HomeUncategorizedದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

ದೆಹಲಿ ಗಲಭೆ ಪ್ರಕರಣ: CAA ವಿರೋಧಿ ಹೋರಾಟಗಾರರ ಬಿಡುಗಡೆಯ ನಿರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆಗೋಡೆ

- Advertisement -
- Advertisement -

ಜೂನ್ 8 ರಂದು ದೆಹಲಿ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು. ದೆಹಲಿ ಗಲಭೆ ಪ್ರಕರಣದಲ್ಲಿ UAPA ಕಾಯ್ದೆಯಡಿ ಬಂಧಿತರಾಗಿದ್ದ ದೇವಾಂಗನಾ ಕಾಳಿತ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತಾನ್ಹಾ  ಈ ಮೂವರು CAA ವಿರೋಧಿ ಹೊರಾಟಗಾರರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ದೇಶಾದ್ಯಂತ UAPA ಕಾಯ್ದೆಯ ಕುರಿತು ಹೊಸ ಚರ್ಚೆಯನ್ನು ಹುಟ್ಟುಹಾಕಿತ್ತು.  ಹಾಗೆಯೇ UAPA ಅಂತಹ ಕಾನೂನುಗಳ ಬಳಕೆಯ ಸಂದರ್ಭದಲ್ಲಿ ಅನುಸರಿಸಬೇಕಾದ ವಿವೇಚನೆಗಳು ಮತ್ತು ಅಗತ್ಯ ಸಂದರ್ಭಗಳನ್ನು ದೆಹಲಿ ಹೈಕೋರ್ಟ್ ಇದೇ ಸಂದರ್ಭದಲ್ಲಿ ವಿಮರ್ಶಿಸಿತ್ತು.

ಮೂವರು ಹೋರಾಟಗಾರರ ವಿರುದ್ಧ ಪ್ರೊಸಿಕ್ಯೂಶನ್ ಯಾವುದೇ ಬಲವಾದ ಸಾಕ್ಷಿಗಳನ್ನು ಪ್ರಸ್ತುಪಡಿಸಿಲ್ಲ. ವಿಡಿಯೋ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳೂ ಕೂಡ ಆರೊಪವನ್ನು ಸಾಬೀತುಪಡಿಸುತ್ತಿಲ್ಲ. ಮೇಲ್ನೋಟದಲ್ಲಿಯೇ 3 ಜನ ಆರೊಪಿಗಳ ವಿರುದ್ಧ ಪೊಲೀಸರ ಬಳಿ ಯಾವುದೇ ಸಾಕ್ಷಿ ಇಲ್ಲವೆಂಬುದು ಕಂಡು ಬಂದಿದೆ ಎಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ಅಭಿಪ್ರಾಯ ಪಟ್ಟಿತ್ತು. ಇದು CAA ವಿರೋಧಿ ಹೋರಾಟಗಳಲ್ಲಿ ಭಾಗವಹಿಸಿ ಬಂಧಿತರಾಗಿರುವ ಇತರ ಆರೊಪಿಗಳಲ್ಲಿ ಸಣ್ಣದಾದ ಹೊಸ ಬದುಕಿನ ನಿರೀಕ್ಷೆಯನ್ನು ಹುಟ್ಟಿಹಾಕಿತ್ತು. ಆದರೆ ಈ ನಿರೀಕ್ಷೆ ಬಹಳದಿನ ಉಳಿದಿಲ್ಲ. ಸುಪ್ರೀಂ ಕೋರ್ಟ್ ದೆಹಲಿ ಗಲಭೆ ಆರೋಪದಲ್ಲಿ ಬಂಧಿತರಾಗಿರುವ ಇತರ ಆರೊಪಿಗಳ ಬಿಡುಗಡೆಯ ನಿರೀಕ್ಷೆಯ ಮೆಲೆ ಒಂದು ಅನಿರ್ದಿಷ್ಟತೆಯ ಕಾರ್ಮೋಡ ಕವಿಯುವಂತೆ ಮಾಡಿದೆ.

