Homeಕರ್ನಾಟಕಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

- Advertisement -
- Advertisement -

ಕೊರೊನಾ ಸಂಕಷ್ಟದಲ್ಲಿ ಖಾಸಗಿ ಶಾಲೆಗಳ ಶುಲ್ಕ ವಿಚಾರ ಕೂಡ ಆಡಳಿತ ಮಂಡಳಿ ಮತ್ತು ಪೋಷಕರ ನಡುವಿನ ಸಂಘರ್ಷಕ್ಕೆ ಕಾರಣವಾಗಿತ್ತು. ಭಾನುವಾರ ಸಭೆ ನಡೆಸಿರುವ ಕರ್ನಾಟಕ ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಪ್ರಸಕ್ತ ವರ್ಷದ ಶಾಲಾ ಶುಲಕ್ವನ್ನು ಹೆಚ್ಚಿಸುವುದಿಲ್ಲ. ಸರ್ಕಾರ ಶುಲ್ಕ ನಿಗದಿಪಡಿಸಿದರೆ ಆದೇಶ ಪಾಲಿಸುತ್ತವೆ ಎಂದು ಹೇಳಿದೆ.

ಭಾನುವಾರ ನಡೆದ ವರ್ಚವಲ್ ಸಭೆಯಲ್ಲಿ ರುಪ್ಸಾ ಕರ್ನಾಟಕ ಸೇರಿದಂತೆ 12 ಸಂಘಟನೆಗಳು ಭಾಗವಹಿಸಿದ್ದವು. ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಪ್ರಸಕ್ತ ವರ್ಷದಲ್ಲಿ ಶುಲ್ಕ ಹೆಚ್ಚಿಸುವುದಿಲ್ಲ. ಎರಡು ವರ್ಷಗಳ ಹಿಂದಿನ ಶುಲ್ಕವನ್ನೇ ಪಡೆಯುತ್ತೇವೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದು ಭೌತಿಕ ತರಗತಿಗಳು ಆರಂಭವಾದರೇ ಪೂರ್ಣ ಶುಲ್ಕ ಪಡೆಯುತ್ತೇವೆ. ಆನ್‌ಲೈನ್ ತರಗತಿಗಳಿಗೆ ಸರ್ಕಾರ ಶುಲ್ಕ ನಿಗದಿ ಪಡಿಸಿದರೇ ಅದನ್ನೇ ಪಡೆಯುತ್ತೇವೆ ಎಂದಿದ್ದಾರೆ.

’ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಕರ್ನಾಟಕ ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಡಿಯಲ್ಲಿ ಬರುವ 12 ಸಂಘಟನೆಗಳು ಒಪ್ಪಿಗೆ ನೀಡಿವೆ. ನಮ್ಮ ಒಕ್ಕೂಟದ ಅಡಿಯಲ್ಲಿ 10 ಸಾವಿರ ಶಾಲೆಗಳಿವೆ’ ಎಂದು ತಿಳಿಸಿದ್ದಾರೆ.

ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತಗೊಳಿಸಿದರೂ ಇನ್ನೂ 70% ಶುಲ್ಕ ಕಟ್ಟದ ಪೋಷಕರು ಶುಲ್ಕ ಕಟ್ಟುವಂತೆ ಸರ್ಕಾರ ಮನವೊಲಿಸಬೇಕು. ಬಾಕಿ ವಸೂಲಿಗೆ ಸರ್ಕಾರ ಅಂತ್ಯ ಹಾಡಬೇಕು. ಶಾಲೆಗಳು ಪಡೆದಿರುವ ಸಾಲದ ಬಡ್ಡಿ ಮನ್ನ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದರು.


ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...