಕೆ.ಸಿ.ಎನ್.ಚಂದ್ರಶೇಖರ್ ಉತ್ತಮ ಸಿನಿಮಾ ಬೆಳೆ ತೆಗೆದರು. ಈ ಕುಟುಂಬದ ಬಗ್ಗೆ ಬರೆಯುವಾಗ ಕೆ.ಸಿ.ಎನ್.ಗೌಡರ ಕುರಿತು ಮೊದಲು ಹೇಳಬೇಕು. ದೊಡ್ಡಬಳ್ಳಾಪುರ ತಾಲೂಕಿನ ಕೊನೇನಹಳ್ಳಿ ಕೆ.ಸಿ.ಎನ್.ಗೌಡರ ಹುಟ್ಟೂರು. ಮೂಲತಃ ರೇಷ್ಮೆ ಉದ್ದಿಮೆದಾರರು. ಅವರ ಸಿನಿಮಾ ನಂಟು ಶುರುವಾಗಿದ್ದು 1963ರಲ್ಲಿ. ರಾಜಾಜಿನಗರದ ’ನವರಂಗ್’ ಚಿತ್ರಮಂದಿರದ ನಿವೇಶನ ಹರಾಜಾದಾಗ ಅದನ್ನು ಕೊಂಡು ಅಲ್ಲಿ ಸುಂದರ ಚಿತ್ರಮಂದಿರ ನಿರ್ಮಿಸಿದರು.

ಅಲ್ಲಿಂದ ಶುರುವಾದ ಗೌಡರ ಸಿನಿಮಾಸಕ್ತಿ ಕ್ರಮೇಣ ಚಿತ್ರವಿತರಣೆಯತ್ತ ಹೊರಳಿತು. ಅಷ್ಟರಲ್ಲಿ ಅವರಿಗೆ ಸಿನಿಮಾರಂಗದ ಒಳಹೊರಗುಗಳ ಪರಿಚಯವಾಗಿತ್ತು. ಭಾವಮೈದುನ ಎಚ್.ಎನ್.ಮುದ್ದುಕೃಷ್ಣ ಅವರೊಂದಿಗೆ ಸೇರಿ ’ಪಾರಿಜಾತ ಫಿಲಂಸ್’ ಸ್ಥಾಪಿಸಿ ಹಂಚಿಕೆ ಆರಂಭಿಸಿದರು. ಹಂಚಿಕೆ ಮಾಡಿದ ಮೊದಲ ಚಿತ್ರ ’ಬೆಳ್ಳಿಮೋಡ’ದಲ್ಲೇ ಅವರು ಯಶಸ್ಸು ಕಂಡರು. ಮುಂದೆ ಸಹೋದರ ಮೂರ್ತಿ ಅವರೊಡಗೂಡಿ ’ಕೆ.ಸಿ.ಎನ್. ಮೂವೀಸ್’ ಸ್ಥಾಪಿಸಿದರು. ಈ ಹೊಸ ಸಂಸ್ಥೆಯ ಮೂಲಕ ಗೌಡರು ವಿತರಿಸಿದ ಮೊದಲ ಸಿನಿಮಾ ’ಸರ್ವಮಂಗಳ’. ಮುಂದೆ ಚಿತ್ರ ನಿರ್ಮಾಣಕ್ಕಿಳಿದು ’ಭಲೇ ಜೋಡಿ’ ನಿರ್ಮಿಸಿ ಯಶಸ್ಸು ಗಳಿಸಿದರು. ’ಶರಪಂಜರ’ ಚಿತ್ರಕ್ಕೆ ಆಗಿನ ಕಾಲಕ್ಕೆ ಬಹುದೊಡ್ಡ ಮೊತ್ತವೆನಿಸಿದ 10 ಲಕ್ಷ ರೂಪಾಯಿ ತೊಡಗಿಸಿ ಗಾಂಧಿನಗರದ ಗಮನ ಸೆಳೆದಿದ್ದರು.