ದೆಹಲಿ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ದೆಹಲಿ ಪೊಲೀಸರು ತಡಮಾಡದೇ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು. ಜೂನ್ 18 ರಂದು ದೆಹಲಿ ಪೊಲೀಸರು ಸಲ್ಲಿಸಿದ ಮೆಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಆದೇಶದ ಕುರಿತು ತೀವ್ರ ಅಸಮಾಧಾನವನ್ನು ಹೊರಹಾಕಿದೆ. 3 ಅರೋಪಿಗಳಿಗೆ ದೆಹಲಿ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತಾದರೂ ಇತ್ತೀಚೆಗೆ ಹೈಕೋರ್ಟ್‌ಗಳು ಜುಡಿಶಿಯಲ್ ಆಕ್ಟಿವಿಸಮ್‌ ಗೆ ಇಳಿದಿವೆ. ದೇಶದ ಕಾನೂನುಗಳನ್ನೇ ಬದಲಿಸುವ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ಈ ಪ್ರಕರಣದಲ್ಲಿ 100 ಪುಟಗಳ ಅದೇಶವನ್ನು ಹೊರಡಿಸಿದೆ. ಇತರ ಪ್ರಕರಣಗಳಲ್ಲಿ ಈ ದೆಹಲಿ ಹೈಕೋರ್ಟ್ ಅದೇಶವನ್ನು ಪರಿಗಣಿಸಬಾರದು.  ಜೂನ್ 8 ರ ದೆಹಲಿ ಹೈಕೋರ್ಟ್ ತೀರ್ಪನ್ನು ಬೇರೆ ಬೇರೆ UAPA ಪ್ರಕರಣಗಳಿಗೆ ಪೂರ್ವನಿದರ್ಶನ ಆದೇಶವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ 3 ಜನ ಆರೋಪಿಗಳಿಗೆ ಜಾಮೀನು ನೀಡಿದ ಬೆನ್ನಲ್ಲೆ ಪ್ರಕರಣದ ಇತರ ಆರೋಪಿಗಳೂ ಜಾಮೀನಿಗಾಗಿ ನ್ಯಾಯಾಲಯದ ಮೋರೆಹೋಗತೊಡಗಿದ್ದಾರೆ. ದೇಶದ ಬೇರೆ ಬೆರೆ ಕಡೆ UAPA ಕಾಯ್ದೆಯಡಿ ಬಂಧಿತರಾಗಿರುವ ಆನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ಆದೇಶ ಕೊನೆಯ ಅಶಾಕಿರಣದಂತೆ ಕಂಡಿತ್ತು. ಅದರೆ ಜೂನ್‌ 18 ರ ಸುಪ್ರೀಂ ಕೋರ್ಟ್ ಆದೇಶ ದೆಹಲಿ ಗಲಭೆಯಲ್ಲಿ ಬಂಧಿತರಾಗಿರುವ ಇತರ ಹೋರಾಟಗಾರರ ಬಿಡುಗಡೆಯ ಕನಸಿಗೆ  ತಡೆಗೋಡೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ  :ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ಮೊದಲನೇಯ ಪ್ರಶ್ನೆ ಕೇಂದ್ರ ಸರ್ಕಾರ ಪ್ರತಿ ಸಂದರ್ಭದಲ್ಲಿಯೂ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದು ಯಾಕೆ? ಕೇಂದ್ರ ಸರ್ಕಾರ ಹೈಕೋರ್ಟ್‌ಗಳನ್ನು ಸಮರ್ಥ ನ್ಯಾಯಾಲಯಗಳೆಂದು ಪರಿಗಣಿಸುತ್ತಿಲ್ಲವೇ? ಹೈಕೋರ್ಟ್‌ಗಳು ಕೂಡ ಸುಪ್ರೀಂ ಕೋರ್ಟ್‌ನಂತೆಯೇ ಸಂವಿಧಾನಾತ್ಮಕ ನ್ಯಾಯಾಲಯವಾಗಿದ್ದು ಹೈಕೋರ್ಟ್ ಆದೇಶಗಳನ್ನು ದೇಶದ ಇತರ ನ್ಯಾಯಾಲಯಗಳೂ ಪರಿಗಣಿಸಬೇಕು. ಒಂದು ಹೈಕೋರ್ಟ್ ಆದೇಶವನ್ನು ಇತರ ಹೈ ಹೈಕೋರ್ಟ್‌ಗಳೂ ಪಾಲಿಸಿದ ಅನೇಕ ನಿದರ್ಶನಗಳಿವೆ. ಬಹುತೇಕವಾಗಿ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ತೀರ್ಪುಗಳನ್ನು ಪರಿಗಣಿಸುತ್ತದೆ ಮತ್ತು ಅಪರೂಪದ ಸಂದರ್ಭದಲ್ಲಿ ಮಾತ್ರ ಹೈಕೋರ್ಟ್ ಆದೇಶಗಳನ್ನು ರದ್ದುಗೊಳಿಸುತ್ತದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ಹೈಕೋರ್ಟ್ ತೀರ್ಪುಗಳನ್ನು ವಿಮರ್ಶಿಸುವುದಿಲ್ಲ ಮತ್ತು ನೇರ ಅಸಮಾಧನಗಳನ್ನು ಹೊರಹಾಕುವುದಿಲ್ಲ. ಇದು ಅನೇಕ ದಶಕಗಳಿಂದ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳು ಪಾಲಿಸಿಕೊಂಡು ಬಂದ ಅಲಿಖಿತ ನಿಯಮ ಮತ್ತು ಉಳಿಸಿಕೊಂಡು ಬಂದ ಸೌಹಾರ್ದಯುತ ಸಂಬಂಧ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತಾನು ಇದುವರೆಗೆ ಪಾಲಿಸಿಕೊಂಡು ಬಂದ ರೂಢಿಯನ್ನು ಮುರಿದಿದೆ.

