HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...