ಕನ್ನಡದ ಮಹೋನ್ನತ ಚಿತ್ರಗಳಲ್ಲೊಂದಾದ ’ಬಂಗಾರದ ಮನುಷ್ಯ ಸಿನಿಮಾಗೆ ಹಣಕಾಸಿನ ನೆರವು ಒದಗಿಸಿದ್ದೇ ಗೌಡರು. ಮುಂದಿನ ದಿನಗಳಲ್ಲಿ ಅವರ ಸಂಸ್ಥೆಯಡಿ ತಯಾರಾದ ’ಬಬ್ರುವಾಹನ’, ’ಹುಲಿಯ ಹಾಲಿನ ಮೇವು’ ಚಿತ್ರಗಳೂ ದೊಡ್ಡ ಯಶಸ್ಸು ಕಂಡದ್ದಲ್ಲದೆ, ಇತರೆ ನಿರ್ಮಾಪಕರಿಗೂ ಇಂತಹ ಚಿತ್ರನಿರ್ಮಾಣಕ್ಕೆ ಸ್ಫೂರ್ತಿಯಾದವು. ಈ ವೇಳೆಗಾಗಲೇ ಅವರ ಹಿರಿಯ ಪುತ್ರ ಕೆ.ಸಿ.ಎನ್.ಚಂದ್ರು ಸಿನಿಮಾ ವ್ಯವಹಾರದಲ್ಲಿ ತಂದೆಗೆ ಬೆನ್ನೆಲುಬಾಗಿ ನಿಂತಿದ್ದರು. ಇದು ಗೌಡರಿಗೆ ಹೆಚ್ಚಿನ ಬಲ ತಂದಿತ್ತು. ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಕುಮಾರ್ ಅಭಿನಯದ ’ಸತ್ಯ ಹರಿಶ್ಚಂದ್ರ’ ಚಿತ್ರವನ್ನು ಬಣ್ಣದಲ್ಲಿ ತೆರೆಗೆ ತಂದದ್ದರಲ್ಲಿ ಕೆ.ಸಿ.ಎನ್.ಚಂದ್ರಶೇಖರ್ ಅವರ ಒತ್ತಾಸೆಯೂ ಇತ್ತು.

ಬಿಕಾಂ ಪದವೀಧರರಾದ ಕೆ.ಸಿ.ಎನ್.ಚಂದ್ರಶೇಖರ್ ತಂದೆಯವರ ಸಿನಿಮಾ ವ್ಯವಹಾರವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದರು. ಸಹೋದರ ಮೋಹನ್ ಅವರೊಡಗೂಡಿ ಚಿತ್ರನಿರ್ಮಾಣ, ವಿತರಣೆಯಲ್ಲಿ ಗಂಭೀರವಾಗಿ ತೊಡಗಿಸಿಕೊಂಡರು. ಉದ್ಯಮದಲ್ಲಿ ತಂದೆಯವರಿಗಿದ್ದ ಒಳ್ಳೆಯ ಹೆಸರು ಅವರಿಗೆ ವರವಾಯ್ತು. ಕೆ.ಸಿ.ಎನ್. ಸಂಸ್ಥೆಯನ್ನು ಕನ್ನಡ ಚಿತ್ರರಂಗದ ಪ್ರಾತಿನಿಧಿಕ ಸಂಸ್ಥೆಯಂತೆ ಬೆಳೆಸಿದ್ದರಲ್ಲಿ ಚಂದ್ರಶೇಖರ್ ಅವರ ಚತುರತೆ ಇದೆ. ರಾಜಕುಮಾರ್ ಅಭಿನಯದ ’ದಾರಿ ತಪ್ಪಿದ ಮಗ’ ಚಿತ್ರದ ಸಹನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸಿದ ಚಂದ್ರಶೇಖರ್ ಮುಂದೆ ’ಜಯಸಿಂಹ’, ’ನಮ್ಮೂರ ರಾಜ’, ’ಇಂದಿನ ಭಾರತ’ ಮತ್ತಿತರ ಕನ್ನಡ ಚಿತ್ರಗಳು ಸೇರಿದಂತೆ ’ಮುಖ್ಯಮಂತ್ರಿ, ’ಸಂಚಲನಂ’ (ತೆಲುಗು), ’ಮೇರಿ ಅದಾಲತ್’ (ಹಿಂದಿ) ಇತರೆ ಭಾಷೆಗಳಲ್ಲೂ ಸಿನಿಮಾಗಳನ್ನು ನಿರ್ಮಿಸಿ ಯಶಸ್ಸು ಕಂಡರು. ಚಂದ್ರಶೇಖರ್ ಅವರ ಪತ್ನಿ ಮಹಾಲಕ್ಷ್ಮಿ. ಕಾವ್ಯ, ಸ್ಫೂರ್ತಿ, ಶ್ರೇಯಸ್ ಮೂವರು ಮಕ್ಕಳು.