Unlawful Activities Prevention Act (UAPA) ಕಾನೂನಿನ ಕುರಿತು ಹೈಕೋರ್ಟ್‌ ಅಸಮಾಧಾನವನ್ನು ವ್ಯಕ್ತಪಡಿಸಿರುವುದು ಸಕಾರಣವಾಗಿರುವಾಗ ಸುಪ್ರೀಂ ಕೋರ್ಟ್‌ ಯಾಕೆ ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ತೀರ್ಪನ್ನು ಪಾಲಿಸದಂತೆ ಇತರ ನ್ಯಾಯಾಲಯಗಳಿಗೆ ಹೇಳಿತು ಎಂಬುದು ಸ್ಪಷ್ಟವಾಗಿಲ್ಲ.

ವಿಚಾರಣೆ ವೇಳೆ UAPA ಕಾಯ್ದೆಯಡಿ ಬಂಧಿತರಾಗಿ ಜಾಮೀನು ಪಡೆದಿರುವ 3 ಆರೋಪಿಗಳ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ  ಕಪಿಲ್ ಸಿಬಲ್ ಕೂಡ ಸರ್ವೋಚ್ಛ ನ್ಯಾಯಾಲಯದ ಈ ಆದೇಶಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸದಿರುವುದು ಆಶ್ಚರ್ಯವನ್ನು ಹುಟ್ಟಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ದೆಹಲಿ ಹೈಕೋರ್ಟ್ ತೀರ್ಪಿಗೆ ತಡೆ ಕೋರುವಂತೆ ಹಾಗೂ UAPA ಕಾಯ್ದೆಯ ಕುರಿತಾಗಿ ದೆಹಲಿ ಹೈಕೋರ್ಟ್‌ ಅಭಿಪ್ರಾಯಗಳನ್ನು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ತೀವ್ರವಾಗಿ ಒತ್ತಾಯಿಸುತ್ತಲೇ ಇದ್ದರು.

ಸುಪ್ರೀಂ ಕೋರ್ಟ್ ಜಾಮೀನು ತೀರ್ಪಿಗೆ ತಡೆಯನ್ನು ನೀಡದೇ, ದೆಹಲಿ ಹೈಕೋರ್ಟ್ ಆದೇಶವನ್ನೂ ಸಮರ್ಥಿಸದೇ ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್ ಎರಡರ ನಡುವೆ ಸಮನ್ವಯ ಸಾಧಿಸುವ ಮಧ್ಯಮ ಮಾರ್ಗವನ್ನು ಆಯ್ದುಕೊಂಡಂತೆ ಮೆಲ್ನೋಟಕ್ಕೆ ಕಾಣಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಈಗ ಸುಪ್ರೀಂ ಕೋರ್ಟ್‌ ಆದಷ್ಟು ತ್ವರಿತವಾಗಿ ಕೆಂದ್ರ ಸರ್ಕಾರದ ಮೇಲ್ಮನವಿಯ ವಿಚಾರಣೆಯನ್ನು ಮುಗಿಸಿ ತನ್ನ ನಿಲುವು ಮತ್ತು ತೀರ್ಪನ್ನು ಸ್ಪಷ್ಟಪಡಿಸಬೇಕಿದೆ. ಇಲ್ಲವಾದಲ್ಲಿ ಅತ್ತ ಹೈಕೋರ್ಟ್‌ ಆದೇಶವೂ ಪರಿಗಣಿತವಲ್ಲದೇ ಸುಪ್ರೀಂ ಕೋರ್ಟ್‌ ಅದೇಶ ಹೊರಬಾರದೇ ಒಂದು ರೀತಿಯ ಕಾನೂನಿನ ನಿರ್ವಾತ ಸೃಷ್ಟಿಯಾಗುತ್ತಿದೆ. CAA ಹೋರಾಟದಲ್ಲಿ ಭಾಗವಹಿಸಿ ದೆಹಲಿ ಗಲಭೆಯ ಆರೋಪವನ್ನು ಎದುರಿಸುತ್ತಿರುವ ಅನೇಕ ಹೋರಾಟಗಾರರಿಗೆ ದೆಹಲಿ ಹೈಕೋರ್ಟ್ ತೀರ್ಪು ಜಾಮೀನಿನ ಸಣ್ಣ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಈ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಒಂದು ಸ್ಪಷ್ಟತೆಯನ್ನು ನೀಡಬೇಕಿದೆ. ಅತ್ತ ಹಾವೂ ಸಾಯಬಾರದು ಇತ್ತ ಕೋಲು ಮುರಿಯಬಾರದು ಎಂಬಂತಿರುವ ಸುಪ್ರೀಂ ಕೋರ್ಟ್‌ನ  ಮೊನ್ನೆಯ ಆದೇಶ ದೀರ್ಘ ಕಾಲದಲ್ಲಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬಿರಲಿದೆ. ಹಾಗೂ ಸಂವಿಧಾನಾತ್ಮಕ ನ್ಯಾಯಾಲಯಗಳಾದ ಹೈಕೋರ್ಟ್‌ಗಳ ಸ್ವಾಯತ್ತತೆಯ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರಲಿದೆ.

– ರಾಜೆಶ್ ಹೆಬ್ಬಾರ್


ಇದನ್ನೂ ಓದಿ : ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...