ಚಿತ್ರ ಕೃಪೆ: ಪ್ರಗತಿ ಅಶ್ವಥ್‍ನಾರಾಯಣ್

ಕೆ.ಸಿ.ಎನ್.ಚಂದ್ರಶೇಖರ್ ಅವರು ಭಾರತೀಯ ಫಿಲಂ ಫೆಡರೇಷನ್ ಸದಸ್ಯರಾಗಿ, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಕನ್ನಡ ಚಿತ್ರನಿರ್ಮಾಪಕರ ಸಂಘದ ಉಪಾಧ್ಯಕ್ಷರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಚಲನಚಿತ್ರೋದ್ಯಮ ಸಹಕಾರ ಸಂಘದ ಅಧ್ಯಕ್ಷರು, ಚಲನಚಿತ್ರ ಸೆನ್ಸಾರ್ ಮಂಡಳಿಯ ಸದಸ್ಯರಾಗಿ ಕೂಡ ತೊಡಗಿಸಿಕೊಂಡಿದ್ದವರು. ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಮಂಡಳಿ ವತಿಯಿಂದ ಸಾಹಿತ್ಯ ಕಮ್ಮಟವನ್ನು ಏರ್ಪಡಿಸಿ ಭಾರತೀಯ ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಸಾಹಿತಿಗಳನ್ನು ಕರೆಸಿ ಹೊಸ ಪೀಳಿಗೆಗೆ ಚಿತ್ರಕಥೆ, ಸಂಭಾಷಣೆ ರಚನೆಗೆ ನೆರವಾಗುವಂತಹ ಯೋಜನೆಯನ್ನು ಕಾರ್ಯರೂಪಕ್ಕೆ ತಂದವರು. ಕನ್ನಡ ಚಲನಚಿತ್ರ ಇತಿಹಾಸ ಸಂಪುಟಗಳ ರಚನೆಗೆ ಪ್ರೇರಕ ಶಕ್ತಿಯಾಗಿದ್ದರು. ಪರಭಾಷಾ ಚಿತ್ರಗಳ ಹಾವಳಿ, ರೀಮೇಕ್ ಪಿಡುಗು, ತೆರಿಗೆ ವಿನಾಯ್ತಿ, ಸಬ್ಸಿಡಿ ಮೊದಲಾದ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು ಚಂದ್ರು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗದ ಅಂದು ಮತ್ತು ಇಂದಿನ ದಿನಗಳನ್ನು ಬೆಸೆದ ಕೊಂಡಿಯೊಂದು ಕಳಚಿದಂತಾಗಿದೆ.

ಹೊಸತನದ ಹುಡುಕಾಟ

ಚಂದ್ರಶೇಖರ್ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದಾಗ ’ಚಿತ್ರಕಥಾ ಶಿಬಿರ’ ಆಯೋಜಿಸಿದ್ದರು. ಆಗ ನಾನು ಅವರೊಂದಿಗೆ ಒಂದು ತಿಂಗಳು ಇರಬೇಕಾಗಿ ಬಂತು. ಆಗ ಅವರು ಯುವಸಾಹಿತಿಗಳನ್ನು ಕರೆಸೋಣ ಅಂತ ಹೇಳಿದ್ರು. ಮುಂಬಯಿಯಲ್ಲಿದ್ದ ಜಯಂತ ಕಾಯ್ಕಿಣಿ ಅವರಿಗೆ ಕನ್ನಡ ಚಿತ್ರರಂಗದ ಸಂಪರ್ಕ ಬರಬೇಕೆಂದರೆ ಈ ಚಿತ್ರಕಥಾ ಶಿಬಿರ ಮತ್ತು ಕೆ.ಸಿ.ಎನ್.ಚಂದ್ರು ಕಾರಣ.

ಯಾವ ಕೆಲಸವನ್ನು ಅಕಾಡೆಮಿ ಮಾಡಬೇಕಾಗಿತ್ತೋ, ಚಂದ್ರಶೇಖರ್ ಅಧ್ಯಕ್ಷರಾಗಿದ್ದಾಗ ಛೇಂಬರ್ ಮೂಲಕ ಆ ಕೆಲಸ ಮಾಡಿಸ್ತಾ ಇದ್ರು. ಕನ್ನಡ ಸಾಹಿತ್ಯದಲ್ಲಿ ಒಳ್ಳೆಯ ಕೃತಿಗಳು ಯಾವುವು? ಅದರಲ್ಲೂ ಸಿನಿಮಾಗೆ ಹೊಂದುವ ಕೃತಿಗಳು ಯಾವುವು ಎನ್ನುವುದನ್ನು ಚರ್ಚಿಸ್ತಾ ಇದ್ರು, ಓದ್ತಾ ಇದ್ರು. ಅದು ಯಶಸ್ವಿಯಾಗುತ್ತದೆಯೇ ಅಂತ ವಾಣಿಜ್ಯ ಕಾರಣಕ್ಕೆ ಹುಡುಕ್ತಾ ಇದ್ದುದಲ್ಲ ಅದು. ಕತೆಯಲ್ಲಿ ಹೊಸತನ ಇದೆಯೇ? ಚಿತ್ರರಂಗಕ್ಕೆ ಇದು ಹೊಸತನ ಕೊಡುತ್ತಾ ಅನ್ನೋ ಕಾರಣಕ್ಕೆ ಹುಡುಕ್ತಾ ಇದ್ರು. ಹಾಗಾಗಿ ಚಿತ್ರರಂಗಕ್ಕೆ ಚಂದ್ರು ಅವರ ಕಾಣ್ಕೆ ಹೇಳುವಾಗ ಇವನ್ನೆಲ್ಲಾ ಹೇಳಬೇಕಾಗುತ್ತೆ. ಚಿತ್ರರಂಗಕ್ಕೆ ಹೊಸತನ ತರುವ ದೃಷ್ಟಿಯಿಂದ ಅವರು ಸದಾ ಹುಡುಕಾಟ ನಡೆಸ್ತಾ ಇದ್ರು.

ಗಿರೀಶ್ ಕಾಸರವಳ್ಳಿ, ಚಿತ್ರನಿರ್ದೇಶಕ

ಸ್ನೇಹಜೀವಿ, ಸಂಯಮಿ

ಚಂದ್ರು ಬಿಕಾಂ ಪದವಿಯ ಕೊನೆಯ ವರ್ಷದಲ್ಲಿ ಓದುತ್ತಿದ್ದಾಗಲೇ ನನಗೆ ಪರಿಚಯವಾಗಿದ್ದರು. ಆಗೊಮ್ಮೆ ಬೆಂಗಳೂರು ಮಲ್ಲೇಶ್ವರದ ರತನ್ ಮಹಲ್ ಹೋಟೆಲ್‌ನಲ್ಲಿ ಅವರನ್ನು ಭೇಟಿ ಮಾಡಿದ್ದ ನೆನಪು. ಮುಂದೆ ಚಂದ್ರು ’ದೂರದ ಬೆಟ್ಟ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಚಾಮುಂಡೇಶ್ವರಿ ಸ್ಟುಡಿಯೋಗೆ ಬರುತ್ತಿದ್ದರು. ನಾನಾಗ ಛಾಯಾಗ್ರಾಹಕ ಡಿ.ವಿ.ರಾಜಾರಾಂ ಅವರಿಗೆ ಸಹಾಯಕನಾಗಿದ್ದೆ. ವಿಕ್ರಂ ಶ್ರೀನಿವಾಸ್ ನಿರ್ಮಾಣದ ಈ ಚಿತ್ರಕ್ಕೆ ಕೆ.ಸಿ.ಎನ್.ಗೌಡ್ರು ಫೈನಾನ್ಸ್ ಮಾಡಿದ್ದರು. ಆಗೆಲ್ಲಾ ಗೌಡರು ಹಣಕಾಸಿನ ವ್ಯವಹಾರ ನೋಡಿಕೊಳ್ಳಲು ತಮ್ಮ ಪುತ್ರ ಚಂದ್ರುರನ್ನು ಕಳುಹಿಸುತ್ತಿದ್ದರು. ಆಗ ಚಂದ್ರು ಅವರೊಂದಿಗೆ ಹೆಚ್ಚಿನ ಒಡನಾಟ ಸಾಧ್ಯವಾಯ್ತು.

ಕನ್ನಡ ಚಿತ್ರರಂಗದಲ್ಲಿ ಏನೆಲ್ಲಾ ಹೊಸ ಪ್ರಯೋಗ ನಡೆಸಬಹುದು, ಸಾಧ್ಯತೆಗಳೇನು ಎಂದೆಲ್ಲಾ ನಮ್ಮೊಂದಿಗೆ ಚರ್ಚಿಸುತ್ತಿದ್ದರು. ಚಂದ್ರು ಮೆದುಮಾತಿನ ವ್ಯಕ್ತಿ, ಸಂಯಮಿ. ದೇಶದ ವಿವಿಧೆಡೆ ನಡೆಯುವ ಚಿತ್ರೋತ್ಸವಗಳ ಕುರಿತಂತೆ ಅವರಲ್ಲಿ ಸಾಕಷ್ಟು ಮಾಹಿತಿ ಇರುತ್ತಿತ್ತು. ಹಣಕಾಸಿನ ಸಮಸ್ಯೆಯಿಂದಾಗಿ ಸ್ಥಗಿತಗೊಂಡಿದ್ದ ಹತ್ತಾರು ಚಿತ್ರಗಳಿಗೆ ಅವರು ಹಣಕಾಸಿನ ನೆರವು ನೀಡಿದ್ದಾರೆ. ಆ ಚಿತ್ರಗಳು ದೊಡ್ಡ ಯಶಸ್ಸು ಕಂಡಿರುವುದಲ್ಲದೆ ಮೈಲುಗಲ್ಲಾಗಿವೆ. ಸಿನಿಮಾಗಳಲ್ಲಿ ನಟಿಯರನ್ನು ಸರಿಯಾಗಿ ನಡೆಸಿಕೊಳ್ಳದ ಸಮಯದಲ್ಲೆಲ್ಲಾ ಅವರು ನಿರ್ದೇಶಕರನ್ನು ಎಚ್ಚರಿಸುತ್ತಿದ್ದರು. ಅದು ಅವರ ಸದಭಿರುಚಿ.

ಬಿ.ಎಸ್.ಬಸವರಾಜು, ಸಿನಿಮಾ ಛಾಯಾಗ್ರಾಹಕ

ಶಶಿಧರ ಚಿತ್ರದುರ್ಗ

ಶಶಿಧರ ಚಿತ್ರದುರ್ಗ
ಹಿರಿಯ ಸಿನಿಮಾ ಪತ್ರಕರ್ತ, ಚಿತ್ರಪಥ.ಕಾಂ ಸಂಪಾದಕ. ಸಿನಿಮಾ ಇತಿಹಾಸ ದಾಖಲಿಸುವ ಬಗ್ಗೆ ಅತೀವ ಆಸಕ್ತಿ. ಚಿತ್ರಪಥ, ಬಂಗಾರದ ಮನುಷ್ಯ ಸಿದ್ದಲಿಂಗಯ್ಯ ಸೇರಿದಂತೆ ಹಲವು ಸಿನಿಮಾ ಕೃತಿಗಳನ್ನು ಪ್ರಕಟಿಸಿದ್ದಾರೆ.


ಇದನ್ನೂ ಓದಿ: ಪಿಕೆ ಟಾಕೀಸ್: ಭವಿಷ್ಯ, ಆಯ್ಕೆ, ಸ್ವಇಚ್ಛೆ ಮತ್ತು ದೇವರ ಕಲ್ಪನೆಗಳ ಸುತ್ತ ಸುತ್ತುವ ಜಾಕೊರ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...